Homeಚಳವಳಿಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು ಎಂದು ವಿದ್ಯಾರ್ಥಿನಿಯೊಬ್ಬಳು ಬರೆದಿದ್ದಳು, ಇದು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಬಿಹಾರದ ದಾನಾಪುರ ವಸತಿ ಶಾಲೆಯಲ್ಲಿ ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ-ಎನ್ನಾರ್ಸಿ ಬಗ್ಗೆ ‘ಪ್ರಚೋದನಕಾರಿ ಮತ್ತು ದೇಶ ವಿರೋಧಿ’ ಪಾಠ ಮಾಡಿದ್ದಾರೆ ಎಂದು ಆರೋಪಿಸಿ ಎರಡು ಸ್ವಯಂಸೇವಕ ಗುಂಪುಗಳ ವಿರುದ್ದ ಪಾಟ್ನಾ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಈ ವಿಷಯದ ಬಗ್ಗೆ ಸುಮೊ ಮೋಟು ಕಾಗ್ನಿಜೆನ್ಸ್ ತೆಗೆದುಕೊಂಡ ನಂತರ ಈ ಪ್ರಕರಣವನ್ನು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಆಯೋಗವು ಫೆಬ್ರವರಿ 15 ಮತ್ತು 25 ರಂದು ದಾನಾಪುರ ವಸತಿ ಶಾಲೆಯಲ್ಲಿ ತಪಾಸಣೆ ನಡೆಸಿತ್ತು.

ಶಿಕ್ಷಣ ಹಕ್ಕು ಕಾಯ್ದೆಯಡಿ ಬಿಹಾರ ಸರ್ಕಾರವು ಈ ಜಾಗವನ್ನು ವ್ಯವಸ್ಥೆಗೊಳಿಸಿದ್ದು, ಎರಡು ಸ್ವಯಂಸೇವಕ ಗುಂಪುಗಳಿಗೆ 6 ರಿಂದ 18 ವರ್ಷದೊಳಗಿನ ಸುಮಾರು 60 ಬೀದಿಬದಿ ವಾಸಿಸುವ ಬಾಲಕಿಯರಿಗೆ ತರಗತಿಗಳನ್ನು ನಡೆಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಬಿಹಾರದ ಡಿಜಿಪಿ ಎಸ್‌ಕೆ ಸಿಂಘಾಲ್‌ಗೆ ಮಕ್ಕಳ ಹಕ್ಕುಗಳ ಆಯೋಗ ಬರೆದಿದ್ದ ಪತ್ರವೊಂದನ್ನು ಅನುಸರಿಸಿ, ಪೊಲೀಸರು ಕಳೆದ ವಾರ ದಾನಾಪುರ ಪೊಲೀಸ್ ಠಾಣೆಯಲ್ಲಿ ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ವಿರುದ್ಧ ಐಪಿಸಿ ನಿಬಂಧನೆಗಳಾದ 124 ಎ (ದೇಶದ್ರೋಹ) ಮತ್ತು 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಮತ್ತು ಜುವೆನೈಲ್ ಜಸ್ಟೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ದಾನಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾನಾಪುರ ಶಾಲೆಯಲ್ಲಿ ನಡೆದ ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. “ಬೀದಿಬದಿ ವಾಸಿಸುವ ಬಾಲಕಿಯರಿಗೆ ಯಾವ ಸಂಸ್ಥೆಗಳು ತರಬೇತಿ ನೀಡುತ್ತವೆ ಎಂಬುದನ್ನು ನಾವು ನಿರ್ಧರಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಬಿಹಾರ ಸರ್ಕಾರವು ಕಟ್ಟಡದ ರೂಪದಲ್ಲಿ ಮೂಲಸೌಕರ್ಯ ಬೆಂಬಲವನ್ನು ಒದಗಿಸಿದರೆ, ಶಾಲೆ ನಡೆಸಲು ನಾಗರಿಕರು ಹಣವನ್ನು ನೀಡುತ್ತಾರೆ. ಎರಡು ಗುಂಪುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ತನ್ನ ಪರಿಶೀಲನೆಯ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಗಳ ಹೋಮ್‌ವರ್ಕ್ ದಾಖಲೆಗಳನ್ನು ಪರಿಶೀಲಿಸಿದ್ದು, ಅವರು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನಾನು ಎನ್‌ಆರ್‌ಸಿಗೆ ವಿರುದ್ಧ. ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು” ಎಂದು ಒಬ್ಬ ವಿದ್ಯಾರ್ಥಿನಿ ಬರೆದಿದ್ದಳು ಎಂದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕನುಂಗೊ ಪಾಟ್ನಾ ಪೊಲೀಸರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅವರು ಎಲ್ಲಾ ಸಂಬಂಧಿತ ಪತ್ರಿಕೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದು, ಇಂತಹ ಪಾಠಗಳು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಎನ್‌ಸಿಪಿಸಿಆರ್ ಮೊದಲ ಬಾರಿಗೆ ಮಾರ್ಚ್ 2 ರಂದು ಪಾಟ್ನಾ ಎಸ್‌ಎಸ್‌ಪಿ ಗರಿಮಾ ಮಲಿಕ್ ಅವರಿಗೆ ಪತ್ರ ಬರೆದು, ‘‘… ಆಯೋಗದ ತಂಡವು ಒಂದು ರಿಜಿಸ್ಟರ್‌ ಅನ್ನು ಕಂಡುಕೊಂಡಿದ್ದು, ಅದರಲ್ಲಿ ‘ಎನ್‌ಆರ್‌ಸಿ, ಸಿಎಎ, ನಿಧಿಸಂಗ್ರಹ ತರಬೇತಿ’ ಅನ್ನು ಕೆಡಿಡಿಸಿ ಮತ್ತು ಅಂಬ್ರೆಲಾ ಫೌಂಡೇಶನ್ ಅವರಿಂದ 20 ಡಿಸೆಂಬರ್ 2019 ರಂದು ನಡೆಸಲಾಯಿತು ಎಂದು ಬರೆಯಲಾಗಿದೆ…2019 ರ ಡಿಸೆಂಬರ್ 26 ರಂದು ಹಿಂದಿಯಲ್ಲಿನ ವಿದ್ಯಾರ್ಥಿಗಳಿಗೆ ಪಾಠವೊಂದು ಹೀಗೆ ಹೇಳಿದೆ:  ‘…ಪ್ರತಿವರ್ಷ ಪ್ರವಾಹ ಅಥವಾ ಇತರ ಕಾರಣಗಳಿಂದಾಗಿ ಹಾನಿಗೊಳಗಾಗುವ ಕೊಳೆಗೇರಿಗಳಲ್ಲಿ ವಾಸಿಸುವವರ ಮೇಲೆ ಸಿಎಎ, ಎನ್ನಾರ್ಸಿ ಪರಿಣಾಮ ಬೀರುತ್ತದೆ. … ಸರ್ಕಾರವು ಸಿಎಎ ತಂದರೆ, ನಾವೆಲ್ಲರೂ ಅದನ್ನು ವಿರೋಧಿಸಬೇಕು’ ಎಂದು ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

ಇದರ ನಂತರ ಮಕ್ಕಳ ಹಕ್ಕುಗಳ ಆಯೋಗವು ಬಿಹಾರ ಡಿಜಿಪಿಗೆ ಪತ್ರ ಬರೆದು, ತರಗತಿಗಳನ್ನು ನಡೆಸಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದೆ.

ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು, “ಎಫ್‌ಐಆರ್‌‌ನಲ್ಲಿ ಯಾವುದೇ ವ್ಯಕ್ತಿಯನ್ನು ಹೆಸರಿಸಲಾಗಿಲ್ಲ. ಪೊಲೀಸ್ ತಂಡಗಳು ಬಂದು ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಚಿಂತಿತರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...