Homeಚಳವಳಿಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು ಎಂದು ವಿದ್ಯಾರ್ಥಿನಿಯೊಬ್ಬಳು ಬರೆದಿದ್ದಳು, ಇದು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಬಿಹಾರದ ದಾನಾಪುರ ವಸತಿ ಶಾಲೆಯಲ್ಲಿ ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ-ಎನ್ನಾರ್ಸಿ ಬಗ್ಗೆ ‘ಪ್ರಚೋದನಕಾರಿ ಮತ್ತು ದೇಶ ವಿರೋಧಿ’ ಪಾಠ ಮಾಡಿದ್ದಾರೆ ಎಂದು ಆರೋಪಿಸಿ ಎರಡು ಸ್ವಯಂಸೇವಕ ಗುಂಪುಗಳ ವಿರುದ್ದ ಪಾಟ್ನಾ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಈ ವಿಷಯದ ಬಗ್ಗೆ ಸುಮೊ ಮೋಟು ಕಾಗ್ನಿಜೆನ್ಸ್ ತೆಗೆದುಕೊಂಡ ನಂತರ ಈ ಪ್ರಕರಣವನ್ನು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಆಯೋಗವು ಫೆಬ್ರವರಿ 15 ಮತ್ತು 25 ರಂದು ದಾನಾಪುರ ವಸತಿ ಶಾಲೆಯಲ್ಲಿ ತಪಾಸಣೆ ನಡೆಸಿತ್ತು.

ಶಿಕ್ಷಣ ಹಕ್ಕು ಕಾಯ್ದೆಯಡಿ ಬಿಹಾರ ಸರ್ಕಾರವು ಈ ಜಾಗವನ್ನು ವ್ಯವಸ್ಥೆಗೊಳಿಸಿದ್ದು, ಎರಡು ಸ್ವಯಂಸೇವಕ ಗುಂಪುಗಳಿಗೆ 6 ರಿಂದ 18 ವರ್ಷದೊಳಗಿನ ಸುಮಾರು 60 ಬೀದಿಬದಿ ವಾಸಿಸುವ ಬಾಲಕಿಯರಿಗೆ ತರಗತಿಗಳನ್ನು ನಡೆಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಬಿಹಾರದ ಡಿಜಿಪಿ ಎಸ್‌ಕೆ ಸಿಂಘಾಲ್‌ಗೆ ಮಕ್ಕಳ ಹಕ್ಕುಗಳ ಆಯೋಗ ಬರೆದಿದ್ದ ಪತ್ರವೊಂದನ್ನು ಅನುಸರಿಸಿ, ಪೊಲೀಸರು ಕಳೆದ ವಾರ ದಾನಾಪುರ ಪೊಲೀಸ್ ಠಾಣೆಯಲ್ಲಿ ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ವಿರುದ್ಧ ಐಪಿಸಿ ನಿಬಂಧನೆಗಳಾದ 124 ಎ (ದೇಶದ್ರೋಹ) ಮತ್ತು 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಮತ್ತು ಜುವೆನೈಲ್ ಜಸ್ಟೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ದಾನಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾನಾಪುರ ಶಾಲೆಯಲ್ಲಿ ನಡೆದ ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. “ಬೀದಿಬದಿ ವಾಸಿಸುವ ಬಾಲಕಿಯರಿಗೆ ಯಾವ ಸಂಸ್ಥೆಗಳು ತರಬೇತಿ ನೀಡುತ್ತವೆ ಎಂಬುದನ್ನು ನಾವು ನಿರ್ಧರಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಬಿಹಾರ ಸರ್ಕಾರವು ಕಟ್ಟಡದ ರೂಪದಲ್ಲಿ ಮೂಲಸೌಕರ್ಯ ಬೆಂಬಲವನ್ನು ಒದಗಿಸಿದರೆ, ಶಾಲೆ ನಡೆಸಲು ನಾಗರಿಕರು ಹಣವನ್ನು ನೀಡುತ್ತಾರೆ. ಎರಡು ಗುಂಪುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ತನ್ನ ಪರಿಶೀಲನೆಯ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಗಳ ಹೋಮ್‌ವರ್ಕ್ ದಾಖಲೆಗಳನ್ನು ಪರಿಶೀಲಿಸಿದ್ದು, ಅವರು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನಾನು ಎನ್‌ಆರ್‌ಸಿಗೆ ವಿರುದ್ಧ. ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು” ಎಂದು ಒಬ್ಬ ವಿದ್ಯಾರ್ಥಿನಿ ಬರೆದಿದ್ದಳು ಎಂದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕನುಂಗೊ ಪಾಟ್ನಾ ಪೊಲೀಸರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅವರು ಎಲ್ಲಾ ಸಂಬಂಧಿತ ಪತ್ರಿಕೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದು, ಇಂತಹ ಪಾಠಗಳು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಎನ್‌ಸಿಪಿಸಿಆರ್ ಮೊದಲ ಬಾರಿಗೆ ಮಾರ್ಚ್ 2 ರಂದು ಪಾಟ್ನಾ ಎಸ್‌ಎಸ್‌ಪಿ ಗರಿಮಾ ಮಲಿಕ್ ಅವರಿಗೆ ಪತ್ರ ಬರೆದು, ‘‘… ಆಯೋಗದ ತಂಡವು ಒಂದು ರಿಜಿಸ್ಟರ್‌ ಅನ್ನು ಕಂಡುಕೊಂಡಿದ್ದು, ಅದರಲ್ಲಿ ‘ಎನ್‌ಆರ್‌ಸಿ, ಸಿಎಎ, ನಿಧಿಸಂಗ್ರಹ ತರಬೇತಿ’ ಅನ್ನು ಕೆಡಿಡಿಸಿ ಮತ್ತು ಅಂಬ್ರೆಲಾ ಫೌಂಡೇಶನ್ ಅವರಿಂದ 20 ಡಿಸೆಂಬರ್ 2019 ರಂದು ನಡೆಸಲಾಯಿತು ಎಂದು ಬರೆಯಲಾಗಿದೆ…2019 ರ ಡಿಸೆಂಬರ್ 26 ರಂದು ಹಿಂದಿಯಲ್ಲಿನ ವಿದ್ಯಾರ್ಥಿಗಳಿಗೆ ಪಾಠವೊಂದು ಹೀಗೆ ಹೇಳಿದೆ:  ‘…ಪ್ರತಿವರ್ಷ ಪ್ರವಾಹ ಅಥವಾ ಇತರ ಕಾರಣಗಳಿಂದಾಗಿ ಹಾನಿಗೊಳಗಾಗುವ ಕೊಳೆಗೇರಿಗಳಲ್ಲಿ ವಾಸಿಸುವವರ ಮೇಲೆ ಸಿಎಎ, ಎನ್ನಾರ್ಸಿ ಪರಿಣಾಮ ಬೀರುತ್ತದೆ. … ಸರ್ಕಾರವು ಸಿಎಎ ತಂದರೆ, ನಾವೆಲ್ಲರೂ ಅದನ್ನು ವಿರೋಧಿಸಬೇಕು’ ಎಂದು ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

ಇದರ ನಂತರ ಮಕ್ಕಳ ಹಕ್ಕುಗಳ ಆಯೋಗವು ಬಿಹಾರ ಡಿಜಿಪಿಗೆ ಪತ್ರ ಬರೆದು, ತರಗತಿಗಳನ್ನು ನಡೆಸಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದೆ.

ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು, “ಎಫ್‌ಐಆರ್‌‌ನಲ್ಲಿ ಯಾವುದೇ ವ್ಯಕ್ತಿಯನ್ನು ಹೆಸರಿಸಲಾಗಿಲ್ಲ. ಪೊಲೀಸ್ ತಂಡಗಳು ಬಂದು ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಚಿಂತಿತರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...