Homeಚಳವಳಿಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು ಎಂದು ವಿದ್ಯಾರ್ಥಿನಿಯೊಬ್ಬಳು ಬರೆದಿದ್ದಳು, ಇದು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಬಿಹಾರದ ದಾನಾಪುರ ವಸತಿ ಶಾಲೆಯಲ್ಲಿ ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ-ಎನ್ನಾರ್ಸಿ ಬಗ್ಗೆ ‘ಪ್ರಚೋದನಕಾರಿ ಮತ್ತು ದೇಶ ವಿರೋಧಿ’ ಪಾಠ ಮಾಡಿದ್ದಾರೆ ಎಂದು ಆರೋಪಿಸಿ ಎರಡು ಸ್ವಯಂಸೇವಕ ಗುಂಪುಗಳ ವಿರುದ್ದ ಪಾಟ್ನಾ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಈ ವಿಷಯದ ಬಗ್ಗೆ ಸುಮೊ ಮೋಟು ಕಾಗ್ನಿಜೆನ್ಸ್ ತೆಗೆದುಕೊಂಡ ನಂತರ ಈ ಪ್ರಕರಣವನ್ನು ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ಆಯೋಗವು ಫೆಬ್ರವರಿ 15 ಮತ್ತು 25 ರಂದು ದಾನಾಪುರ ವಸತಿ ಶಾಲೆಯಲ್ಲಿ ತಪಾಸಣೆ ನಡೆಸಿತ್ತು.

ಶಿಕ್ಷಣ ಹಕ್ಕು ಕಾಯ್ದೆಯಡಿ ಬಿಹಾರ ಸರ್ಕಾರವು ಈ ಜಾಗವನ್ನು ವ್ಯವಸ್ಥೆಗೊಳಿಸಿದ್ದು, ಎರಡು ಸ್ವಯಂಸೇವಕ ಗುಂಪುಗಳಿಗೆ 6 ರಿಂದ 18 ವರ್ಷದೊಳಗಿನ ಸುಮಾರು 60 ಬೀದಿಬದಿ ವಾಸಿಸುವ ಬಾಲಕಿಯರಿಗೆ ತರಗತಿಗಳನ್ನು ನಡೆಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಎನ್‌ಆರ್‌ಸಿ: ಮೋದಿ ಸರಕಾರವನ್ನು ಮಣಿಸಲು ರಾಜ್ಯಗಳಿಗಿರುವ ಮೂರು ಸುಲಭ ಹೆಜ್ಜೆಗಳು

ಬಿಹಾರದ ಡಿಜಿಪಿ ಎಸ್‌ಕೆ ಸಿಂಘಾಲ್‌ಗೆ ಮಕ್ಕಳ ಹಕ್ಕುಗಳ ಆಯೋಗ ಬರೆದಿದ್ದ ಪತ್ರವೊಂದನ್ನು ಅನುಸರಿಸಿ, ಪೊಲೀಸರು ಕಳೆದ ವಾರ ದಾನಾಪುರ ಪೊಲೀಸ್ ಠಾಣೆಯಲ್ಲಿ ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ವಿರುದ್ಧ ಐಪಿಸಿ ನಿಬಂಧನೆಗಳಾದ 124 ಎ (ದೇಶದ್ರೋಹ) ಮತ್ತು 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ) ಮತ್ತು ಜುವೆನೈಲ್ ಜಸ್ಟೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ದಾನಾಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದಾನಾಪುರ ಶಾಲೆಯಲ್ಲಿ ನಡೆದ ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು ಅಂಬ್ರೆಲ್ಲಾ ಫೌಂಡೇಶನ್ ಮತ್ತು ಕೆಡಿಡಿಸಿ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. “ಬೀದಿಬದಿ ವಾಸಿಸುವ ಬಾಲಕಿಯರಿಗೆ ಯಾವ ಸಂಸ್ಥೆಗಳು ತರಬೇತಿ ನೀಡುತ್ತವೆ ಎಂಬುದನ್ನು ನಾವು ನಿರ್ಧರಿಸುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ, ಎನ್‌ಆರ್‌ಸಿ ಅಸಂವಿಧಾನಿಕ: ಸಿಪಿಎಂ ಪಾಲಿಟ್ ಬ್ಯೂರೋ ಸದಸ್ಯ ಎಂ.ಎ.ಬೇಬಿ

ಬಿಹಾರ ಸರ್ಕಾರವು ಕಟ್ಟಡದ ರೂಪದಲ್ಲಿ ಮೂಲಸೌಕರ್ಯ ಬೆಂಬಲವನ್ನು ಒದಗಿಸಿದರೆ, ಶಾಲೆ ನಡೆಸಲು ನಾಗರಿಕರು ಹಣವನ್ನು ನೀಡುತ್ತಾರೆ. ಎರಡು ಗುಂಪುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗವು ತನ್ನ ಪರಿಶೀಲನೆಯ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಗಳ ಹೋಮ್‌ವರ್ಕ್ ದಾಖಲೆಗಳನ್ನು ಪರಿಶೀಲಿಸಿದ್ದು, ಅವರು ಸಿಎಎ ಮತ್ತು ಎನ್‌ಆರ್‌ಸಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

“ನಾನು ಎನ್‌ಆರ್‌ಸಿಗೆ ವಿರುದ್ಧ. ನನಗೆ ಮನೆ ಇಲ್ಲದಿದ್ದರೆ, ನಾನು ಎಲ್ಲಿ ದಾಖಲೆಗಳನ್ನು ಇಡಬಹುದು” ಎಂದು ಒಬ್ಬ ವಿದ್ಯಾರ್ಥಿನಿ ಬರೆದಿದ್ದಳು ಎಂದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕನುಂಗೊ ಪಾಟ್ನಾ ಪೊಲೀಸರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಅವರು ಎಲ್ಲಾ ಸಂಬಂಧಿತ ಪತ್ರಿಕೆಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದ್ದು, ಇಂತಹ ಪಾಠಗಳು ವಿದ್ಯಾರ್ಥಿನಿಯರನ್ನು ನೆಲದ ಕಾನೂನುಗಳಿಗೆ ವಿರುದ್ಧವಾಗಿ ತಿರುಗಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಮರೆಯಾದ ಅಸ್ಸಾಂ ಎನ್‌ಆರ್‌ಸಿ ಡೇಟಾ! : ತಾಂತ್ರಿಕ ತೊಂದರೆಯೆಂದ ಗೃಹ ಸಚಿವಾಲಯ

ಎನ್‌ಸಿಪಿಸಿಆರ್ ಮೊದಲ ಬಾರಿಗೆ ಮಾರ್ಚ್ 2 ರಂದು ಪಾಟ್ನಾ ಎಸ್‌ಎಸ್‌ಪಿ ಗರಿಮಾ ಮಲಿಕ್ ಅವರಿಗೆ ಪತ್ರ ಬರೆದು, ‘‘… ಆಯೋಗದ ತಂಡವು ಒಂದು ರಿಜಿಸ್ಟರ್‌ ಅನ್ನು ಕಂಡುಕೊಂಡಿದ್ದು, ಅದರಲ್ಲಿ ‘ಎನ್‌ಆರ್‌ಸಿ, ಸಿಎಎ, ನಿಧಿಸಂಗ್ರಹ ತರಬೇತಿ’ ಅನ್ನು ಕೆಡಿಡಿಸಿ ಮತ್ತು ಅಂಬ್ರೆಲಾ ಫೌಂಡೇಶನ್ ಅವರಿಂದ 20 ಡಿಸೆಂಬರ್ 2019 ರಂದು ನಡೆಸಲಾಯಿತು ಎಂದು ಬರೆಯಲಾಗಿದೆ…2019 ರ ಡಿಸೆಂಬರ್ 26 ರಂದು ಹಿಂದಿಯಲ್ಲಿನ ವಿದ್ಯಾರ್ಥಿಗಳಿಗೆ ಪಾಠವೊಂದು ಹೀಗೆ ಹೇಳಿದೆ:  ‘…ಪ್ರತಿವರ್ಷ ಪ್ರವಾಹ ಅಥವಾ ಇತರ ಕಾರಣಗಳಿಂದಾಗಿ ಹಾನಿಗೊಳಗಾಗುವ ಕೊಳೆಗೇರಿಗಳಲ್ಲಿ ವಾಸಿಸುವವರ ಮೇಲೆ ಸಿಎಎ, ಎನ್ನಾರ್ಸಿ ಪರಿಣಾಮ ಬೀರುತ್ತದೆ. … ಸರ್ಕಾರವು ಸಿಎಎ ತಂದರೆ, ನಾವೆಲ್ಲರೂ ಅದನ್ನು ವಿರೋಧಿಸಬೇಕು’ ಎಂದು ಬರೆಯಲಾಗಿದೆ” ಎಂದು ತಿಳಿಸಿದ್ದಾರೆ.

ಇದರ ನಂತರ ಮಕ್ಕಳ ಹಕ್ಕುಗಳ ಆಯೋಗವು ಬಿಹಾರ ಡಿಜಿಪಿಗೆ ಪತ್ರ ಬರೆದು, ತರಗತಿಗಳನ್ನು ನಡೆಸಿದ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದೆ.

ತರಗತಿಗಳೊಂದಿಗೆ ಸಂಬಂಧ ಹೊಂದಿರುವ ಸಂತೋಷ್ ಮಹ್ತೋ ಅವರು, “ಎಫ್‌ಐಆರ್‌‌ನಲ್ಲಿ ಯಾವುದೇ ವ್ಯಕ್ತಿಯನ್ನು ಹೆಸರಿಸಲಾಗಿಲ್ಲ. ಪೊಲೀಸ್ ತಂಡಗಳು ಬಂದು ಸಿಬ್ಬಂದಿಯೊಂದಿಗೆ ಮಾತನಾಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಚಿಂತಿತರಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...