Homeಮುಖಪುಟಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹದ ಕುರಿತು ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ (ಜೂನ್ ನಿಂದ ಅಕ್ಟೋಬರ್ ತಿಂಗಳ ನಡುವೆ) ಬಾಲ್ಯ ವಿವಾಹಗಳ ಸಂಖ್ಯೆ 33% ಗಿಂತ ಹೆಚ್ಚಾಗಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲೇ 88% ಬಾಲ್ಯವಿವಾಹಗಳು ನಡೆದಿವೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿ ದಿ ವೈರ್‌ನ ವರದಿ ಮಾಡಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮತ್ತು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಲಾಕ್‌ಡೌನ್ ನಲ್ಲಿ ಬಾಲ್ಯವಿವಾಹಕ್ಕೆ ಒಳಗಾದವರ ಬಗ್ಗೆ ಮಾಹಿತಿ ದೊರೆತಿದೆ. ಆದರೂ ಕೂಡ, 2020 ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ, ರಾಜ್ಯಸಭಾ ಸಂಸದ ಅಮನ್ ಪಟ್ನಾಯಕ್ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದಿದ್ದರು.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಸಚಿವಾಲಯದ ಮುಂದೆ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ನಾಲ್ಕು ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರವನ್ನು ಬಯಸಿತ್ತು..

1. 2020 ರ ಏಪ್ರಿಲ್ 1 ರಿಂದ 2020 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ. 

2. 2019 ರ ಏಪ್ರಿಲ್ 1 ರಿಂದ 2019 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ.

3. ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರವರೆಗೆ ದೊರೆತಿರುವ ಮಾಹಿತಿ ಬಗ್ಗೆ ವಿವರಿಸಿ.

4. 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರ ನಡುವಿನ ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಬಂದಿರುವ ಮಾಹಿತಿಯನ್ನು ರಾಜ್ಯಸಭಾದಲ್ಲಿ ಬಳಸದಿರುವ ಬಗ್ಗೆ ಮಾಹಿತಿ ಕೊರಲಾಗಿತ್ತು.

ಸಚಿವಾಲಯವು ಆರಂಭದಲ್ಲಿ ಈ ಪ್ರಶ್ನೆಗಳಿಗೆ “ಈ ವಿಭಾಗದಲ್ಲಿ ಲಭ್ಯವಿಲ್ಲ” ಎಂದು ಹೇಳಿ, ಮೊದಲ ಮೂರು ಪ್ರಶ್ನೆಗಳನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ಕುತೂಹಲಕಾರಿಯಾಗಿ, ಮೂರನೆಯ ಪ್ರಶ್ನೆ ನಿರ್ದಿಷ್ಟವಾಗಿ ಇರಾನಿ ಮತ್ತು ಸಚಿವಾಲಯಕ್ಕೆ ಸಂಬಂಧಿಸಿದೆ, ಆದರೆ ಸಚಿವಾಲಯ ಅದನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ನಾಲ್ಕನೆಯ ಪ್ರಶ್ನೆಗೆ, ಸಚಿವಾಲಯವು “ಮಕ್ಕಳ ಕಲ್ಯಾಣ ವಿಭಾಗಕ್ಕೆ ಸಂಬಂಧಿಸಿಲ್ಲ” ಎಂದು ಹೇಳಿದೆ.

ಮೇಲ್ಮನವಿಯ ಮೇರೆಗೆ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಅರ್ಜಿ ಕಳುಹಿಸಲಾಗಿತ್ತು. ಇದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೋಡಲ್ ಏಜೆನ್ಸಿಯಾಗಿದ್ದು, ದೇಶಾದ್ಯಂತ ಚಿಲ್ಡ್‌ಲೈನ್ 1098 ಸೇವೆಗಳನ್ನು ಸ್ಥಾಪಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.

ಈ ಘಟಕವು, ಆರ್‌ಟಿಐಗೆ ಪ್ರತಿಕ್ರಿಯೆ ನೀಡಿದ್ದು, ಲಾಕ್‌ಡೌನ್ ತಿಂಗಳುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವುದನ್ನು ತಿಳಿಸಿದೆ.

ಚೈಲ್ಡ್‌ಲೈನ್ 1098 ಒದಗಿಸಿದ ಮಾಹಿತಿಯ ಆಧಾರದ ಮೇಲೆ 5,584 ಬಾಲ್ಯ ವಿವಾಹಗಳನ್ನು ನಿಲ್ಲಿಸಲು ಸಚಿವಾಲಯ ಮಧ್ಯಪ್ರವೇಶಿಸಿದೆ ಎಂದು ಜೂನ್ 2020ರಲ್ಲಿ ಎಎನ್‌ಐ, ಟೈಮ್ಸ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

18,200 ಕ್ಕೂ ಹೆಚ್ಚು ಕರೆಗಳಿಗೆ ಪ್ರತಿಕ್ರಿಯೆಯಾಗಿ, 898 ಬಾಲ್ಯ ವಿವಾಹಗಳನ್ನು  ಸಚಿವಾಲಯ ತಡೆದಿದೆ ಎಂಬುದರ ಬಗ್ಗೆ ಸಚಿವೆ ಸ್ಮೃತಿ ಇರಾನಿ ಸ್ವತಃ ಏಪ್ರಿಲ್‌ನಲ್ಲಿ ಟ್ವೀಟ್ ಮಾಡಿದ್ದರು.

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಸಂಸತ್ತಿನಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವಾಲಯವು  “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದು ಉತ್ತರಿಸಿದೆ. ಜೊತೆಗೆ ಆರ್‌ಟಿಐ ಪ್ರಶ್ನೆಗೂ ನೀಡಿರಯವ ಪ್ರತಿಕ್ರಿಯೆಯೆಂದರೆ, ಲಾಕ್‌ಡೌನ್ ಅವಧಿಯಲ್ಲಿ ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂಬುದಾಗಿದೆ.

ಇತ್ತೀಚೆಗೆ ಪ್ರಕಟವಾದ ಎನ್‌ಎಫ್‌ಎಚ್‌ಎಸ್ (ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ) ಫ್ಯಾಕ್ಟ್‌ಶೀಟ್ ದೇಶದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹಗಳು ಹೆಚ್ಚರುವ ಪ್ರಮಾಣವನ್ನು ತೋರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಸ್ತ್ರೀ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರು 18 ವರ್ಷ ತುಂಬುವ ಮೊದಲೇ ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...