Homeಮುಖಪುಟಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹದ ಕುರಿತು ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂದು ಸಚಿವಾಲಯ ತಿಳಿಸಿದೆ.

- Advertisement -
- Advertisement -

ಲಾಕ್‌ಡೌನ್ ಅವಧಿಯಲ್ಲಿ (ಜೂನ್ ನಿಂದ ಅಕ್ಟೋಬರ್ ತಿಂಗಳ ನಡುವೆ) ಬಾಲ್ಯ ವಿವಾಹಗಳ ಸಂಖ್ಯೆ 33% ಗಿಂತ ಹೆಚ್ಚಾಗಿದೆ. ಅದರಲ್ಲೂ ಆಗಸ್ಟ್ ತಿಂಗಳಲ್ಲೇ 88% ಬಾಲ್ಯವಿವಾಹಗಳು ನಡೆದಿವೆ ಎಂದು ಆರ್‌ಟಿಐ ವರದಿ ಉಲ್ಲೇಖಿಸಿ ದಿ ವೈರ್‌ನ ವರದಿ ಮಾಡಿದೆ.

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಕ್ಕೆ ಮತ್ತು ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಲಾಕ್‌ಡೌನ್ ನಲ್ಲಿ ಬಾಲ್ಯವಿವಾಹಕ್ಕೆ ಒಳಗಾದವರ ಬಗ್ಗೆ ಮಾಹಿತಿ ದೊರೆತಿದೆ. ಆದರೂ ಕೂಡ, 2020 ರ ಸೆಪ್ಟೆಂಬರ್‌ನಲ್ಲಿ ನಡೆದ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ, ರಾಜ್ಯಸಭಾ ಸಂಸದ ಅಮನ್ ಪಟ್ನಾಯಕ್ ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದಿದ್ದರು.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಸಚಿವಾಲಯದ ಮುಂದೆ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ನಾಲ್ಕು ವಿಚಾರಗಳಿಗೆ ಸಂಬಂಧಿಸಿದಂತೆ ಉತ್ತರವನ್ನು ಬಯಸಿತ್ತು..

1. 2020 ರ ಏಪ್ರಿಲ್ 1 ರಿಂದ 2020 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ. 

2. 2019 ರ ಏಪ್ರಿಲ್ 1 ರಿಂದ 2019 ರ ಅಕ್ಟೋಬರ್ 31 ರವರೆಗೆ ಪ್ರತಿ ತಿಂಗಳು ಬಾಲ್ಯವಿವಾಹದ ಘಟನೆಗಳ ಬಗ್ಗೆ ಸಚಿವಾಲಯವು ಸ್ವೀಕರಿಸುವ ರಾಜ್ಯವಾರು ದೂರುಗಳ ಮಾಹಿತಿ.

3. ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರವರೆಗೆ ದೊರೆತಿರುವ ಮಾಹಿತಿ ಬಗ್ಗೆ ವಿವರಿಸಿ.

4. 2020 ರ ಏಪ್ರಿಲ್ 1 ರಿಂದ 2020 ರ ಸೆಪ್ಟೆಂಬರ್ 17 ರ ನಡುವಿನ ಬಾಲ್ಯ ವಿವಾಹಗಳ ಘಟನೆಗಳ ಬಗ್ಗೆ ಬಂದಿರುವ ಮಾಹಿತಿಯನ್ನು ರಾಜ್ಯಸಭಾದಲ್ಲಿ ಬಳಸದಿರುವ ಬಗ್ಗೆ ಮಾಹಿತಿ ಕೊರಲಾಗಿತ್ತು.

ಸಚಿವಾಲಯವು ಆರಂಭದಲ್ಲಿ ಈ ಪ್ರಶ್ನೆಗಳಿಗೆ “ಈ ವಿಭಾಗದಲ್ಲಿ ಲಭ್ಯವಿಲ್ಲ” ಎಂದು ಹೇಳಿ, ಮೊದಲ ಮೂರು ಪ್ರಶ್ನೆಗಳನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ಕುತೂಹಲಕಾರಿಯಾಗಿ, ಮೂರನೆಯ ಪ್ರಶ್ನೆ ನಿರ್ದಿಷ್ಟವಾಗಿ ಇರಾನಿ ಮತ್ತು ಸಚಿವಾಲಯಕ್ಕೆ ಸಂಬಂಧಿಸಿದೆ, ಆದರೆ ಸಚಿವಾಲಯ ಅದನ್ನು ಎನ್‌ಸಿಆರ್‌ಬಿಗೆ ವರ್ಗಾಯಿಸಿತು. ನಾಲ್ಕನೆಯ ಪ್ರಶ್ನೆಗೆ, ಸಚಿವಾಲಯವು “ಮಕ್ಕಳ ಕಲ್ಯಾಣ ವಿಭಾಗಕ್ಕೆ ಸಂಬಂಧಿಸಿಲ್ಲ” ಎಂದು ಹೇಳಿದೆ.

ಮೇಲ್ಮನವಿಯ ಮೇರೆಗೆ, ಚೈಲ್ಡ್‌ಲೈನ್ ಇಂಡಿಯಾ ಫೌಂಡೇಶನ್‌ಗೆ (ಸಿಐಎಫ್) ಅರ್ಜಿ ಕಳುಹಿಸಲಾಗಿತ್ತು. ಇದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ನೋಡಲ್ ಏಜೆನ್ಸಿಯಾಗಿದ್ದು, ದೇಶಾದ್ಯಂತ ಚಿಲ್ಡ್‌ಲೈನ್ 1098 ಸೇವೆಗಳನ್ನು ಸ್ಥಾಪಿಸುವುದು, ನಿರ್ವಹಿಸುವುದು ಮತ್ತು ಮೇಲ್ವಿಚಾರಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ.

ಈ ಘಟಕವು, ಆರ್‌ಟಿಐಗೆ ಪ್ರತಿಕ್ರಿಯೆ ನೀಡಿದ್ದು, ಲಾಕ್‌ಡೌನ್ ತಿಂಗಳುಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರುವುದನ್ನು ತಿಳಿಸಿದೆ.

ಚೈಲ್ಡ್‌ಲೈನ್ 1098 ಒದಗಿಸಿದ ಮಾಹಿತಿಯ ಆಧಾರದ ಮೇಲೆ 5,584 ಬಾಲ್ಯ ವಿವಾಹಗಳನ್ನು ನಿಲ್ಲಿಸಲು ಸಚಿವಾಲಯ ಮಧ್ಯಪ್ರವೇಶಿಸಿದೆ ಎಂದು ಜೂನ್ 2020ರಲ್ಲಿ ಎಎನ್‌ಐ, ಟೈಮ್ಸ್ ಆಫ್ ಇಂಡಿಯಾ ಮತ್ತು ಇತರ ಮಾಧ್ಯಮಗಳು ವರದಿ ಮಾಡಿದ್ದವು.

18,200 ಕ್ಕೂ ಹೆಚ್ಚು ಕರೆಗಳಿಗೆ ಪ್ರತಿಕ್ರಿಯೆಯಾಗಿ, 898 ಬಾಲ್ಯ ವಿವಾಹಗಳನ್ನು  ಸಚಿವಾಲಯ ತಡೆದಿದೆ ಎಂಬುದರ ಬಗ್ಗೆ ಸಚಿವೆ ಸ್ಮೃತಿ ಇರಾನಿ ಸ್ವತಃ ಏಪ್ರಿಲ್‌ನಲ್ಲಿ ಟ್ವೀಟ್ ಮಾಡಿದ್ದರು.

ಆದರೆ, ಕುತೂಹಲಕಾರಿ ಸಂಗತಿಯೆಂದರೆ, ಸಂಸತ್ತಿನಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಸಚಿವಾಲಯವು  “ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಯಿಂದ ಪಡೆದ ಮಾಹಿತಿಯ ಪ್ರಕಾರ, ಲಾಕ್‌ಡೌನ್ ಅವಧಿಯಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹ ಪ್ರಕರಣಗಳನ್ನು ಸೂಚಿಸಲು ಯಾವುದೇ ಮಾಹಿತಿಯಿಲ್ಲ” ಎಂದು ಉತ್ತರಿಸಿದೆ. ಜೊತೆಗೆ ಆರ್‌ಟಿಐ ಪ್ರಶ್ನೆಗೂ ನೀಡಿರಯವ ಪ್ರತಿಕ್ರಿಯೆಯೆಂದರೆ, ಲಾಕ್‌ಡೌನ್ ಅವಧಿಯಲ್ಲಿ ಸಂಗ್ರಹಿಸಿದ ಡೇಟಾವನ್ನು ಎನ್‌ಸಿಆರ್‌ಬಿ ಹೊಂದಿಲ್ಲ ಮತ್ತು ಅದು ಲಭ್ಯವಿಲ್ಲ ಎಂಬುದಾಗಿದೆ.

ಇತ್ತೀಚೆಗೆ ಪ್ರಕಟವಾದ ಎನ್‌ಎಫ್‌ಎಚ್‌ಎಸ್ (ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ) ಫ್ಯಾಕ್ಟ್‌ಶೀಟ್ ದೇಶದ ವಿವಿಧ ಭಾಗಗಳಲ್ಲಿ ಬಾಲ್ಯವಿವಾಹಗಳು ಹೆಚ್ಚರುವ ಪ್ರಮಾಣವನ್ನು ತೋರಿಸುತ್ತದೆ. ಕೆಲವು ರಾಜ್ಯಗಳಲ್ಲಿ, ಸ್ತ್ರೀ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರು 18 ವರ್ಷ ತುಂಬುವ ಮೊದಲೇ ಬಾಲ್ಯವಿವಾಹಕ್ಕೆ ಒಳಗಾಗಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...