Homeಕರ್ನಾಟಕಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌‌ ಆಕ್ರೋಶ

ಕೊರೊನಾ ರಾತ್ರಿ ವೇಳೆ ಮಾತ್ರ ಹರಡುತ್ತದೆ ಎಂದು ಯಾವ ವಿಜ್ಞಾನಿ ಹೇಳಿದ: ಡಿ.ಕೆ. ಶಿವಕುಮಾರ್‌‌ ಆಕ್ರೋಶ

- Advertisement -
- Advertisement -

‘ಕೊರೊನಾ ಸೋಂಕು ರಾತ್ರಿ ಹೊತ್ತು ಮಾತ್ರ ಹರಡುತ್ತದೆಯೇ? ಹಗಲಲ್ಲಿ ಹರಡುವುದಿಲ್ಲವೇ? ಸರ್ಕಾರದ ನೈಟ್ ಕರ್ಫ್ಯು ನಿರ್ಧಾರ ಅವೈಜ್ಞಾನಿಕ’ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಳಗಾವಿಯಲ್ಲಿ ಶನಿವಾರ ತಿಳಿಸಿದ್ದಾರೆ. ಬಸವಕಲ್ಯಾಣದಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರು ಅಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದರು.

“ಕೊರೊನಾ ಸೋಂಕು ಹಗಲು ವೇಳೆ ಹರಡುವುದಿಲ್ಲ ರಾತ್ರಿ ಮಾತ್ರ ಹರಡುತ್ತದೆ ಅಂತಾ ಅದ್ಯಾವ ವಿಜ್ಞಾನಿ ಹೇಳಿದ ಎಂದು ನಮಗೂ ಹೇಳಿದರೆ ನಾವು ಅವರ ಫೋಟೋ ಹಾಕೊಂಡು ಇಟ್ಟುಕೊಳ್ಳುತ್ತೇವೆ. ರಾತ್ರಿವೇಳೆ ಎಲ್ಲಿ ಜನ ಸೇರುತ್ತಾರೆ? ರಾತ್ರಿ ವೇಳೆ ಜನ ಕಡಿಮೆ ಆಗುತ್ತಾರೆ. ಈ ಸಮಯದಲ್ಲಿ ಕರ್ಫ್ಯೂ ಹೇರಿ ಆರ್ಥಿಕತೆಯನ್ನು ಹಾಳು ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ರನ್ನು‌ ವಶಕ್ಕೆ ಪಡೆದ ಪೊಲೀಸರು

“ಸರ್ಕಾರ ಜನರನ್ನು ಮಾನಸಿಕವಾಗಿ ಕುಗ್ಗಿಸುತ್ತಿದ್ದಾರೆ. ರಾತ್ರಿ ವೇಳೆ ಓಡಾಡುವ ರೈಲು, ವಿಮಾನ ನಿಲ್ಲಿಸುತ್ತೀರಾ? ಇದೆಲ್ಲವೂ ಅವೈಜ್ಞಾನಿಕ. ಇದು ಯಾವ ಸಂದೇಶ ಅಂತಾ ನೀವು ಸರ್ಕಾರವನ್ನು ಕೇಳಬೇಕು. ಇದೇ ಕಾರಣಕ್ಕೆ ಈ ಸರ್ಕಾರವನ್ನು ಜನ ಕಿತ್ತು ಹಾಕಬೇಕು. ಮೂರು ಉಪಚುನಾವಣೆಯಲ್ಲಿ ಇವರ ವಿರುದ್ಧ ಮತ ಹಾಕಬೇಕು ಆಗ ಇವರಿಗೆ ಬುದ್ಧಿ ಬರುತ್ತದೆ” ಎಂದು ಅವರು ಹೇಳಿದ್ದಾರೆ.

ನಂತರ ಸಾರಿಗೆ ನೌಕರರ ಸಂಘದ ಗೌರವಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಅವರ ಬಂಧನಕ್ಕೆ ವಿರೋಧ ವ್ಯಕ್ತಪಡಿಸಿದ ಅವರು, “ಇದು ಪ್ರಜಾಪ್ರಭುತ್ವ, ರೈತ ಮುಖಂಡರಿರಲಿ, ಕಾರ್ಮಿಕ ಮುಖಂಡರಿರಲಿ ಅವರ ಪ್ರತಿಭಟನೆ ಹತ್ತಿಕ್ಕಲು ಕಾನೂನು ದುರ್ಬಳಕೆ ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

“ನಾವು ರಾಜಕೀಯದವರು ನಾವು ಸಭೆ ಮಾಡುತ್ತಿದ್ದೇವೆ. ಇದು ಕೂಡ ಸರ್ಕಾರದ ವಿರುದ್ಧದ ಪ್ರತಿಭಟನೆಯೆ. ಅವರನ್ನು ಹೊಗಳುವುದು ಸಭೆ, ಬೈದರೇ ಕೆಟ್ಟದ್ದಾ? ಅವರು ಮಾಡಿರುವ ತಪ್ಪನ್ನು ವಿರೋಧಿಸುತ್ತೇವೆ. ಈ ಸಂಘಟನೆಗಳು ಅವರ ಕಷ್ಟಗಳನ್ನು ಹೇಳಿಕೊಂಡು ಚರ್ಚೆ ಮಾಡುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ನೀಡಲಾಗಿರುವ ಹಕ್ಕನ್ನು ಮೊಟಕು ಮಾಡುತ್ತಿರುವುದು ಸರಿಯಲ್ಲ. ನಾನು ಇದನ್ನು ಖಂಡಿಸುತ್ತೇನೆ” ಎಂದು ಖಂಡನೆ ವ್ಯಕ್ತಪಡಿಸಿದರು.

“ಸರ್ಕಾರವೇ ನೌಕರರ ಬಳಿ ಹೋಗಿ ಮಾತನಾಡಲಿ. ಅಥವಾ ಅವರನ್ನು ಕರೆಸಿಕೊಂಡು ಮಾತನಾಡಲಿ. ಅದನ್ನು ಬಿಟ್ಟು ಅವರನ್ನು ಬಂಧಿಸುವುದು ಸರಿಯಲ್ಲ. ದೆಹಲಿಯಲ್ಲಿ ನಡೆಯುತ್ತಿರುವ ರೀತಿಯಲ್ಲೇ ಇಲ್ಲೂ ಪ್ರತಿಭಟನೆ ಮಾಡಲಿ ಅಂತಾ ಈ ರೀತಿ ಮಾಡುತ್ತಿದ್ದಾರೆ. ಇದು ಹೆಚ್ಚು ದಿನ ಉಳಿಯಲ್ಲ. ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಪ್ರತಿಭಟನೆ ಹತ್ತಿಕ್ಕುತ್ತಿರುವುದಕ್ಕೆ ನಾವು ಯಾವ ದರ್ಬಾರ್ ಎಂದು ಕರೆಯೋಣ. ಇದಕ್ಕೆ ಹೊಸ ಪದ ಹುಡುಕಿಕೊಡಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದಿಲ್ಲಿಯಲ್ಲೊಬ್ಬ ಪಾಳೆಯಗಾರ, ಕರ್ನಾಟಕದಲ್ಲೊಬ್ಬ ಮಾಂಡಲಿಕ; ಭಲೇ ಜೋಡಿ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...