Homeಕರ್ನಾಟಕಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -
- Advertisement -

ಕಳೆದ 10 ವರ್ಷಗಳಿಂದ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿದ್ದ, ಕನ್ನಡಕ್ಕಾಗಿ ಗ್ರಂಥಾಲಯವನ್ನು ಕಟ್ಟಿದ್ದ ಮೈಸೂರಿನ ರಾಜೀವ್‌ ನಗರದ ಸೈಯದ್ ಇಸಾಕ್ ಎಂಬುವವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದಾರೆ. ಕೂಲಿ ಕಾರ್ಮಿಕರಾಗಿದ್ದ ಸೈಯದ್ ಇಸಾಕ್ ಅವರ ಗ್ರಂಥಾಲಯದಲ್ಲಿ 11 ಸಾವಿರ ಪುಸ್ತಕಗಳಿದ್ದು, ಎಲ್ಲವೂ ಬೆಂಕಿಗಾಹುತಿಯಾಗಿವೆ.

ಕನ್ನಡದ ಮೇಲಿನ ಪ್ರೀತಿಯಿಂದಾಗಿ ಕಳೆದ 10 ವರ್ಷಗಳಿಂದ ಪುಸ್ತಕಗಳನ್ನು ಸಂಗ್ರಹಿಸಿ ಕನ್ನಡ ಸಾರ್ವಜನಿಕ ಗ್ರಂಥಾಲಯ ಆರಂಭಿಸಿದ್ದರು. ಇದರಿಂದ ರಾಜೀವ್ ನಗರ ಮತ್ತು ಶಾಂತಿ ನಗರದ ನಿವಾಸಿಗಳಲ್ಲಿ ಜನಪ್ರಿಯ ಮುಖವಾಗಿದ್ದರು. ಇದನ್ನು ಸಹಿಸದ ಕೆಲವರು ಅನೇಕ ಬಾರಿ ಗಲಾಟೆ ಮಾಡಿದ್ದರು. ಈಗ ಶುಕ್ರವಾರ ಬೆಳಗಿನ ಜಾವದಲ್ಲಿ ಗ್ರಂಥಾಲಯಕ್ಕೆ ಬೆಂಕಿ ಹಚ್ಚಿದ್ದಾರೆ.

ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯದಲ್ಲಿ 3 ಸಾವಿರ ಕನ್ನಡ ಪುಸ್ತಕಗಳು, ಭಗವದ್ ಗೀತೆಯ 3 ಸಾವಿರ ಪ್ರತಿಗಳು, 3 ಸಾವಿರ ಕುರಾನ್ ಪ್ರತಿಗಳು, 1 ಸಾವಿರ ಉರ್ದು ಪುಸ್ತಕಗಳು ಹಾಗೂ ಬೈಬಲ್‌ನ 1 ಸಾವಿರ ಕನ್ನಡ ಪ್ರತಿಗಳು ಇದ್ದವು. ಇವುಗಳಲ್ಲಿ ಬಹಳಷ್ಟು ದಾನಿಗಳಿಂದ ಸಂಗ್ರಹಿಸಿದ್ದು ಎಂದು ಸೈಯದ್ ಇಸಾಕ್ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ಶಿಕ್ಷಣದಿಂದ ವಂಚಿತರಾಗಿದ್ದ ಸೈಯದ್ ಇಸಾಕ್, ಅಂಡರ್ ಗ್ರೌಂಡ್ ಡ್ರೈನೇಜ್ (ಯುಜಿಡಿ) ಕ್ಲೀನರ್ ಆಗಿ ಕೆಲಸ ಮಾಡುತ್ತಾರೆ. ಜನರಲ್ಲಿ ಓದುವ ಹವ್ಯಾಸವನ್ನು ಬೆಳೆಸಲು ಮತ್ತು ಕನ್ನಡ ಕಲಿಯಲು ಪ್ರೋತ್ಸಾಹಿಸುವ ಉದ್ದೇಶದಿಂದ, ಈ ಸಾರ್ವಜನಿಕ ಗ್ರಂಥಾಲಯವನ್ನು ಆರಂಭಿಸಿದ್ದರು.

ಅಮ್ಮರ್ ಮಸೀದಿ ಬಳಿಯ ರಾಜೀವ್ ನಗರದ ಎರಡನೇ ಹಂತದ ಕಾರ್ಪೊರೇಷನ್ ಪಾರ್ಕ್ ಒಳಗೆ ಶೆಡ್ ಹಾಕಿ ಸ್ಥಾಪಿಸಿದ್ದರು. ಪ್ರತಿದಿನ, 100-150 ಕ್ಕೂ ಹೆಚ್ಚು ಜನರು ಅವರ ಗ್ರಂಥಾಲಯಕ್ಕೆ ಭೇಟಿ ನೀಡುತ್ತಿದ್ದರು. ಕನ್ನಡ, ಇಂಗ್ಲಿಷ್, ಉರ್ದು ಮತ್ತು ತಮಿಳು ಸೇರಿದಂತೆ 17 ಕ್ಕೂ ಹೆಚ್ಚು ಪತ್ರಿಕೆಗಳನ್ನು ಇಸಾಕ್ ಖರೀದಿಸುತ್ತಿದ್ದರು.

“ಬೆಳಿಗ್ಗೆ 4 ಗಂಟೆಗೆ, ಗ್ರಂಥಾಲಯದ ಪಕ್ಕದಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರು ಒಳಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನನಗೆ ಮಾಹಿತಿ ನೀಡಿದರು. ನಾನು ಗ್ರಂಥಾಲಯಕ್ಕೆ ಧಾವಿಸಿ, ಬೆಂಕಿ ಆರಿಸಲು ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. ಪುಸ್ತಕಗಳು ಬೂದಿಯಾಗುವುದನ್ನು ನೋಡಿದೆ. ”ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಘಟನೆಯ ನಂತರ, ಸೈಯದ್ ಇಸಾಕ್ ಉದಯಗಿರಿ ಪೊಲೀಸ್ ಠಾಣೆಯಲ್ಲಿ, ದುಷ್ಕರ್ಮಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ ಸೆಕ್ಷನ್ 436 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ಅಪರಾಧಿಗಳನ್ನು ಬಂಧಿಸಲು ತನಿಖೆ ಆರಂಭಿಸಿದ್ದಾರೆ.

ಘಟನೆಯಿಂದ ನೊಂದಿದ್ದರು ಕೂಡ ಮತ್ತೆ ಗ್ರಂಥಾಲಯವನ್ನು ಕಟ್ಟುತ್ತೇನೆ ಎಂದಿದ್ದಾರೆ. ಇಸಾಕ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, “ಮೈಸೂರಿನ ಅಕ್ಷರ ಪ್ರೇಮಿ ಸೈಯದ್ ಇಸಾಕ್ ಅವರು ಕಷ್ಟಪಟ್ಟು ಕಟ್ಟಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯವನ್ನು ಸುಟ್ಟುಹಾಕಿರುವುದು ಹೇಯಕೃತ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಅಕ್ಷರವಿರೋಧಿ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಲು ಕ್ರಮ ಕೈಗೊಳ್ಳುವದರ ಜೊತೆಗೆ ಸೈಯದ್ ಅವರಿಗೆ ಸೂಕ್ತ ಪರಿಹಾರವನ್ನೂ ನೀಡಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...