Homeಕರೋನಾ ತಲ್ಲಣ‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

‘ಟಿಕಾ ಉತ್ಸವ’ ಕ್ಕೆ ನಾಲ್ಕು ವಿನಂತಿ ಎಂದ ಪ್ರಧಾನಿ; ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

- Advertisement -
- Advertisement -

ಕೊರೊನಾ ವಿರುದ್ಧ ಗರಿಷ್ಠ ಸಂಖ್ಯೆಯ ಅರ್ಹ ಜನರಿಗೆ ಚುಚ್ಚುಮದ್ದು ಮಾಡುವ ಗುರಿಯನ್ನು ಹೊಂದಿರುವ ಟಿಕಾ ಉತ್ಸವ ಅಥವಾ ಲಸಿಕಾ ಉತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವಿಟರ್‌ನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಆದರೆ ಕೊರೊನಾವು ದೇಶದಾದ್ಯಂತ ಹೆಚ್ಚುತ್ತಿರಬೇಕಾದರೆ ‘ಹಬ್ಬ’ ಆಚರಿಸುವಂತೆ ಪ್ರಧಾನಿ ಕರೆ ನೀಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ.

ಲಸಿಕಾ ಉತ್ಸವ ಆಚರಣೆಯ ಬಗ್ಗೆ ಪ್ರಧಾನಿ ಈ ಹಿಂದೆಯೆ ಹೇಳಿದ್ದರು, ಆದರೆ ಇಂದು ಟ್ವಿಟರ್‌ನಲ್ಲಿ ನಾಲ್ಕು ವಿನಂತಿಗಳನ್ನೂ ಮಾಡಿದ್ದಾರೆ. ಅವರು, “ಇಂದು, ನಾವು ದೇಶಾದ್ಯಂತ ಟಿಕಾ ಉತ್ಸವವನ್ನು ಪ್ರಾರಂಭಿಸುತ್ತಿದ್ದೇವೆ. ಕೊರೊನಾ ವಿರುದ್ಧದ ಈ ಸುತ್ತಿನ ಹೋರಾಟದಲ್ಲಿ, ನನಗೆ ನಾಲ್ಕು ವಿನಂತಿಗಳಿವೆ …” ಎಂದು ಹೇಳಿದ್ದಾರೆ. ಅವರು ತಮ್ಮ ವಿನಂತಿಗಳ ಪಟ್ಟಿಯ ಲಿಂಕ್‌ ಅನ್ನು ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ಹಿನ್ನೆಲೆ ರೈತ ಹೋರಾಟ ಮುಂದೂಡಿ, ಮಾತುಕತೆಗೆ ಬನ್ನಿ ಎಂದ ಕೃಷಿ ಸಚಿವ

ಅವರು ಹಂಚಿಕೊಂಡಿರುವ ಲಿಂಕ್‌ನಲ್ಲಿ ಅವರ ವಿನಂತಿಗಳಿಗೆ.

ಅದರಲ್ಲಿ ಮೊದಲನೆಯದಾಗಿ, ಪ್ರತಿಯೊಬ್ಬರೂ ವ್ಯಾಕ್ಸಿನೇಟ್ ಮಾಡಿಕೊಳ್ಳಿ – ಅನಕ್ಷರಸ್ಥರು ಮತ್ತು ವೃದ್ಧರಂತಹ ಜನರಿಗೆ ವ್ಯಾಕ್ಸಿನೇಷನ್‌ಗೆ ತೆರಳಲು ಸಹಾಯ ಮಾಡಿ.

ಎರಡನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಆರೈಕೆ ಮಾಡಿ – ಅಂದರೆ ಕೊರೊನಾ ಚಿಕಿತ್ಸೆ ಪಡೆಯಲು ಸಂಪನ್ಮೂಲ ಇಲ್ಲದ, ಜ್ಞಾನವಿಲ್ಲದ ಜನರಿಗೆ ಸಹಾಯ ಮಾಡಿ.

ಮೂರನೆಯದಾಗಿ, ಪ್ರತಿಯೊಬ್ಬರೂ ಇನ್ನೊಬ್ಬರನ್ನು ಉಳಿಸಿ – ಅಂದರೆ ತಾನು ಮಾಸ್ಕ್‌ ಧರಿಸಿ, ತನ್ನೊಂದಿಗೆ ಇತರರನ್ನು ಉಳಿಸಿ.

ಅಂತಿಮವಾಗಿ, ಸಮಾಜ ಮತ್ತು ಜನರು ‘ಸೂಕ್ಷ್ಮ ಧಾರಕ ವಲಯಗಳನ್ನು’ ರಚಿಸುವಲ್ಲಿ ಮುಂದಾಗಬೇಕು. ಒಂದೇ ಒಂದು ಕೊರೊನಾ ಪ್ರಕರಣ ವರದಿಯಾದ ಸಂದರ್ಭದಲ್ಲಿ ಕುಟುಂಬ ಸದಸ್ಯರು ಮತ್ತು ಸಮುದಾಯದ ಸದಸ್ಯರು ‘ಮೈಕ್ರೋ ಕಂಟೈನ್‌ಮೆಂಟ್ ವಲಯ’ ರಚಿಸಬೇಕು. ಭಾರತದಂತಹ ಜನನಿಬಿಡ ದೇಶದಲ್ಲಿ ಕೊರೊನಾ ವಿರುದ್ಧದ ಹೋರಾಟದ ಪ್ರಮುಖ ಅಂಶವೆಂದರೆ ‘ಮೈಕ್ರೋ ಕಂಟೈನ್‌ಮೆಂಟ್ ವಲಯಗಳು’ ಎಂದು ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

“ಈ ಟೀಕಾ ಉತ್ಸವವು ಕೊರೊನಾ ವಿರುದ್ಧದ ಎರಡನೇ ದೊಡ್ಡ ಹೋರಾಟದ ಪ್ರಾರಂಭವಾಗಿದೆ. ವೈಯಕ್ತಿಕ ನೈರ್ಮಲ್ಯ ಮತ್ತು ಸಾಮಾಜಿಕ ನೈರ್ಮಲ್ಯಕ್ಕೆ ನಾವು ವಿಶೇಷ ಒತ್ತು ನೀಡಬೇಕಾಗಿದೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಆದರೆ ಪ್ರಧಾನಿ ಕರೆ ನೀಡಿರುವ ‘ಉತ್ಸವ’ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ. ದೇಶದಾದ್ಯಂತ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿದೆ. ಸೋಂಕಿನಿಂದಾಗಿ ಸಾವು ನೋವುಗಳು ಕೂಡಾ ಹೆಚ್ಚುತ್ತಿದೆ. ಈ ಹೊತ್ತಿನಲ್ಲಿ ಪ್ರಧಾನಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ಅಷ್ಟೆ ಅಲ್ಲದೆ ಲಸಿಕೆ ಉತ್ಸವಕ್ಕೆ ಕರೆ ನೀಡಲಾಗಿದೆಯಾದರೂ, ಪಂಜಾಬ್, ಮಹಾರಾಷ್ಟ್ರ, ಒರಿಸ್ಸಾ, ಬಿಹಾರ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ನೆನಪಿಸಿದೆ. ಆದರೆ ಪ್ರಧಾನಿ ಇದರ ಬಗ್ಗೆ ಗಮನ ಹರಿಸದೆ ಲಸಿಕೆ ಕೊರತೆಯ ಸಮಯದಲ್ಲಿ ‘ಉತ್ಸವ’ ಆಚರಿಸಲು ಕರೆ ನೀಡಿರುವುದು ಕೂಡಾ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೇಶದಾದ್ಯಂತ ಕೊರೊನಾ ಸಮಸ್ಯೆಗಳು ಹೆಚ್ಚುತ್ತಿರಬೇಕಾದರೆ ಪ್ರಧಾನಿಯು ‘ಉತ್ಸವ’ಕ್ಕೆ ಕರೆ ನೀಡಿರುವುದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಲಸಿಕೆ ಉತ್ಸವಕ್ಕೆ ಪ್ರಧಾನಿ ಕರೆ: ಲಸಿಕೆ ಕೊರತೆ ಗಂಭೀರ ವಿಚಾರ, ಉತ್ಸವ ಅಲ್ಲ ಎಂದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...