Homeಮುಖಪುಟಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ FIR: ವಿಪಕ್ಷಗಳ ಖಂಡನೆ

ಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆ ಎಂದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ FIR: ವಿಪಕ್ಷಗಳ ಖಂಡನೆ

- Advertisement -
- Advertisement -

ʼಹರಿಯಾಣದ ಹಿಸಾರ್‌ನಲ್ಲಿ ಜಾತಿ ಆಧಾರಿತ ಹಿಂಸಾಚಾರ ಹೆಚ್ಚಾಗುತ್ತಿದೆʼ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ ಪತ್ರಕರ್ತನ ಮೇಲೆ ಸೈಬರ್‌ ಭಯೋತ್ಪಾದನೆ ಮತ್ತು ಸಮುದಾಯಗಳ ನಡುವೆ ದ್ವೇಷ ಬಿತ್ತುವ ಪ್ರಚೋದನೆ ಆರೋಪದಲ್ಲಿ ದೂರು ದಾಖಲಾಗಿದೆ.

ಹರಿಯಾಣದಲ್ಲಿ ಸ್ಥಳೀಯ ವೆಬ್‌ಸೈಟ್‌ ನಡೆಸುತ್ತಿರುವ ರಾಜೇಶ್‌ ಕುಂದು ಎಂಬ ಪತ್ರಕರ್ತನ ಮೇಲೆ ಸಾಮಾಜಿಕ ಜಾಲತಾಣದ ಪೋಸ್ಟ್‌ ಆಧಾರದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಹಿಸಾರ್‌ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ ಎಂದು ದಿವೈರ್‌ ವರದಿ ಮಾಡಿದೆ.

“ಈ ಒಂದು ವಾರದಲ್ಲಿ ಹಿಸಾರ್‌ ಜಾತಿ ಆಧಾರಿತ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಇದೇ ಮಾದರಿಯಲ್ಲಿ ಇಡೀ ರಾಜ್ಯದಲ್ಲಿ ಮತ್ತು ದೇಶದಲ್ಲಿ ಹಿಂಸಾಚಾರ ನಡೆಸಲು ಇದು ಬ್ಲೂ ಪ್ರಿಂಟ್‌ ಆಗಿದೆ” ಎಂದು ರಾಜೇಶ್‌ ಕುಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಸಾರ್ವಜನಿಕರನ್ನು ಪ್ರಚೋದಿಸುವಂತಹ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಿಗೆ ಮತ್ತು ಫೇಸ್‌ಬುಕ್ ಮೂಲಕ ರಾಜೇಶ್ ಕುಂದು ಅವರ ಮೊಬೈಲ್ ಫೋನ್ ಸಂಖ್ಯೆಯಿಂದ ಕಳುಹಿಸಲಾಗಿದೆ ಮತ್ತು ಇದು ಶಾಂತಿಯನ್ನು ಕಾಪಾಡುವಲ್ಲಿ ಪರಿಣಾಮ ಬೀರುತ್ತದೆ, ಆದ್ದರಿಂದ ಆತನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಪೊಲೀಸ್ ವಕ್ತಾರ ವಿಕಾಸ್ ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಏಪ್ರಿಲ್‌ 09 ರಂದು ಐಪಿಸಿಯ 153 ಎ (ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), ಐಪಿಸಿಯ 153 ಬಿ (ಪ್ರಚೋದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ) ಮತ್ತು ಐಟಿ ಕಾಯ್ದೆಯ 66 ಎಫ್ (ಸೈಬರ್-ಭಯೋತ್ಪಾದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜೇಶ್ ಕುಂದು ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದನ್ನು ಕಾಂಗ್ರೆಸ್‌ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಕುಮಾರಿ ಸೆಲ್ಜಾ, ಕಾಂಗ್ರೆಸ್ ನ ದೀಪಂದರ್ ಸಿಂಗ್ ಹೂಡಾ ಮತ್ತು ಐಎನ್ಎಲ್‌ಡಿಯ ಅಭಯ್ ಸಿಂಗ್ ಚೌತಲಾ ಸೇರಿದಂತೆ ಪ್ರತಿಪಕ್ಷ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ರಾಜೇಶ್‌ ಕುಂದು ಬೆಂಬಲಿಸಿದ್ದರು. ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ರೈತ ಹೋರಾಟದ ಬಗ್ಗೆ ಬರೆಯುತ್ತಿದ್ದರು ಮತ್ತು ತಮ್ಮ ವೆಬ್‌ಸೈಟ್‌ನಲ್ಲಿ ಈ ಕುರಿತು ಸರಣಿ ಲೇಖನಗಳನ್ನು ಪ್ರಕಟಿಸುತ್ತಿದ್ದರು. ಹಾಗಾಗಿ ಅವರನ್ನು ಗುರಿಯಾಗಿಸಿ ಈ ಸುಳ್ಳು ದೂರು ದಾಖಲಿಸಲಾಗಿದೆ ಎಂದು  ಹರಿಯಾಣದ ಪ್ರತಿಪಕ್ಷಗಳು ಆರೋಪಿಸಿವೆ.

“ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತ ಆಂದೋಲನವನ್ನು ಸರ್ಕಾರ ಮುರಿಯಲು ಸಾಧ್ಯವಾಗದಿದ್ದಾಗ, ಅದು ಪತ್ರಕರ್ತ ರಾಜೇಶ್ ಕುಂದು ವಿರುದ್ಧ ಎಫ್ಐಆರ್ ದಾಖಲಿಸಿದೆ. ಅವರು ರೈತರ ಧ್ವನಿಯಾಗಿದ್ದಾರೆ. ಈ ಧ್ವನಿಯನ್ನು ನಿಗ್ರಹಿಸಲು ಅಥವಾ ರೈತರ ಆಂದೋಲನವನ್ನು ದಮನಿಸಲು ಕೇಂದ್ರದಿಂದ ಸಾಧ್ಯವಿಲ್ಲ” ಎಂದು ರಣದೀಪ್‌ ಸಿಂಗ್ ಸುರ್ಜೇವಲಾ ಟ್ವೀಟ್‌ ಮಾಡಿದ್ದಾರೆ.

ಹಿಸಾರ್‌ನಲ್ಲಿನ ಪತ್ರಕರ್ತರು ತುರ್ತು ಸಭೆ ನಡೆಸಿದ್ದು, ರಾಜೇಶ್‌ ಕುಂದು ಪರ ಐಕ್ಯಮತ್ಯ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಎಫ್‌ಐಆರ್‌ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಪತ್ರಕರ್ತನ ಮೇಲಿನ ದೂರನ್ನು ಚಂಡೀಗಢ ಪ್ರೆಸ್ ಕ್ಲಬ್ ಖಂಡಿಸಿದೆ.

“ರಾಜೇಶ್ ಕುಂದು ಅವರು ಜವಾಬ್ದಾರಿಯುತ ಪ್ರಜೆಯಾಗಿ ಮತ್ತು ಪತ್ರಕರ್ತರಾಗಿ ತಮ್ಮ ವಿಶ್ವಾಸಾರ್ಹ ಮೂಲಗಳ ಮೂಲಕ ಪಡೆದ ಮಾಹಿತಿಯ ಆಧಾರದ ಮೇಲೆ ಹಿಂಸಾಚಾರದ ಭೀತಿಯ ಬಗ್ಗೆ ಪೋಸ್ಟ್ ಮಾಡುವ ಮೂಲಕ ಅವರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಪೋಸ್ಟ್‌ ಮೂಲಕ ಜನರಲ್ಲಿ ಅರಿವು ಮೂಡಿಸಲು ಮತ್ತು ಮುಂದೊದಗಬಹುದಾದ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದು ಎಂಬುದು ಅವರ ಉದ್ದೇಶವಾಗಿದೆ. ಇಂತಹ ವ್ಯಕ್ತಿಯ ಮೇಲೆ ಎಫ್‌ಐಆರ್‌ ದಾಖಲಿಸುವುದು ಸರಿಯಲ್ಲ” ಎಂದು ಪತ್ರಕರ್ತರು ಕಿಡಿಕಾರಿದ್ದಾರೆ.

“ಪತ್ರಕರ್ತನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಅತ್ಯಂತ ಖಂಡನೀಯ. ಅಲ್ಲದೆ ಸ್ವತಂತ್ರ ಪತ್ರಕರ್ತರನ್ನು ಭಯಗೊಳಿಸಲು ಪೊಲೀಸರು ಹಿಸಾರ್‌ನ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸುತ್ತೇವೆ” ಎಂದು ಚಂಡೀಗಢ ಪ್ರೆಸ್ ಕ್ಲಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...