Homeಕರೋನಾ ತಲ್ಲಣಕುಂಭಮೇಳದ ’ಶಾಹಿ ಸ್ನಾನ'ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದ ’ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ಪರಸ್ಪರ ಅಂತರವನ್ನು ಜಾರಿಗೊಳಿಸಲು ಪೊಲೀಸರು ಪ್ರಯತ್ನಿಸಿದರೆ ಕಾಲ್ತುಳಿತ ಮುಂತಾದ ಪರಿಸ್ಥಿತಿ ಉದ್ಭವಿಸಬಹುದು ಎಂದು ಇನ್ಸ್‌ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿದ್ದಾರೆ.

ಕುಂಭಮೇಳದ ಉಸ್ತುವಾರಿ ವಹಿಸಿಕೊಂಡಿರುವ ಸಂಜಯ್ ಗುಂಜ್ಯಾಲ್, “ಎರಡನೇ`ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ನಾವು ಪರಸ್ಪರ ದೂರವನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕಾಲ್ತುಳಿತದ ಪರಿಸ್ಥಿತಿ ಉದ್ಭವಿಸಬಹುದು, ಆದ್ದರಿಂದ ಇಲ್ಲಿ ದೈಹಿಕ ಅಂತರವನ್ನು ಜಾರಿಗೊಳಿಸಲು ನಮಗೆ ಸಾಧ್ಯವಾಗುವುದಿಲ್ಲ”ಎಂದಿದ್ದಾರೆ.

’ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ನಾವು ಜನರಿಗೆ ನಿರಂತರವಾಗಿ ಮನವಿ ಮಾಡುತ್ತಿದ್ದೇವೆ. ಆದರೆ ಅಪಾರ ಜನಸಂದಣಿಯಿಂದಾಗಿ, ಚಲನ್‌ಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಘಾಟ್‌ಗಳಲ್ಲಿ ದೈಹಿಕ ಅಂತರವನ್ನು ಖಚಿತಪಡಿಸುವುದು ಬಹಳ ಕಷ್ಟ” ಎಂದು ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳಕ್ಕೆ ಬರುವ ಭಕ್ತಾದಿಗಳಿಗೆ ಕೊರೊನಾ ನೆಗೆಟಿವ್ ವರದಿ ಅಗತ್ಯವಿಲ್ಲ: ಉತ್ತರಾಖಂಡ್ ಸಿಎಂ

ಸೋಮವಾರ, ಕುಂಭಮೇಳದ ಎರಡನೇ ‘ಶಾಹಿ ಸ್ನಾನ’ ಸಂದರ್ಭದಲ್ಲಿ ಉತ್ತರಾಖಂಡದ ಹರಿದ್ವಾರದ ಹರ್‌ ಕಿ ಪೌಡಿಯ ಗಂಗಾ ನದಿಯಲ್ಲಿ ಸಾವಿರಾರು ಭಕ್ತರು ಸ್ನಾನ ಮಾಡಿದ್ದಾರೆ. ಸಾರ್ವಜನಿಕರಿಗೆ ಬೆಳಿಗ್ಗೆ 7 ಗಂಟೆಯವರೆಗೆ ಇಲ್ಲಿ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು. 350 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಕುಂಭಮೇಳ ಪ್ರದೇಶದ ವಿವಿಧ ಸ್ಥಳಗಳಲ್ಲಿ ಅಳವಡಿಸಲಾಗಿದೆ. ಮಾಸ್ಕ್ ಧರಿಸದೆ ಇರುವ ವ್ಯಕ್ತಿಗಳ ಮೇಲೆ ನಿಗಾ ಇಡಲಾಗುತ್ತಿದೆ.

ಇದನ್ನೂ ಓದಿ: ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಘಾಟ್‌ಗಳನ್ನು ಖಾಲಿ ಮಾಡಲು ಮತ್ತು ಸ್ವಚ್ಛಗೊಳಿಸಲು ’ಅಖಾರ’ರ ಸ್ನಾನದ ನಡುವೆ ಅರ್ಧ ಘಂಟೆಯ ಅಂತರವನ್ನು ನಾವು ನೀಡುತ್ತಿದ್ದೇವೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ನಾವು ನಿರೀಕ್ಷಿಸಿದ್ದಕ್ಕಿಂತ 50% ಕಡಿಮೆ ಜನ ಸೇರಿದ್ದಾರೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ಮಹಾಶಿವರಾತ್ರಿಯ ಪ್ರಯುಕ್ತ ಮಾರ್ಚ್‌ 11ರಂದು ಮೊದಲ ಶಾಹಿ ಸ್ನಾನ ನಡೆದಿತತ್ತು. ಎರಡನೇ ಪವಿತ್ರ ಸ್ನಾನ ಸೋಮವಾರ ಹಾಗೂ ಮೂರನೇ ಶಾಹಿ ಸ್ನಾನವು ಏಪ್ರಿಲ್‌ 14ರಂದು ನಡೆಯಲಿದೆ.

ಉತ್ತರಾಖಂಡದಲ್ಲಿ ಭಾನುವಾರ 1,333 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,08,812 ಕ್ಕೆ ತಲುಪಿದೆ.


ಇದನ್ನೂ ಓದಿ: ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...