Homeಕರೋನಾ ತಲ್ಲಣಕುಂಭಮೇಳದ ’ಶಾಹಿ ಸ್ನಾನ'ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

- Advertisement -
- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದ ’ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ಪರಸ್ಪರ ಅಂತರವನ್ನು ಜಾರಿಗೊಳಿಸಲು ಪೊಲೀಸರು ಪ್ರಯತ್ನಿಸಿದರೆ ಕಾಲ್ತುಳಿತ ಮುಂತಾದ ಪರಿಸ್ಥಿತಿ ಉದ್ಭವಿಸಬಹುದು ಎಂದು ಇನ್ಸ್‌ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿದ್ದಾರೆ.

ಕುಂಭಮೇಳದ ಉಸ್ತುವಾರಿ ವಹಿಸಿಕೊಂಡಿರುವ ಸಂಜಯ್ ಗುಂಜ್ಯಾಲ್, “ಎರಡನೇ`ಶಾಹಿ ಸ್ನಾನ’ದ ಸಂದರ್ಭದಲ್ಲಿ ಘಾಟ್‌ಗಳಲ್ಲಿ ನಾವು ಪರಸ್ಪರ ದೂರವನ್ನು ಜಾರಿಗೊಳಿಸಲು ಪ್ರಯತ್ನಿಸಿದರೆ ಕಾಲ್ತುಳಿತದ ಪರಿಸ್ಥಿತಿ ಉದ್ಭವಿಸಬಹುದು, ಆದ್ದರಿಂದ ಇಲ್ಲಿ ದೈಹಿಕ ಅಂತರವನ್ನು ಜಾರಿಗೊಳಿಸಲು ನಮಗೆ ಸಾಧ್ಯವಾಗುವುದಿಲ್ಲ”ಎಂದಿದ್ದಾರೆ.

’ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ನಾವು ಜನರಿಗೆ ನಿರಂತರವಾಗಿ ಮನವಿ ಮಾಡುತ್ತಿದ್ದೇವೆ. ಆದರೆ ಅಪಾರ ಜನಸಂದಣಿಯಿಂದಾಗಿ, ಚಲನ್‌ಗಳನ್ನು ವಿತರಿಸಲು ಸಾಧ್ಯವಾಗಿಲ್ಲ. ಘಾಟ್‌ಗಳಲ್ಲಿ ದೈಹಿಕ ಅಂತರವನ್ನು ಖಚಿತಪಡಿಸುವುದು ಬಹಳ ಕಷ್ಟ” ಎಂದು ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳಕ್ಕೆ ಬರುವ ಭಕ್ತಾದಿಗಳಿಗೆ ಕೊರೊನಾ ನೆಗೆಟಿವ್ ವರದಿ ಅಗತ್ಯವಿಲ್ಲ: ಉತ್ತರಾಖಂಡ್ ಸಿಎಂ

ಸೋಮವಾರ, ಕುಂಭಮೇಳದ ಎರಡನೇ ‘ಶಾಹಿ ಸ್ನಾನ’ ಸಂದರ್ಭದಲ್ಲಿ ಉತ್ತರಾಖಂಡದ ಹರಿದ್ವಾರದ ಹರ್‌ ಕಿ ಪೌಡಿಯ ಗಂಗಾ ನದಿಯಲ್ಲಿ ಸಾವಿರಾರು ಭಕ್ತರು ಸ್ನಾನ ಮಾಡಿದ್ದಾರೆ. ಸಾರ್ವಜನಿಕರಿಗೆ ಬೆಳಿಗ್ಗೆ 7 ಗಂಟೆಯವರೆಗೆ ಇಲ್ಲಿ ಸ್ನಾನಕ್ಕೆ ಅವಕಾಶ ನೀಡಲಾಗಿತ್ತು. 350 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಕುಂಭಮೇಳ ಪ್ರದೇಶದ ವಿವಿಧ ಸ್ಥಳಗಳಲ್ಲಿ ಅಳವಡಿಸಲಾಗಿದೆ. ಮಾಸ್ಕ್ ಧರಿಸದೆ ಇರುವ ವ್ಯಕ್ತಿಗಳ ಮೇಲೆ ನಿಗಾ ಇಡಲಾಗುತ್ತಿದೆ.

ಇದನ್ನೂ ಓದಿ: ಕೂಲಿ ಕಾರ್ಮಿಕ ಸೈಯದ್ ಇಸಾಕ್‌ರ ಗ್ರಂಥಾಲಯಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು: 11 ಸಾವಿರ ಪುಸ್ತಕಗಳು ಭಸ್ಮ

ಘಾಟ್‌ಗಳನ್ನು ಖಾಲಿ ಮಾಡಲು ಮತ್ತು ಸ್ವಚ್ಛಗೊಳಿಸಲು ’ಅಖಾರ’ರ ಸ್ನಾನದ ನಡುವೆ ಅರ್ಧ ಘಂಟೆಯ ಅಂತರವನ್ನು ನಾವು ನೀಡುತ್ತಿದ್ದೇವೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ನಾವು ನಿರೀಕ್ಷಿಸಿದ್ದಕ್ಕಿಂತ 50% ಕಡಿಮೆ ಜನ ಸೇರಿದ್ದಾರೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ಮಹಾಶಿವರಾತ್ರಿಯ ಪ್ರಯುಕ್ತ ಮಾರ್ಚ್‌ 11ರಂದು ಮೊದಲ ಶಾಹಿ ಸ್ನಾನ ನಡೆದಿತತ್ತು. ಎರಡನೇ ಪವಿತ್ರ ಸ್ನಾನ ಸೋಮವಾರ ಹಾಗೂ ಮೂರನೇ ಶಾಹಿ ಸ್ನಾನವು ಏಪ್ರಿಲ್‌ 14ರಂದು ನಡೆಯಲಿದೆ.

ಉತ್ತರಾಖಂಡದಲ್ಲಿ ಭಾನುವಾರ 1,333 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,08,812 ಕ್ಕೆ ತಲುಪಿದೆ.


ಇದನ್ನೂ ಓದಿ: ಇತ್ತ ಲಸಿಕೆ ಇಲ್ಲದೆ ರಾಜ್ಯಗಳ ಪರದಾಟ, ಅತ್ತ ಗುಜರಾತ್‌ನಲ್ಲಿ ಬಿಜೆಪಿಯಿಂದ 1000 ರೆಮ್‌ಡೆಸಿವಿರ್‌ ಲಸಿಕೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...