Homeಕರ್ನಾಟಕಸ್ಪಷ್ಟ ನಿಲುವು ತಾಳದ ಸಭೆ: ರಸಗೊಬ್ಬರ ದರ ಏರಿಕೆ ಖಚಿತ - ಹೊಸ ಗೊಬ್ಬರಕ್ಕೆ ಹೆಚ್ಚಿನ...

ಸ್ಪಷ್ಟ ನಿಲುವು ತಾಳದ ಸಭೆ: ರಸಗೊಬ್ಬರ ದರ ಏರಿಕೆ ಖಚಿತ – ಹೊಸ ಗೊಬ್ಬರಕ್ಕೆ ಹೆಚ್ಚಿನ ಬೆಲೆ!

- Advertisement -
- Advertisement -

ರಸಗೊಬ್ಬರ ಬೆಲೆ ಏರಿಕೆಯ ವಿಷಯದಲ್ಲಿ ಭುಗಿಲೆದ್ದಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸೋಮವಾರ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರ ನೇತೃತ್ವದಲ್ಲಿ ನಡೆದ ಸಭೆ ಸ್ಪಷ್ಟ ನಿಲುವು ತಾಳದೆ ಅಂತ್ಯಗೊಂಡಿದೆ.

ಇತ್ತೀಚೆಗೆ ಇಫ್ಕೊ, ರಸಗೊಬ್ಬರದ ಮೇಲೆ ಶೇ. 58ರಷ್ಟು ಬೆಲೆ ಹೆಚ್ಚಳ ಪ್ರಕಟಿಸಿದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರೈತ ಸಂಘಟನೆಗಳು ಮತ್ತು ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ಸಚಿವರು ಸಭೆ ಕರೆದಿದ್ದರು.

ಸಭೆ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಸಚಿವರು, ಇಫ್ಕೋದೊಂದಿಗೆ ನಡೆಸಿದ ಚರ್ಚೆಯ ಬಳಿಕ ಡಿಎಪಿ ಮತ್ತು ಎನ್‌ಪಿಕೆ ಗೊಬ್ಬರದ ಹಳೆಯ ಸ್ಟಾಕ್ಅನ್ನು ಹಳೆಯ ದರದಲ್ಲೇ ಮಾರಲು ಒಪ್ಪಿದ್ದಾರೆ ಎಂದು ತಿಳಿಸಿದರು.

ದೇಶದ ರೈತರ ಹಿತದೃಷ್ಟಿಯಿಂದ ಸರ್ಕಾರವು ಉತ್ಪಾದನೆ, ಗೊಬ್ಬರದ ಲಭ್ಯತೆ ಮತ್ತು ವಹಿವಾಟವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಟ್ವೀಟ್‌ನಲ್ಲಿ ಅವರು ತಿಳಿಸಿದ್ದಾರೆ.

ಟ್ವೀಟ್‌ನೊಂದಿಗೆ ಇಫ್ಕೋ ಸಂಸ್ಥೆ ಬರೆದ ಪತ್ರವೊಂದನ್ನು ಲಗತ್ತಿಸಿದ್ದು, ಅದರಲ್ಲಿ, ಮಾರ್ಚ್‌ 31ರವರೆಗೆ ಡಿಎಪಿ, ಎನ್‌ಪಿಕೆ ಗೊಬ್ಬರ ದರವನ್ನು ಹೆಚ್ಚು ಮಾಡಿಲ್ಲ. ಡಿಎಪಿ ದರ 1200 ರೂ ಮತ್ತು ಎನ್‌ಪಿಕೆ ದರ 1185 ರೂ ಹಾಗೂ ಎನ್‌ಪಿ ದರ 925 ರೂ ಇದ್ದು ಇದೇ ದರದಲ್ಲಿ ಹಳೆಯ ಸ್ಟಾಕ್‌ ಮುಗಿಯುವವರೆಗೆ ನೀಡಲಾಗುವುದು. ಆದರೆ ಗೊಬ್ಬರ ತಯಾರಿಕೆಗೆ ಬಳಕೆಯಾಗುವ ಕಚ್ಚಾ ವಸ್ತುಗಳ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಇದೇ ತಿಂಗಳಲ್ಲಿ ದರ ಹೆಚ್ಚಿಸುವುದಾಗಿ ಹೇಳಿದೆ.

ಏಪ್ರಿಲ್‌ 1ರ ವರೆಗೆ ದೇಶದಲ್ಲಿ ಲಭ್ಯವಿರುವ ಒಟ್ಟು ಗೊಬ್ಬರ ದಾಸ್ತಾನಿನ ವಿವರಗಳನ್ನು ಪತ್ರದಲ್ಲಿ ನೀಡಿದೆ. ದೇಶದಾದ್ಯಂತ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳ ಬಳಿ 67,241 ಮೆಟ್ರಿಕ್‌ ಟನ್‌, ವೇರ್‌ಹೌಸ್‌ಗಳಲ್ಲಿ 55,315 ಮಟ್ರಿಕ್‌ ಟನ್‌ ಸೇರಿ ಒಟ್ಟು 1,22,556 ಮೆಟ್ರಿಕ್‌ ಟನ್‌ನಷ್ಟು ಗೊಬ್ಬರವಿದ್ದು, ಇದು ಈಗ ಹಳೆಯ ದರದಲ್ಲಿ ಲಭ್ಯವಾಗಲಿದೆ.

ಆದರೆ ಈಗಾಗಲೇ ಹೊಸದರ ಮುದ್ರಿಸಿದ ಬ್ಯಾಗ್‌ಗಳನ್ನು ದಾಸ್ತಾನು ಮಳಿಗೆಗಳಿಗೆ ಪೂರೈಸಲಾಗಿದ್ದು, ಅದು ಯಾವ ದರದಲ್ಲಿ ಮಾರಟವಾಗಲಿದೆ ಎಂಬ ಬಗ್ಗೆ ಗೊಂದಲಗಳು ಉಂಟಾಗಿವೆ. ಈ ಕುರಿತು ಸರ್ಕಾರದ ನಡೆಯ ಬಗ್ಗೆ ಅನುಮಾನಗಳಿಗೆ ಕಾರಣವಾಗಿದೆ ಎಂದು ರೈತ ಸಂಘಟನೆಗಳು ಪ್ರತಿಕ್ರಿಯಿಸಿವೆ.


ಇದನ್ನೂ ಓದಿ: ರಸಗೊಬ್ಬರ ಬೆಲೆ ಏರಿಕೆ ಪ್ರಶ್ನಿಸದ ರಾಜ್ಯ ಸರ್ಕಾರ, ಬಿಜೆಪಿ ಸಂಸದರು ಹೇಡಿಗಳು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...