Homeಅಂಕಣಗಳುಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

- Advertisement -
- Advertisement -

ಸಂಘಟಿತ ಸಂಸ್ಕೃತಿಯು ಹೇಗೆ ಜನರನ್ನು ಒಂದುಗೂಡಿಸುತ್ತದೆ; ಆದರೆ ಅದರ ವಿರುದ್ಧವಾಗಿ ಪರಿಶುದ್ಧತೆಯ ವಾದ ಹೇಗೆ ಜನಾಂಗವನ್ನು ಪ್ರತ್ಯೇಕಿಸುತ್ತದೆ ಎಂಬುದರ ಬಗ್ಗೆ ಇತ್ತೀಚೆಗೆ ಆಸ್ಕರ್ ಆಲಿ ಇಂಜಿನಿಯರ್‌ರವರ ಲೇಖನವೊಂದನ್ನು ಓದಿದೆ. ಅದರಲ್ಲಿ ಇಂಜಿನಿಯರ್‌ರವರು ಎಷ್ಟೊಂದು ಉತ್ತಮ ಉದಾಹರಣೆಗಳನ್ನು ಕೊಟ್ಟಿದ್ದಾರೆಂದರೆ, ಅವುಗಳು ಜಾಣ-ಜಾಣೆಯರನ್ನು ತಲುಪಲೇಬೇಕು ಎಂದು ಇಲ್ಲಿ ಹಲವನ್ನು ನೀಡುತ್ತಿದ್ದೇನೆ.

ಎಲ್ಲಾ ಧರ್ಮಗಳ ಪರಿಶುದ್ಧತೆಯನ್ನು ಕಾಪಾಡಬೇಕು ಎನ್ನುವವರು ಸಂಘಟಿತ ಸಂಸ್ಕೃತಿಯನ್ನು ಒಪ್ಪುವುದೇ ಇಲ್ಲ. ಅವರಿಗೆ ’ಶುದ್ಧ ಹಿಂದೂ’ ಅಥವಾ ’ಶುದ್ಧ ಇಸ್ಲಾಂ’ ಧರ್ಮ ಮಾತ್ರ ಮುಖ್ಯವಾಗಿರುತ್ತದೆ. ಆದರೆ ಇಂತಹ ’ಶುದ್ಧ’ತೆ ಜನಸಾಮಾನ್ಯರಿಂದ ದೂರವಾಗಿಯೇ ಉಳಿಯುತ್ತದೆ. ಉದಾಹರಣೆಗೆ ‘ಶುದ್ಧ ಧರ್ಮ’ದ ಪ್ರತಿಪಾದಕರಾದ ಬ್ರಾಹ್ಮಣರು ಸಂಸ್ಕೃತದಲ್ಲಿ ಮತ್ತು ಉಲೆಮಾಗಳು ಅರಬ್ಬೀ ಭಾಷೆಯಲ್ಲಿ ಬರೆಯುತ್ತಿದ್ದರು. ಜನರ ಆಡುಭಾಷೆಗೂ ಇವರ ಕೃತಿಗಳ ಭಾಷೆಗೂ ಯಾವುದೇ ಸಂಬಂಧವಿರದಿದ್ದ ಕಾರಣ ಅವು ಜನಪ್ರಿಯವಾಗಲೇ ಇಲ್ಲ. ಆದರೆ ಅದೇ ಹಿಂದೂ ಸಂತರು, ಮುಸ್ಲಿಂ ಸೂಫಿಗಳು ಜನರ ಭಾಷೆಯಲ್ಲಿ ಕೃತಿಗಳನ್ನು ರಚಿಸಿದರು. ಹಾಗೆ ಮಾಡಿದ್ದರಿಂದಲೇ ಅವರು ಜನಪ್ರಿಯರಾದರಲ್ಲದೇ, ಭಾರತದಲ್ಲಿ ಧರ್ಮಗಳ ನಡುವಿನ ಭೇದಭಾವಗಳನ್ನು ಸಡಿಲಗೊಳಿಸುವುದರಲ್ಲೂ ಯಶಸ್ವಿಯಾದರು.

ಹದಿನಾಲ್ಕನೇ ಶತಮಾನದಲ್ಲಿದ್ದ ಖುಸ್ರೋ ಎಂಬ ಪರ್ಶಿಯನ್ ಕವಿ, ತನ್ನ ಪ್ರಾಂತಭಾಷೆಯಲ್ಲೂ ಪದ್ಯಗಳನ್ನು ರಚಿಸಿದ್ದಕ್ಕೆ ಇವತ್ತಿಗೂ ಆತನ ಪದ್ಯಗಳು ಜನರ ನಾಲಗೆಗಳಲ್ಲಿ ಜೀವಂತವಾಗಿದೆ; ಭಾಷೆಗೂ ಧರ್ಮಕ್ಕೂ ಸಂಬಂಧವಿಲ್ಲ ಎಂಬುದನ್ನು ಸಾಬೀತುಪಡಿಸಿದೆ.

ರಸ್ ಖಾನ್ ಮತ್ತು ರಹೀಂ ಎಂಬ ಅವಧ್ ಕವಿಗಳು ಕೃಷ್ಣನ ಭಕ್ತರಾಗಿದ್ದರು. ಹಸ್‌ರತ್ ಮೊಹನಿ ಎಂಬ ಇನ್ನೋರ್ವ ಕವಿಗೆ ಕೃಷ್ಣನ ಬಗ್ಗೆ ಎಂತಹ ಪ್ರೇಮ ಎಂದರೆ ಪ್ರತಿ ಕೃಷ್ಣ ಜನ್ಮಾಷ್ಟಮಿಯಂದು ತಪ್ಪದೇ ಬೃಂದಾವನಕ್ಕೆ ಭೇಟಿ ನೀಡುತ್ತಿದ್ದ.

ಇಂತಹವರು ಬೀರಿದ ಪ್ರಭಾವದಿಂದಲೇ ಶತಶತಮಾನಗಳ ಕಾಲ ಮೊಹರಂನಲ್ಲಿ ಹಿಂದೂಗಳು ಭಾಗವಹಿಸುತ್ತಿದ್ದರು; ರಾಮಲೀಲೆ ನಾಟಕಗಳಲ್ಲಿ ಮುಸ್ಲಿಂ ಯುವಕರು ರಾಮ, ಹನುಮಂತನ ಪಾತ್ರಗಳನ್ನು ನಿರ್ವಹಿಸುತ್ತಿದ್ದರು.

ಬರೋಡಾದಲ್ಲಿ ಅಬ್ದುಲ್ ರಶೀದ್ ಇಸ್ಮಾಯಿಲ್ ಎಂಬ ವೃದ್ಧರೊಬ್ಬರಿದ್ದಾರೆ. ಈತ ಜನಿಸಿದ್ದು ಇಸ್ಲಾಂ ಧರ್ಮದಲ್ಲಾದರೂ ಪ್ರವೃತ್ತಿಯಲ್ಲಿ ಈತ ಹಿಂದೂ. ಈತ ಎಂತಹ ಗಣೇಶನ ಭಕ್ತಾದಿ ಎಂದರೆ, ಬರೋಡಾ ವಿಶ್ವವಿದ್ಯಾಲಯದಲ್ಲಿರುವ ಗಣೇಶನ ಗುಡಿಗೆ ಈತನೇ ಅಧಿಕೃತ ಪೂಜಾರಿ. ಸಂಸ್ಕೃತ ಪಂಡಿತರೂ ಆದ ಇಸ್ಮಾಯಿಲ್‌ರವರು ಶ್ಲೋಕಗಳನ್ನು ಪಠಿಸುತ್ತಾರೆ; ಬೆಳಗ್ಗೆ ಮತ್ತು ಸಂಜೆ ಗಣೇಶನಿಗೆ ಪೂಜೆ ಸಲ್ಲಿಸುತ್ತಾರೆ. ’ಇಲ್ಲಿಯ ಮುಸ್ಲಿಂ ಬ್ರಾಹ್ಮಣ ನಾನು’ ಎಂದು ನಗುತ್ತಾರೆ ಎಲ್ಲರಿಗೆ ‘ಚಾಚಾ’ ಆಗಿರುವ ಇಸ್ಮಾಯಿಲ್.

ಮುಂಬೈಯಲ್ಲಿ ಗುಲಾಂ ದಸ್ತಗಿರ್ ಎಂಬುವವರು ಮುಸ್ಲಿಂ ವೇದಗಳ ಪಂಡಿತ. ಈತನ ಬಳಿ ಇರುವ ಹಲವಾರು ಪುಸ್ತಕಗಳಲ್ಲಿ ಕುರಾನಿನ ಸಂಸ್ಕೃತ ಅನುವಾದವೂ ಒಂದು. ದಸ್ತಗಿರ್‌ರವರು ಎಂತಹ ಪ್ರಚಂಡ ಹಿಂದೂ ಪಂಡಿತರೆಂದರೆ ಇವರ ಪ್ರವಚನಗಳನ್ನು ಕೇಳಲು ದೇಶದ ವಿವಿಧ ಭಾಗಗಳಿಂದ ಆಹ್ವಾನಗಳು ಬರುತ್ತಿರುತ್ತವೆ.

ದೆಹಲಿ ನಿವಾಸಿಯಾಗಿರುವ ಜ್ಯೋತಿ ಪಾಂಡೆ ಎಂಬುವವರು ಹಿಂದೂ ಧರ್ಮಕ್ಕೆ ಸೇರಿದ್ದರೂ ಅವರ ಮೇಲೆ ಇಸ್ಲಾಮಿನ ಶಿಯಾ ಪಂಕ್ತಿ ಎಂತಹ ಪ್ರಭಾವ ಬೀರಿದೆ ಎಂದರೆ ಆತ ಮಹಮದ್ ಪೈಗಂಬರ್‌ರವರ ಮೊಮ್ಮಗ ಇಮ್ಮಾಮ್ ಹುಸೇನ್‌ರ ಭಕ್ತ. ಇಮ್ಮಾಮ್ ಹುಸೇನ್ ಕುರಿತಂತೆ ಇವರು ಶುದ್ಧ ಉರ್ದುವಿನಲ್ಲಿ ಚರಮಗೀತೆಗಳನ್ನು ಹಾಡುತ್ತಾರೆ.

ಗುರು ನಾನಕ್ ಸ್ಥಾಪಿಸಿದ ಸಿಖ್ ಧರ್ಮವೂ ಹಿಂದೂ ಮತ್ತು ಇಸ್ಲಾಂ ಧರ್ಮಗಳ ಅಂಶಗಳನ್ನು ಹೊಂದಿದೆ. ಮುಸ್ಲಿಂರ ಪವಿತ್ರ ಸ್ಥಳವಾದ ಮೆಕ್ಕಾಗೂ ಭೇಟಿ ನೀಡಿದ್ದ ಗುರುನಾನಕ್ ತಮ್ಮ ಗುರುದ್ವಾರವನ್ನು ನಿರ್ಮಿಸಲು ಹೊರಟಾಗ ಅದರ ಅಡಿಗಲ್ಲನ್ನು ಹಾಕಲು ಮುಸ್ಲಿಂ ಸೂಫಿ ಮಿಯಾನ್ ಮಿರ್ ಅವರನ್ನು ಆಹ್ವಾನಿಸಿದ್ದರು.
ಅಷ್ಟೇ ಏಕೆ ದೇಶ ವಿಭಜನೆಯಾಗುವವರೆಗೂ ಹಲವಾರು ಗುರುದ್ವಾರಗಳಲ್ಲಿ ಗುರುಗ್ರಂಥ್ ಸಾಹೀಬ್ ಅನ್ನು ಹಾಡುತ್ತಿದ್ದದ್ದು ಈಗ ಪಾಕಿಸ್ತಾನದಲ್ಲಿರುವ ಪಂಜಾಬಿನ ಮುಸ್ಲಿಂ ’ರಾಗಿ’ಗಳೇ.

ಕರ್ನಾಟಕದ ಬಾಬಾಬುಡನ್‌ಗಿರಿಯಲ್ಲಿನ ಧಾರ್ಮಿಕ ಭಾವೈಕ್ಯತೆ ಎಲ್ಲರಿಗೂ ಗೊತ್ತಿದೆ. ಇದರಂತೆ ಮಹಾರಾಷ್ಟ್ರದ ಕಲ್ಯಾಣ್ ಎಂಬ ಜಾಗದಲ್ಲಿ ಹಾಜಿ ಮಾಲಂಗ್ ದರ್ಗ ಎಂಬುದೊಂದಿದೆ. ಎಷ್ಟೋ ತಲೆಮಾರುಗಳಿಂದ ಈ ದರ್ಗದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿರುವುದು ಓರ್ವ ಬ್ರಾಹ್ಮಣ ಸಂಸಾರ.

ಹಲವಾರು ದಶಕಗಳಿಂದ ಈ ದರ್ಗಾಕ್ಕೆ ಹಿಂದೂಗಳು, ಮುಸ್ಲಿಮರು, ಕ್ರೈಸ್ತರು ಮತ್ತು ಪಾರ್ಸಿಗಳೂ ಬರುತ್ತಿದ್ದರು. ಎಲ್ಲರೂ ಹಾಜಿ ಮಾಲಂಗ್‌ರವರ ಉರ್ಸ್‌ಅನ್ನು ಆಚರಿಸುತ್ತಿದ್ದರು. ಆದರೆ ಈಗ ಮಹಾರಾಷ್ಟ್ರದ ಶಿವಸೇನೆಗಳು ಈ ದರ್ಗದಲ್ಲಿರುವುದು ಹಾಜಿ ಮಾಲಂಗ್‌ರವರ ಸಮಾಧಿಯಲ್ಲ; ಬದಲಾಗಿ ಅಲ್ಲಿರುವುದು ಶ್ರೀ ಮಚ್ಚೀಂದ್ರನಾಥರ ಸಮಾಧಿ ಎಂದು ವಾದಿಸಿ ತಕರಾರು ಶುರು ಮಾಡಿದ್ದಾರೆ. ಪರಿಣಾಮವಾಗಿ ಅಲ್ಲಿ ಇಂದು ಪ್ರತಿ ಉರ್ಸ್ ದಿನದಂದು ಕೋಮು ಗಲಭೆಗಳು ಉದ್ಭವಿಸಿ ಪೊಲೀಸರು ಬಂದೋಬಸ್ತ್ ಮಾಡುವಂತಾಗಿದೆ.

ಹೋದ ವರ್ಷ ಕೋಮುದಳ್ಳುರಿಯನ್ನೇ ಕಂಡ ಗುಜರಾತ್ ರಾಜ್ಯದ ಕಛ್ ಪ್ರದೇಶದಲ್ಲಿ ಥಿಕಾರಿಯಾ ಎಂಬ ಹಳ್ಳಿ ಇದೆ. ಈ ಹಳ್ಳಿಯಲ್ಲಿ ಮುಸ್ಲಿಂ ಸಂತ ಅಸ್ಲಾಂ ಪೀರ್‌ನ ದರ್ಗವಿದ್ದರೂ, ಹಳ್ಳಿಯಲ್ಲಿ ವಾಸಿಸುತ್ತಿರುವ 2200 ಜನರೆಲ್ಲಾ ಹಿಂದೂಗಳೇ. ಆದರೂ ಪ್ರತಿ ವರ್ಷ ಆಷಾಢದ ತಿಂಗಳಲ್ಲಿ ಈ ಹಿಂದೂಗಳೇ ಸೇರಿ ಆಸ್ಲಾಂ ಪೀರ್‌ನ ಉರ್ಸ್ ಅನ್ನು ಆಚರಿಸುತ್ತಾರೆ. ದರ್ಗಕ್ಕೆ ಬಟ್ಟೆಗಳನ್ನು, ಧ್ವಜಗಳನ್ನು ದಾನ ಮಾಡುತ್ತಾರೆ. ಪ್ರತಿ ಸಂಸಾರದ ಪ್ರತಿಯೊಬ್ಬರೂ ಎರಡು ರೂಪಾಯಿಗಳನ್ನು ಮತ್ತು 250 ಗ್ರಾಂ ಅಕ್ಕಿ, ಬೇಳೆಯನ್ನು ನೀಡಿ, ಸಿಹಿ ಗಂಜಿಯನ್ನು ತಯಾರಿಸಿ, ಜಾತಿ, ಧರ್ಮ, ಕುಲ ಯಾವ ಭೇದವೂ ಇಲ್ಲದೆ ಜೊತೆಯಾಗಿ ಕೂತು ಊಟ ಮಾಡುತ್ತಾರೆ.

ಮಹಾರಾಷ್ಟ್ರದ ಮರಾಠ್‌ವಾಡಾದಲ್ಲಿರುವ ಎರಡು ಹಳ್ಳಿಗಳ ಕತೆಯಂತೂ ಅದ್ಭುತವಾಗಿದೆ. ಆಸುಪಾಸಿನಲ್ಲೇ ಈ ಹಳ್ಳಿಗಳು ಇವೆ. ಮುಸ್ಲಿಮರೇ ಇರುವ ಹಳ್ಳಿಯಲ್ಲಿ ಹನುಮಂತನ ದೇವಸ್ಥಾನವಿದೆ. ಈ ದೇವಸ್ಥಾನವನ್ನು ಮುಸ್ಲಿಮರೇ ಚೊಕ್ಕವಾಗಿ ಇಡುತ್ತಾರಲ್ಲದೇ ಪ್ರತಿ ವರ್ಷ ಅವರೇ ಹಣ ಸಂಗ್ರಹಿಸಿ, ವಾರ್ಷಿಕ ಜಾತ್ರೆಯನ್ನು ನಡೆಸುತ್ತಾರೆ. ಪಕ್ಕದ ಹಳ್ಳಿಗಳಿಂದ ಜಾತ್ರೆಗೆ ಬರುವ ಹಿಂದೂಗಳಿಗೆ ಹಳ್ಳಿಯ ಮುಸ್ಲಿಮರೇ ಅಡುಗೆ ತಯಾರಿಸಿ ಬಡಿಸಿ ಅತಿಥಿ ಸತ್ಕಾರ ಮಾಡುತ್ತಾರೆ.

ಹಾಗೆಯೇ ಹತ್ತಿರದಲ್ಲೇ ಇರುವ ಹಿಂದೂಗಳೇ ವಾಸಿಸುತ್ತಿರುವ ಹಳ್ಳಿಯಲ್ಲಿ ದರ್ಗ ಒಂದಿದೆ. ಇದರ ಉಸ್ತುವಾರಿಯನ್ನು ಹಿಂದೂಗಳು ನೋಡಿಕೊಳ್ಳುತ್ತಾರಲ್ಲದೇ ಪ್ರತಿ ವರ್ಷ ದರ್ಗದ ಉರ್ಸ್‌ಅನ್ನು ಅವರೇ ಏರ್ಪಡಿಸುತ್ತಾರೆ.

ಇಂತಹ ಉದಾಹರಣೆಗಳು ಕರ್ನಾಟಕದಲ್ಲೂ ಹೇರಳವಾಗಿವೆ. ಇಂತಹ ಸಂಘಟಿತ, ಸೌಹಾರ್ದದ ಸಂಸ್ಕೃತಿಯ ಬದಲಾಗಿ ದುಷ್ಟ ಮನಸ್ಸುಗಳ ’ಶುದ್ಧ’ ಧರ್ಮ ಯಾರಿಗೆ ಬೇಕಿದೆ?!

(ಇದು ಗೌರಿಯವರ ಕಂಡಹಾಗೆ ಅಂಕಣದ ಮರುಪ್ರಕಟಣೆ)


ಇದನ್ನೂ ಓದಿ: ಗೌರಿ ಕಾರ್ನರ್: ಈ ದೇಶ ಕುರಿತು ಖುಷವಂತರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...