Homeಕರ್ನಾಟಕಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

- Advertisement -
- Advertisement -

4ನೇ ಹಂತದ ಮತದಾನದ ಹಿಂದಿನ ದಿನ ರಿಪ್ಲಬಿಕ್ ಟಿವಿಯಲ್ಲಿ, ‘ಸಂಡೇ ಡಿಬೇಟ್ ವಿತ್ ಅರ್ನಾಬ್ ಗೋಸ್ವಾಮಿ’ ಕಾರ್ಯಕ್ರಮದ ಟೈಟಲ್ಲೇ #ModiWaveElection…

ಚರ್ಚೆಯ ಸಂದೇಶ ಏನಾಗಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿಯೇ ಗೋಸ್ವಾಮಿ ಕಾರ್ಯಕ್ರಮ ರೂಪಿಸಿರುತ್ತಾರಲ್ಲವಾ? ಚರ್ಚೆ ಶುರುವಾಗುತ್ತಲೇ ಮರಿ ಗೋಸ್ವಾಮಿಗಳಾಗಿರುವ ಅವರ ಅಭಿಮಾನಿಗಳು ತಮ್ಮ ಮನದಿಂಗಿತವನ್ನು ಟ್ವೀಟ್ ಮಾಡಲು ಶುರು ಮಾಡಿಬಿಡುತ್ತಾರೆ.

ಚರ್ಚೆಯಲ್ಲಿ ಬಿಜೆಪಿ ವಿರೋಧಿ ಪ್ಯಾನಲಿಸ್ಟ್ ಅರ್ಥಪೂರ್ಣವಾಗಿ ವಾದ ಮಂಡಿಸತೊಡಗಿದರೆ, ಗೋಸ್ವಾಮಿ ಚೀರಾಡಿ, ಹಾರಾಡಿ ವಿಷಯವನ್ನು ಎತ್ತೆತ್ತಲೋ ಒಯ್ದು ಬಿಡುತ್ತಾರೆ. ಮೊನ್ನೆ ರವಿವಾರವೂ ಅವರೂ ಅದನ್ನೇ ಮಾಡಿದರು. ಇದು ‘ಮೋದಿ ಅಲೆ ಚುನಾವಣೆ’ ಎಂಬ ಅವರ ನಿಲುವನ್ನು ಮುನ್ನೆಲೆಗೆ ತರಲು ಹರಸಾಹಸ ಮಾಡಿದರು….

ಮಂಡ್ಯದ ನಂತರ ನಮ್ಮ ಚಾನೆಲಗಳಿಗೆ ಆಕರ್ಷಕವಾಗಿ ಕಂಡಿದ್ದು ವಾರಣಾಸಿ. ಮೋದಿಯವರ ನಾಮಿನೇಶನ್ ಅವುಗಳ ಪಾಲಿಗೆ ‘ಸ್ವಾಮಿ-ನೇಷನ್’ ಅನಿಸಿರಬೇಕು. ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಚಾನೆಲ್ಲುಗಳಲ್ಲಿ ಎರಡು ದಿನ ವಾರಣಾಸಿಯ ಜಪ. ಪ್ರಧಾನಿಯ ನಾಮಪತ್ರ ಸಲ್ಲಿಕೆ ಓಕೆ, ಜನರಿಗೆ ಅಲ್ಲಿನ ವಾತಾವರಣ ತೋರಿಸಬೇಕು, ಅದೂ ಸರಿ. ಆದರೆ, ರಾಜಕೀಯದೊಂದಿಗೆ ಧಾರ್ಮಿಕತೆಯನ್ನು ಬೆರೆಸಿ, ವೀಕ್ಷಕರಲ್ಲಿ ಕಾಶಿ ವಿಶ್ವನಾಥನ ಬಗ್ಗೆ ಇರಬಹುದಾದ ಭಕ್ತಿಯನ್ನು ಮೋದಿಗೆ ‘ಟ್ರಾನ್ಸ್‍ಫರ್’ ಮಾಡಲು ಹೆಣಗಲಾಯಿತು.

ರಾಜ್ಯದಲ್ಲಿ ಮತದಾನ ಮುಗಿದಿದ್ದರೂ ಕನ್ನಡದ ಚಾನೆಲ್‍ಗಳೂ ಹಿಂದಿಯವರಂತೆ ಉತ್ಸುಕವಾಗಿಯೇ ನಾಮಪತ್ರ ಸಲ್ಲಿಕೆಯನ್ನು ಪ್ರಸಾರ ಮಾಡಿದರು. ಬಹುಷ: ಇದು ಪ್ಯಾಕೇಜ್‍ನ ಭಾಗವಾಗಿರಬಹುದು.

ದಿಗ್ವಿಜಯಕ್ಕೆ ಯುದ್ಧ ಗೆದ್ದ ಸಂಭ್ರಮ. ನೇರ ಪ್ರಸಾರದ ಜೊತೆಗೆ ವಿಶೇಷ ಕಾರ್ಯಕ್ರಮ ಬೇರೆ! ‘ವೈರಿಪಡೆಗೆ ನಮೋ ಖಬರ್‍ದಾರ್ ಮೆಸೇಜ್!’ – ಮೋದಿ ನಾಮಿನೇಶನ್ ಭಾಷಣ ಮಾಡುವ ಮೊದಲೇ ಈ ತರಹದ ಹೆಡ್ಡಿಂಗ್! ಗಂಗಾ ಆರತಿ ಮೂಲಕ ವಿಪಕ್ಷಗಳಿಗೆ ವಾರ್ನಿಂಗ್ ಕೊಟ್ಟರೆಂದೇ? ಅಲ್ಲಿ ಸೇರಿಸಿದ ಜನರನ್ನು ಇಟ್ಟುಕೊಂಡು ದಿಗ್ವಿಜಯ ಹೀಗೆ ಹೇಳಿತೋ ಗೊತ್ತಾಗಲಿಲ್ಲ!

ಟಿವಿ9 ಪಾಲಿಗೆ ಮೋದಿ ‘ಕಾಶಿಯ ಕೊತ್ವಾಲ’… ವಿಶ್ವನಾಥನೇ ಬಲ್ಲ ಇದರ ಮರ್ಮ! ನ್ಯೂಸ್18ನಲ್ಲಿ ವಿಶೇಷ ಕಾರ್ಯಕ್ರಮ- ‘ದಶಾಶ್ವಮೇಧ ರಹಸ್ಯ, ಗಂಗಾ ಆರತಿ (ಅವರ ಪರದೆ ಮೇಲೆ ಗಂಗಾರತಿ ಎಂದಿತ್ತು!) ವಿಸ್ಮಯ, ಪ್ರತ್ಯಕ್ಷರಾದ ಸಾಧುಗಳು’….ಸೂಪರ್ ಮಾಮ! ಪ್ರತ್ಯಕ್ಷವಾಗುವವರೆಗೆ ಸಾಧುಗಳು ಎಲ್ಲಿದ್ದರು? ಅಥವಾ ಮೇಲಿಂದ ಉದುರಿ ಬಿದ್ದರಾ?

ಬಿಟಿವಿಯವರಂತೂ ರಾಧಿಕಾ ಹಿರೇಗೌಡರ್ ಅವರನ್ನೇ ವಾರಣಾಸಿಯಲ್ಲಿ ಲ್ಯಾಂಡ್ ಮಾಡಿಸಿದ್ದರು. ರಾಧಮ್ಮರಂತೂ ‘ಏನ್ ವೈಭವ, ಹಬ್ಬದ ಸಂಭ್ರಮ, ಎಲ್ಲೆಲ್ಲೂ ಎಲ್ಲೆಲ್ಲೂ ಎಲ್ಲೆಲ್ಲೂ…ಎಲ್ಲೆಲ್ಲೂ (ನಾಲ್ಕು ದಿಕ್ಕುಗಳ ಹೊರಳಿದ್ದರಿಂದ 4 ಸಲ ಹೇಳಿದರೋ?)…ಜನ ಸ್ವ-ಇಚ್ಛೆಯಿಂದ ಪಾಲ್ಗೊಂಡು ತಾವೇ ನಗರವನ್ನು ಸಿಂಗರಿಸಿದ್ದಾರೆ…’ -ನಾನ್‍ಸ್ಟಾಪ್ ಹೊಗಳಿಕೆಯಲ್ಲೇ ಕಾಲ ಕಳೆದರು.

ಮುಂದಿನ ಹಂತದ ಚುನಾವಣೆಗಳು ಹಿಂದಿ ಬೆಲ್ಟ್‍ನಲ್ಲೇ ಜಾಸ್ತಿ. ಹೀಗಾಗಿ ಹಿಂದಿ ಚಾನೆಲ್‍ಗಳಿಗೆ ವಿಶೇಷ ಪ್ಯಾಕೇಜ್ ಇದ್ದಂತಿತ್ತು. ಝೀ ಚಾನೆಲ್ ಪಾಲಿಗೆ ಶಿವನೇ ನಾಮಿನೇಶನ್‍ಗೆ ಬಂದಂತಿತ್ತು. ಆಜ್‍ತಕ್‍ನಲ್ಲಿ ನಿರೂಪಕಿ ಮತ್ತು ವಾರಣಾಸಿಯಲ್ಲಿ ಓಡಾಡುತ್ತಿದ್ದ ವರದಿಗಾರ್ತಿಯ ನಡುವಿನ ಮಾತು ಹೇಗಿದ್ದವು ಎಂದರೆ,

-ಯಾ ಪರಿ ಮಂದಿ…ಸಂದಿಗೊಂದಿಯಲ್ಲೆಲ್ಲ ಮಂದಿ…ಅಬಬಾ….ನಾ ನೋಡೆ ಇಲ್‍ಬಿಡು ಇಂತಹ ಸಂಭ್ರಮ…

-ಹೌದು ಹೌದು ನಾವು ನೋಡ್ತಾ ಇದ್ದೇವಲ್ಲ. ನೀನೇ ಲಕ್ಕಿ ಕಣೆ…ವಾರಣಾಸಿಯಲ್ಲೇ ನಿಂತು ಇದನ್ನ ಕಣ್ತುಂಬಿಕೊಳ್ಳೋ ಭಾಗ್ಯ…

-ಧೂಮ್‍ಧಾಮ್ ಸೆ ಆಯೇಗಿ ಸರ್ಕಾರ್

ಈ ಲೈವ್ ವರದಿಯ ಪ್ರಾಯೋಜಕರು: ಬಿಗ್‍ಬಾಸ್ ಡಾಲರ್ ಬನಿಯನ್ ಮತ್ತು ಅಂಡರ್‍ವೇರ್ ಕಂಪನಿ!

‘ವೀಕೆಂಡ್ ವಿಥ್ ರಮೇಶ್’ ನೋಡಿದ ಮೇಲೆ ಅನಿಸಿದ್ದು: ಮೋದಿಯವರನ್ನು ಅತಿಥಿಯಾಗಿ ಕರೆದರೆ ಹೇಗೆ? ಓದಿದ ಸ್ಕೂಲ್, ಚಾ ಮಾರಿದ ಸ್ಟೇಷನ್, ಅವರ ಬಾಲ್ಯದ ಸಹಪಾಠಿಗಳನ್ನು ಕರೆಸಲು ಸಾಧ್ಯವಾ? ಅವರ ತಾಯಿ ಕರೆಸಬಹುದು, ಪತ್ನಿ ಬರುವುದು ಡೌಟು… ಸರ್, ಮಾವಿನ ಹಣ್ಣು ತಿಂದು ತೋರಿಸಿ ಅನ್ನೋದು…..ಇವೆಲ್ಲ ಕಷ್ಟ ಅಲ್ಲವಾ ರಮೇಶ್ ಅರವಿಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...