Homeಅಂಕಣಗಳುಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

ಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

- Advertisement -
- Advertisement -

ನಂದಿಗ್ರಾಮದ ಹಿಂಸಾಚಾರ ಈ ಸರ್ಕಾರವನ್ನು ಪತನದ ಇಳಿಜಾರಿಗೆ ನೂಕಿತ್ತು. ರಾಜ್ಯವನ್ನು ಕೈಗಾರಿಕೀಕರಣದ ಹಾದಿಗೆ ಹಚ್ಚುವ ಭರದಲ್ಲಿ ಕುರುಡಾಗಿ ಜೇನುಹುಟ್ಟಿಗೆ ಕೈ ಇಟ್ಟಿತ್ತು ವಾಮವಾದಿ ಆಡಳಿತ. 2011ರಲ್ಲಿ ಛಿದ್ರವಾದ ಕೆಂಪುಕೋಟೆಯ ಅಡಿಯಲ್ಲಿ ಇಡಲಾದ ಸಿಡಿಮದ್ದು ತಯಾರಾದದ್ದು ನಂದಿಗ್ರಾಮದ ಮೂಸೆಯಲ್ಲಿ. ಆದರೆ ಈ ಸಿಡಿಮದ್ದನ್ನು ಅರೆದು ಗಟ್ಟಿ ಮಾಡುವ ಕ್ರಿಯೆಯಲ್ಲಿ ಖುದ್ದು ಎಡರಂಗ ಸರ್ಕಾರ ಕೈಜೋಡಿಸಿದ್ದು ಬಹುದೊಡ್ಡ ವಿಡಂಬನೆ. ಈ ಪರಿಯ ಮೈಮರೆವಿನಲ್ಲಿ ಮುಳುಗಿದ್ದ ಎಡರಂಗಕ್ಕೆ ಕಾಲ ಕೆಳಗಿನ ನೋಟವೇ ಕಾಣದಾಗಿತ್ತು. ತಪ್ಪುಗಳ ಮೇಲೆ ತಪ್ಪುಗಳನ್ನು ಮಾಡುತ್ತಲೇ ಹೋಯಿತು. ತಾನು ಜನರ ನಡುವೆ ಕೆಲಸ ಮಾಡಿ ಕಟ್ಟಿ ಬೆಳೆಸಿದ್ದ ಜನಶಕ್ತಿಯ ಕ್ರೋಧವನ್ನು ತನ್ನ ಮೈಮೇಲೆ ಎಳೆದುಕೊಂಡಿತು. ನೆಲಕ್ಕೆ ಆನಿಸಿ ಜನದನಿಯನ್ನು ಆಲಿಸಬೇಕಿದ್ದ ಕಿವಿಗಳಲ್ಲಿ ಟೊಳ್ಳುಗಾಳಿಯ ಸದ್ದೇ ತುಂಬಿ ಹೋಗಿತ್ತು. ದಮನದ ದಾರಿಯನ್ನು ಆರಿಸಿಕೊಂಡಿತು. ಎಡರಂಗದ ಕಾರ್ಯಕರ್ತರು ಪೊಲೀಸರ ವೇಷ ಧರಿಸಿದ್ದರು. ಅವರ ಕೈಯಲ್ಲಿ ಬಂದೂಕುಗಳಿದ್ದವು. ಹಿಂಸೆಯಲ್ಲಿ ಮುಳುಗೆದ್ದ ನಂದಿಗ್ರಾಮ ರಣರಂಗವಾಗಿತ್ತು. 14 ಮಂದಿ ಅಸುನೀಗಿದ್ದರು. ಎಡರಂಗ ಸರ್ಕಾರ 2011ರಲ್ಲಿ ಘೋರ ಪರಾಭವ ಕಂಡಿತ್ತು.

ಅಂದು ಮಮತಾ ಗೆಲುವಿನ ಪಯಣವನ್ನು ನಿರ್ಣಯಿಸಿದ್ದ ಅದೇ ನಂದಿಗ್ರಾಮ ಇಂದು ಆಕೆಯನ್ನು ಸತ್ವಪರೀಕ್ಷೆಗೆ ಗುರಿಪಡಿಸಿದೆ. ನಂದಿಗ್ರಾಮ ಮತ್ತು ಸಿಂಗೂರಿನಲ್ಲಿ ಕೃಷಿ ವ್ಯವಸ್ಥೆ ಮತ್ತು ಕೈಗಾರಿಕೀಕರಣದ ಕವಲುದಾರಿಯಲ್ಲಿ ನಿಂತಿತ್ತು ಬಂಗಾಳ. ಎಡರಂಗ ಸರ್ಕಾರ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಗೊಡವೆಗೆ ಹೋಗದೆ ದುಡುಕಿತು. ಬಲವಂತ ಭೂಗ್ರಹಣದ ವಿರುದ್ಧ ಜನರೊಂದಿಗೆ ನಿಂತು ಮಮತಾ ಕಟ್ಟಿ ಬೆಳೆಸಿದ ಆಂದೋಲನವನ್ನು ಹಣಿಯಲು ಹೋಗಿ ಮಣ್ಣು ಮುಕ್ಕಿತು. ಆದರೆ ಅಂದು ಕೈಗಾರಿಕೆಗಳ ಸ್ಥಾಪನೆಗೆ ಕೃಷಿ ಭೂಮಿಯ ಬಲವಂತದ ಸ್ವಾಧೀನವನ್ನು ವಿರೋಧಿಸಿದ ಮಮತಾ ದೀದಿ ಕಳೆದ ಹತ್ತು ವರ್ಷಗಳ ತಮ್ಮ ಆಡಳಿತದಲ್ಲಿ ಮಾಡಿದ್ದಾದರೂ ಏನು? ಕೃಷಿ ಮತ್ತು ಕೈಗಾರಿಕೆಯ ಸಮನ್ವಯ ಅರ್ಥವ್ಯವಸ್ಥೆಯೊಂದನ್ನು ಜನವಿಶ್ವಾಸದ ಅಡಿಪಾಯದ ಮೇಲೆ ಕಟ್ಟಿ ಬೆಳೆಸಬೇಕಿತ್ತಲ್ಲವೇ? ಈ ಕಾರ್ಯದಲ್ಲಿ ಅವರು ಸಂಪೂರ್ಣ ವಿಫಲರಾದರು.

ಬಂಗಾಳದ ಅರ್ಥವ್ಯವಸ್ಥೆ ಹೆಚ್ಚೂಕಡಿಮೆ ಹದಿನಾಲ್ಕು ವರ್ಷಗಳ ಹಳೆಯ ನಂದಿಗ್ರಾಮ-ಸಿಂಗೂರುಗಳಲ್ಲೇ ಹೂತು ಹೋಗಿದೆ. ನಂದಿಗ್ರಾಮ ಹೊಮ್ಮಿಸಿದ ಸವಾಲುಗಳ ನೋಟಕ್ಕೆ ನೋಟ ಬೆರೆಸಿ ನೋಡಲಿಲ್ಲ ಮಮತಾ ಆಡಳಿತ. ಮಮತಾ ದಂಡು ಮತ್ತು ದಂಡನಾಯಕರು ನಡೆಸಿದ ಭ್ರಷ್ಟಾಚಾರವನ್ನೂ ತಮ್ಮ ಕೊರಳಿಗೆ ಸುತ್ತಿಕೊಂಡಿದ್ದಾರೆ. ಪರಿವರ್ತನೆಯ ಮಂತ್ರ ಜಪಿಸಿ ಅಧಿಕಾರಕ್ಕೆ ಬಂದವರು ಮಮತಾ. ಸರ್ಕಾರದ ಪರಿವರ್ತನೆ ಆಯಿತೇ ವಿನಾ ವ್ಯವಸ್ಥೆ ಬದಲಾಗಲಿಲ್ಲ. ಹಾಗೆಂದು ಮಮತಾ ಆಡಳಿತದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎನ್ನುವುದು ತಪ್ಪಾದೀತು. ಆದರೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿಲ್ಲ. ಅದರ ಸುತ್ತ ಬೆಸೆದಿದ್ದ ಆಶೋತ್ತರಗಳು ಚಿಗಿತು ಫಲ ನೀಡಲಿಲ್ಲ. ನಿಜ, ಮಮತಾ ಆಡಳಿತ ವಿರೋಧಿ ಅಲೆಯನ್ನೇನೂ ಎದುರಿಸಿಲ್ಲ.

ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು
PC: Deccan herald

ಎರಡು ಅವಧಿಗಳ ನಂತರವೂ ಅಂತಹ ಅಲೆ ಇಲ್ಲದಿರುವುದು ಸಾಧಾರಣ ಸಂಗತಿಯೇನೂ ಅಲ್ಲ. ತಾವು ಎಡಕ್ಕಿಂತ ಹೆಚ್ಚು ಎಡ ಎಂದು ತೋರಿಸಿಕೊಂಡ ದೀದಿ ನೀತಿ ನಿರ್ಧಾರಗಳಲ್ಲಿ ಮೂಲಭೂತ ಬದಲಾವಣೆಗೆ ಕೈ ಹಾಕಲಿಲ್ಲ. ಹೀಗಾಗಿ ನಿರಾಸೆಯ ಅಂತರ್ವಾಹಿನಿ ಜನಮಾನಸದಲ್ಲಿ ಹರಿದಿರುವುದು ಹೌದು. ಅದು ಭ್ರಮನಿರಸನದ ರೂಪನ್ನು ಇನ್ನೂ ತಳೆದಿಲ್ಲವೆಂದರೆ ಮಮತಾ ಸರ್ಕಾರದ ಹಲವಾರು ಜನಪ್ರಿಯ ಕಾರ್ಯಕ್ರಮಗಳೇ ಕಾರಣ. ಎಡರಂಗವೇ ಪ್ರತಿಪಕ್ಷವಾಗಿ ಉಳಿದಿದ್ದರೆ ಮಮತಾಗೆ ಎದುರೇ ಇರುತ್ತಿರಲಿಲ್ಲ. ಆದರೆ ಎಡರಂಗ ಮತ್ತು ಕಾಂಗ್ರೆಸ್ ಉಳಿಸಿರುವ ಶೂನ್ಯವನ್ನು ಮೋದಿ ಮತ್ತು ಅಮಿತ್ ಶಾ ಅವರ ಅತ್ಯುಗ್ರ ಅಕ್ರಮಣಕಾರಿ ಹಿಂದುತ್ವ ರಾಜಕಾರಣ ಕಬಳಿಸಿದೆ.

ಎದುರಾದದ್ದನ್ನೆಲ್ಲ ಉರುಳಿಸಿ ನೆಲಸಮ ಮಾಡುವ ದೈತ್ಯ ಬುಲ್ಡೋಜರ್ ರಾಜಕಾರಣವಿದು. ಹುಟ್ಟಾ ಬಂಡಾಯಗಾರ್ತಿ ಎಂಬ ಪಟ್ಟ ಪಡೆದಿರುವ ಮಮತಾ ಅವರನ್ನೂ ಅಲ್ಲಾಡಿಸಿರುವ ದಾಳಿಯಿದು. ಬೇರುಮಟ್ಟದಲ್ಲಿ ರಾಜಕಾರಣವನ್ನು ನಿಯಂತ್ರಿಸುವ ತೋಳ್ಬಲ-ಧನಬಲದ ಕಟ್ಟಾಳುಗಳನ್ನು ತೃಣಮೂಲದಿಂದ ಸೆಳೆದುಕೊಂಡಿದೆ ಬಿಜೆಪಿ. ಶಾರದ-ನಾರದ ಹಗರಣಗಳಲ್ಲಿ ಕಳಂಕಿತರಾದ ಹಲವು ತೃಣಮೂಲ ತಲೆಯಾಳುಗಳು ಇಂದು ಬಿಜೆಪಿ ಎಂಬ ’ಗಂಗೆ’ಯಲ್ಲಿ ಮುಳುಗಿ ’ಪವಿತ್ರ’ರಾಗಿದ್ದಾರೆ. ಹೀಗಾಗಿ ಬಿಜೆಪಿ ಕೇವಲ ’ಕಟ್ ಮನಿ’ ಭ್ರಷ್ಟಾಚಾರದ ವಿರುದ್ಧ ಕತ್ತಿ ಝಳಪಿಸುತ್ತಿದೆಯೇ ವಿನಾ ಶಾರದ- ನಾರದ ಚಿಟ್ ಫಂಡ್ ಹಗರಣಗಳ ಕುರಿತು ತುಟಿ ಹೊಲಿದುಕೊಂಡಿದೆ.

ಬೀಡುಬೀಸು ಪಕ್ಷಾಂತರ, ಹಣದಶಕ್ತಿಯ ಅಬ್ಬರ, ಕೇಂದ್ರದ ಅಧಿಕಾರದ ದಂಡದ ಯಥೇಚ್ಛ ಬಳಕೆ, ಕೋಮುವಾದಿ ಧ್ರುವೀಕರಣ ಹಾಗೂ ಮಿಥ್ಯಾಪ್ರಚಾರದ ಹಲವು ಹತಾರುಗಳನ್ನು ಝಳಪಿಸುತ್ತ ಬಿಜೆಪಿ ಬಂಗಾಳಕ್ಕೆ ಲಗ್ಗೆ ಹಾಕಿ ವರ್ಷಗಳೇ ಉರುಳಿವೆ. ತನ್ನ ಸನ್ನಾಹದಲ್ಲಿ ಅದು ಕಣ್ಣುಕುಕ್ಕುವ ಯಶಸ್ಸನ್ನು ಕಂಡಿದೆ ಕೂಡ. ಇಂದು ಬಂಗಾಳದ ಅಧಿಕಾರದ ಗದ್ದುಗೆಯ ಮೇಲೆ ಕೈಯಿರಿಸಿ ನಿಂತೀತೆಂದು ಹತ್ತು ವರ್ಷಗಳ ಹಿಂದೆ ಯಾರೂ ಊಹಿಸಿರಲಿಲ್ಲ.

ಇಂತಹ ಬಿಜೆಪಿ ಪ್ರವೇಶದ ನಂತರ ಪಶ್ಚಿಮ ಬಂಗಾಳದ ಬದಲಾದ ರಾಜಕಾರಣದ ವಿನ್ಯಾಸದ ಸುಳಿವುಗಳು ನಂದಿಗ್ರಾಮದ ಮಮತಾ ಬ್ಯಾನರ್ಜಿ-ಸುವೇಂದು ಅಧಿಕಾರಿ ಹಣಾಹಣಿಯಲ್ಲಿ ಕಾಣಸಿಗುತ್ತವೆ. ನಂದೀಗ್ರಾಮದ ಪರಿಶಿಷ್ಟ ಜಾತಿ-ಪಂಗಡಗಳ ಜನಸಂಖ್ಯೆಯ ಪ್ರಮಾಣ ಶೇ.16.5. ಈ ಸಮುದಾಯಗಳನ್ನೂ ಒಡೆದಿರುವ ಬಿಜೆಪಿ, ಹಿಂದೂ-ಮುಸ್ಲಿಮ್ ಧ್ರುವೀಕರಣ ಮತ್ತು ಭಾರೀ ಪ್ರಮಾಣದ ಪಕ್ಷಾಂತರದ ಮೂಲಕ ನಂದೀಗ್ರಾಮವನ್ನು ಗೆಲ್ಲಲು ಹೊರಟಿದೆ. ಈ ಮಾತು ಇಡೀ ಪಶ್ಚಿಮ ಬಂಗಾಳಕ್ಕೆ ಅಕ್ಷರಶಃ ವಿಸ್ತರಿಸಲಿದೆ. ನಂದಿಗ್ರಾಮದ ಕಂಪನಗಳು ರಾಜ್ಯಾದ್ಯಂತ ಹರಿಯಲಿವೆ. ಚುನಾವಣಾ ಫಲಿತಾಂಶಗಳ ನಂತರವೂ ಮುಂದುವರೆಯಲಿವೆ.

ಭಾರತದ ಸಹಬಾಳ್ವೆಯ ಆತ್ಮದ ಅಳಿವು ಉಳಿವಿಗಾಗಿ ನಡೆದಿರುವ ಬಂಗಾಳದ ಸಮರದ ಆತ್ಮ ನಂದಿಗ್ರಾಮ. ಇಲ್ಲಿ ಮಮತಾ ಸೋತರೆ ಈ ಉತ್ಪಾತದ ಕಂಪನಗಳು ದೇಶದ ಜನತಂತ್ರವನ್ನು ಅಸ್ಥಿರಗೊಳಿಸುವುದು ನಿಶ್ಚಿತ. ಬಿಜೆಪಿ ಬಯಸುತ್ತಿರುವ ಪ್ರತಿಪಕ್ಷಮುಕ್ತ ಭಾರತ ಬಾಗಿಲು ಬಡಿಯುತ್ತಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...