Homeಕರ್ನಾಟಕನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ - ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

- Advertisement -
- Advertisement -

ಆರನೇ ವೇತನ ಆಯೋಗದ ವರದಿ ಜಾರಿ ಮಾಡಬೇಕು ಎಂಬ ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಸಾರಿಗೆ ನೌಕರರು ಆರು ದಿನದಿಂದ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರ ನಾಳೆಯು ಮುಂದುವರೆಯಲಿದ್ದು, ಯುಗಾದಿಗೆ ತಟ್ಟೆ ಹಿಡಿದು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೋಮವಾರ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾಳೆ ಯುಗಾದಿ ಹಬ್ಬ ಆಚರಿಸಬೇಕು, ಆದರೆ ಮಾರ್ಚ್ ತಿಂಗಳ ವೇತನ ನೀಡದೇ ಸರ್ಕಾರ ವಂಚನೆ ಮಾಡಿದೆ. ಸರ್ಕಾರಕ್ಕೆ ಉಪ ಚುನಾವಣೆ ಮುಖ್ಯವಾಗಿದೆ. 1.30 ಲಕ್ಷ ನೌಕರರ ಜೀವನ ನೋಡುತ್ತಿಲ್ಲ. ಮಾತುಕತೆ ಮಾಡಲ್ಲ, ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

“ನೌಕರರ ಕುಟುಂಬದ ಸದಸ್ಯರೆಲ್ಲ ಇಂದು ತಟ್ಟೆ, ಲೋಟ ಬಾರಿಸಿ ಹೋರಾಟ ಮಾಡಿದ್ದಾರೆ. ಈ ಅಹಿಂಸಾತ್ಮಕ ಚಳುವಳಿ ಮುಂದುವರೆಯುತ್ತದೆ. ನಾಳೆ ಯುಗಾದಿ ಹಬ್ಬದ ದಿನ ತಟ್ಟೆ ಹಿಡಿದು ಭಿಕ್ಷೆ ಬೇಡುವ ಮೂಲಕ ಹೋರಾಟ ಮಾಡಲಾಗುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕುಟುಂಬದ ಸದಸ್ಯರಿಂದ ಭಿಕ್ಷಾಟನೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ಹಬ್ಬ ಮಾಡಲು ವೇತನ ನೀಡುವುದಿಲ್ಲ‌ ಎಂದರೆ ಹೇಗೆ? ಅದ್ಯಾವ ಹಿಂದು ಪರಿಪಾಲಕರು ನೀವು? ಹಿಂದೂ ಧರ್ಮ ಪ್ರತಿಪಾದಕರೇ ಎಲ್ಲಿದ್ದೀರಿ? ಸಚಿವರೇ, ಹಿಂದೂ ಮುಖಂಡರೇ ಮುಂದೆ ಬನ್ನಿ, ನಮ್ಮ ಸಮಸ್ಯೆ ಬಗೆಹರಿಸಿ. ಕೆಲಸ‌ ಮಾಡಿದ ವೇತನ ಯಾಕೆ‌ ಕೊಡುತ್ತಿಲ್ಲ. ಮುಖ್ಯಮಂತ್ರಿಗೆ ಹೇಳಿ ವೇತನ ಕೊಡಿಸಿ ಸಮಸ್ಯೆ ಬಗೆಹರಿಸಿ. ಮಾತು ಕೊಟ್ಟಿದ್ದೀರಿ, ಲಿಖಿತವಾಗಿ ಸರಕಾರದ‌ ಪ್ರತಿನಿಧಿಗಳು ಬರೆದುಕೊಟ್ಟಿದ್ದೀರಿ, ಅದರಂತೆ ನಡೆದುಕೊಳ್ಳಿ” ಎಂದು ಅವರು ಆಗ್ರಹಿಸಿದರು.

“ಮುಖ್ಯಮಂತ್ರಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಬೇಕು. ಅದು ಬಿಟ್ಟು ಕೆಲಸಕ್ಕೆ‌ ಬರುವವರಿಗೆ ಮಾತ್ರ ವೇತನ ನೀಡುವುದು ಸರಿಯಲ್ಲ. ಮುಖ್ಯಮಂತ್ರಿಗಳೇ ಈ ತಪ್ಪು ಮಾಡಬಾರದು. ಡಿಪೋ ಮ್ಯಾನೇಜರ್ ವಿರುದ್ದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಾರ್ಚ್ ತಿಂಗಳ ವೇತನ ಕೊಟ್ಟಿಲ್ಲ ಎಂದು ನಾಳೆ ದೂರು ದಾಖಲಿಸುತ್ತೇವೆ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...