Homeಮುಖಪುಟಮೇ 2 ರೊಳಗೆ ರಾಜ್ಯಸಭಾ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಕೇರಳ ಹೈಕೋರ್ಟ್ ಆದೇಶ

ಮೇ 2 ರೊಳಗೆ ರಾಜ್ಯಸಭಾ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಕೇರಳ ಹೈಕೋರ್ಟ್ ಆದೇಶ

- Advertisement -
- Advertisement -

ಕೇರಳದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಪೂರ್ಣಗೊಳಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇರಳ ಹೈಕೋರ್ಟ್ ಏಪ್ರಿಲ್ 12 ರಂದು ಭಾರತ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ.

ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ತೀರ್ಪಿನ ವಿರುದ್ಧ ಕೇರಳ ಹೈಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ. ರಾಜ್ಯದಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮೇ 2 ರೊಳಗೆ ನಡೆಯಬೇಕು ಎಂದು ಹೈಕೋರ್ಟ್ ಹೇಳಿದೆ.

ಸಿಪಿಎಂ ಮತ್ತು ವಿಧಾನಸಭೆಯ ಕಾರ್ಯದರ್ಶಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಏಪ್ರಿಲ್ 12 ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಈ ಹಿಂದೆ ನಿರ್ಧರಿಸಿತ್ತು. ಆದರೆ ಅಧಿಸೂಚನೆಯನ್ನು ಪ್ರಕಟಿಸುವ ದಿನ ಚುನಾವಣೆಯನ್ನು ಮುಂದೂಡಲು ನಿರ್ಧರಿಸಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ 50% ಸಿಬ್ಬಂದಿಗೆ ಕೊರೊನಾ ಸೋಂಕು, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ

ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸಿಪಿಎಂ ಮತ್ತು ವಿಧಾನಸಭೆಯ ಕಾರ್ಯದರ್ಶಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಯಲಾರ್ ರವಿ (ಕಾಂಗ್ರೆಸ್‌),  ಅಬ್ದುಲ್‌ ವಹಾಬ್‌ (ಐಯುಎಂಎಲ್‌), ಕೆ.ಕೆ.ರಾಗೇಶ್‌ (ಸಿಪಿಎಂ), ಮೂವರು ಸದಸ್ಯರು ಏಪ್ರಿಲ್‌ 21ರಂದು ನಿವೃತ್ತರಾಗುತ್ತಿದ್ದು, ತೆರವಾಗುವ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.

“ಹೊಸ ಚುನಾಯಿತ ಪ್ರತಿನಿಧಿಗಳು ಬರುವ ಮೇ 2 ರ ಒಳಗೆ ಮೊದಲು ಖಾಲಿ ಸ್ಥಾನಗಳಿಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತವಾಗಿದೆ” ಎಂದು ನ್ಯಾಯಮೂರ್ತಿ ಪಿ.ವಿ.ಆಶಾ ತಿಳಿಸಿದ್ದಾರೆ.

ಏಪ್ರಿಲ್ 21 ರಂದು ನಿವೃತ್ತ ಸದಸ್ಯರ ಅವಧಿ ಮುಗಿಯುವ ಮೊದಲು ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಲು ಮತ್ತು ತಿಳಿಸಲು ನಿರ್ಧರಿಸಲಾಗಿತ್ತು. ಚುನಾವಣೆಯ ವೇಳಾಪಟ್ಟಿಯನ್ನು ನಿಗದಿಪಡಿಸುವುದು ಆಯೋಗದ ವ್ಯಾಪ್ತಿಯಲ್ಲಿತ್ತು. ಆದರೆ, ಆಯೋಗವು ಚುನಾವಣೆಗೆ ನಿರ್ದಿಷ್ಟ ದಿನಾಂಕ ನಮೂದಿಸಿರಲಿಲ್ಲ.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯದ ಉಲ್ಲೇಖದ ಮೇರೆಗೆ ಚುನಾವಣಾ ಪ್ರಕ್ರಿಯೆಯನ್ನು ಕೈಬಿಡುವ ಆಯೋಗದ ನಿರ್ಧಾರದ ವಿರುದ್ಧ ಅರ್ಜಿ ಸಲ್ಲಿಸಲಾಗಿತ್ತು. ಇದು ಸಂವಿಧಾನವು ಖಾತರಿಪಡಿಸಿದ ಆಯೋಗದ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ ಎಂದು ಅರ್ಜಿದಾರರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.


ಇದನ್ನೂ ಓದಿ: ಆಪರೇಷನ್ ಕಮಲ ಭೀತಿ – ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ವಿದೇಶಕ್ಕೆ ಕಳುಹಿಸಿದ ಬಿಪಿಎಫ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...