Homeಮುಖಪುಟಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

- Advertisement -
- Advertisement -

ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ಪಶ್ಚಿಮ ಬಂಗಾಳದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖ್ಯಸ್ಥ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿಯ ರಾಹುಲ್ ಸಿನ್ಹಾ ಸೋಮವಾರ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ನಾಲ್ಕು ಜನರಿಗಲ್ಲ 8 ಜನರಿಗೆ ಗುಂಡು ಹಾರಿಸಬೇಕಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೀತಾಲ್ಕುಚ್ಚಿಯಲ್ಲಿನ ತುಂಟ ಹುಡುಗರು ಗುಂಡೇಟು ತಿಂದಿದ್ದಾರೆ. ಮುಂದಿನ ಹಂತದ ಮತದಾನದಲ್ಲಿ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರೆ ಮತ್ತಷ್ಟು ಗುಂಡೇಟು ತಿನ್ನಬೇಕಾಗುತ್ತದೆ. ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ತರಹದ ಹತ್ಯೆಗಳು ಸಂಭವಿಸಬಹುದು ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಬೆದರಿಕೆ ಹಾಕಿದ್ದರು.

ಈ ಘಟನೆ ಬಗ್ಗೆಯೇ ಮಾತನಾಡಿರುವ ಹಬ್ರಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿ ರಾಹುಲ್ ಸಿನ್ಹಾ ಚುನಾವಣಾ ಪ್ರಚಾರದಲ್ಲಿ, ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ಗಲಭೆಯಲ್ಲಿ ನಾಲ್ಕು ಜನರನ್ನಲ್ಲ, ಎಂಟು ಜನರನ್ನು ಕೇಂದ್ರ ಪಡೆಗಳು ಗುಂಡಿಕ್ಕಿ ಕೊಂದಿರಬೇಕಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರನ್ನು ವಾರೆಂಟ್ ಇಲ್ಲದೆ ಬಂಧಿಸಿ ‘ಪೊಲೀಸ್ ರಾಜ್ಯ’ ಮಾಡುತ್ತಿದ್ದಾರೆಯೆ: ಸಿದ್ದರಾಮಯ್ಯ

ರಾಹುಲ್ ಸಿನ್ಹಾ, “ಸೀತಾಲ್ಕುಚ್ಚಿಯಲ್ಲಿ ನಾಲ್ವರ ಬದಲು ಎಂಟು ಜನರನ್ನು ಕೇಂದ್ರ ಪಡೆಗಳು ಕೊಲ್ಲಬೇಕಾಗಿತ್ತು. ಏಕೆಂದರೆ, ಬಿಜೆಪಿಗೆ ಮತ ನೀಡಲು ಬಂದಿದ್ದ 18 ವರ್ಷದ ಯುವಕನನ್ನು ಮಮತಾ ಬ್ಯಾನರ್ಜಿ ಬೆಂಬಲಿಗರು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಂದಿದ್ದರು” ಎಂದು ಆರೋಪಿಸಿದ್ದಾರೆ.

ಕೂಚ್ ಬೆಹರ್ ಶೂಟೌಟ್ ಬಗ್ಗೆ ನಾಲಿಗೆ ಹರಿ ಬಿಟ್ಟಿರುವ ಬಿಜೆಪಿ ನಾಯಕರ ಕುರಿತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜ್ಯೋತಿ ಪ್ರಿಯಾ ಮಲ್ಲಿಕ್  ಚುನಾವಣಾ ಆಯೋಗವು ಪಕ್ಷವನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೂಚ್ ಬೆಹಾರ್‌ನ ಸೀತಾಲ್ಕುಚ್ಚಿ ಹತ್ಯಾಕಾಂಡದಂತಹ ಘಟನೆಗಳು ಮರುಕಳಿಸುತ್ತವೆ ಎಂದು ಬೆದರಿಕೆ ಹಾಕುತ್ತಿರುವವರನ್ನು ರಾಜಕಾರಣದಿಂದ ನಿಷೇಧಿಸಬೇಕು ಎಂದು ರಾಣಾಘಾಟ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ದಿಲೀಪ್ ಘೋಷ್ ಮಾತನಾಡಿರುವ ವಿಡಿಯೋವನ್ನು ಸೇರಿಸಲಾಗಿದೆ.


ಇದನ್ನೂ ಓದಿ: ಬಂಗಾಳ: ಮಮತಾ ಬ್ಯಾನರ್ಜಿಗೆ 24 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...