Homeಕರೋನಾ ತಲ್ಲಣಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

ಛತ್ತೀಸ್‌ಗಢ: ಸರ್ಕಾರಿ ಆಸ್ಪತ್ರೆ ಹೊರಗಡೆ ಕೊರೊನಾ ಸೋಂಕಿತರ ಮೃತದೇಹಗಳ ರಾಶಿ

- Advertisement -
- Advertisement -

ರಾಯ್‌ಪುರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಶವಾಗಾರದಲ್ಲಿ ಇಡಲು ಸಾಧ್ಯವಾಗದೆ, ಆಸ್ಪತ್ರೆಯ ಹೊರಗಡೆ ಬಿಸಿಲಿನಲ್ಲಿ ಸ್ಟ್ರೆಚರ್ ಮೇಲೆ ಮಲಗಿಸಿರುವ ಚಿತ್ರಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಛತ್ತೀಸ್‌ಗಢ ಕೊರೊನಾ ಎರಡನೇ ಅಲೆಗೆ ತತ್ತರಿಸಿದೆ. ಕೊರೊನಾ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶದ 10 ರಾಜ್ಯಗಳಲ್ಲಿ ಛತ್ತೀಸ್‌ಗಢ ಕೂಡ ಒಂದು. ಹೆಚ್ಚು ಪ್ರಕರಣಗಳನ್ನು ದಾಖಲಿಸಿರುವ ರಾಯ್‌ಪುರ ಮತ್ತು ದುರ್ಗ್ ಜಿಲ್ಲೆಗಳು ಸಂಪೂರ್ಣ ಲಾಕ್‌ಡೌನ್ ಹಂತದಲ್ಲಿವೆ.

ಕೊರೊನಾ ಉಲ್ಬಣದಿಂದ ಮರಣ ಪ್ರಮಾಣ ಹೆಚ್ಚಾಗಿದ್ದು, ರಾಯ್‌ಪುರದ ಡಾ.ಭೀಮ್‌ರಾವ್ ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲು ಸ್ಥಳಾವಕಾಶವಿಲ್ಲ. ಈಗ ಲಭ್ಯವಿರುವ ಸ್ಥಳಗಳಲ್ಲಿ ಎಲ್ಲಿಯಾದರೂ ಶವಗಳನ್ನು ಇರಿಸಲಾಗುತ್ತಿದೆ ಎಂದು ಎನ್‌ಡಿಟಿವಿ ತಿಳಿಸಿದೆ. ವಿಡಿಯೊ ವೈರಲ್ ಆಗಿವೆ.

ಇದನ್ನೂ ಓದಿ: ಮುಂಬೈ: ಕೊರೊನಾ ರೋಗಿಗಳಿಗೆ ಹಾಸಿಗೆ ಸೌಲಭ್ಯ ಒದಗಿಸಲಿದೆ ನೋಡಲ್ ಅಧಿಕಾರಿಗಳ ತಂಡ

ಇದರ ಕುರಿತು ಆಸ್ಪತ್ರೆಯ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕೊರೊನಾದಿಂದ ಸಾವನ್ನಪ್ಪುತ್ತಿರುವ ರೋಗಿಗಳ ಶವಗಳನ್ನು ಶವಸಂಸ್ಕಾರ ಮಾಡುವುದಕ್ಕಿಂತ ವೇಗವಾಗಿ ಶವಾಗಾರದಲ್ಲಿ ರಾಶಿ ರಾಶಿ ಶವಗಳು ಬರುತ್ತಿವೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.

ರಾಯ್‌ಪುರ ಆಸ್ಪತ್ರೆಯ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ-ಸುಸಜ್ಜಿತ ಹಾಸಿಗೆಗಳು ಕಳೆದ ಒಂದು ವಾರದಿಂದ ಸುಮಾರು ನೂರರಷ್ಟು ಭರ್ತಿಯಾಗುತ್ತಿವೆ. ಅಧಿಕೃತ ಮೂಲಗಳ ಪ್ರಕಾರ, ರಾಯ್‌ಪುರ ನಗರದಲ್ಲಿ ಪ್ರತಿದಿನ ಸರಾಸರಿ 55 ಶವಗಳನ್ನು ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಅವುಗಳಲ್ಲಿ ಹೆಚ್ಚಿನವು ಕೊರೊನಾ ಸೋಂಕಿತರ ಶವಗಳಾಗಿವೆ.

“ಒಂದೇ ಬಾರಿಗೆ ಇಷ್ಟೊಂದು ಸಾವುಗಳು ಸಂಭವಿಸುತ್ತವೆ ಎಂದು ಯಾರೂ ಊಹಿಸಿರಲಿಲ್ಲ. ಸಾಮಾನ್ಯ ಸಂಖ್ಯೆಯ ಸಾವುಗಳಿಗೆ ನಾವು ಸಾಕಷ್ಟು ಫ್ರೀಜರ್‌ಗಳನ್ನು ಹೊಂದಿದ್ದೇವೆ. ಆದರೆ ಒಂದರಿಂದ ಎರಡು ಸಾವುಗಳು ಸಂಭವಿಸುವ ಸ್ಥಳದಲ್ಲಿ 10-20 ವರದಿಯಾಗುತ್ತಿವೆ. 10-20, 50-60 ಜನರು ಮೃತಪಡುತ್ತಿದ್ದಾರೆ. ಒಂದೇ ಬಾರಿಗೆ ಎಷ್ಟು ಜನರಿಗೆ ಫ್ರೀಜರ್‌ಗಳನ್ನು ವ್ಯವಸ್ಥೆಗೊಳಿಸಬಹುದು?”ಎಂದು ರಾಯ್‌ಪುರದ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಮೀರಾ ಪ್ರಶ್ನಿಸಿದ್ದಾರೆ.

“ಕೊರೊನಾ ವಿರುದ್ಧ ಗೆಲ್ಲುತ್ತಿದ್ದೇವೆ ಎಂದು ಹೋಂ ಐಸೋಲೇಷನ್‌ಗೆ ಪ್ರಾಮುಖ್ಯತೆ ನೀಡುತ್ತಿದ್ದೇವು. ಅಷ್ಟರಲ್ಲಿ ಈ ಹೊಸ ಎರಡನೇ ಅಲೆ ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಲಕ್ಷಣರಹಿತ ರೋಗಿಗಳು ಸಹ ಬೇಗನೇ ಅಸ್ವಸ್ಥರಾಗುತ್ತಿದ್ದಾರೆ. ಜೊತೆಗೆ ಹೃದಯಾಘಾತದಿಂದ ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕುರ್‌‌ಆನ್‌‌‌‌ ಶ್ಲೋಕಗಳನ್ನು ತೆಗೆದುಹಾಕುವಂತೆ ಸಲ್ಲಿಸಿದ್ದ ಅರ್ಜಿಯನ್ನು ‘ಕ್ಷುಲ್ಲಕ’ ಎಂದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...