Homeಮುಖಪುಟಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

- Advertisement -
- Advertisement -

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಒಂದು ದಶಲಕ್ಷ ಟನ್‌ಗಿಂತಲೂ ಹೆಚ್ಚು ಸಂಸ್ಕರಿಸಿದ ನೀರನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇದನ್ನು ಚೀನಾ ಸೇರಿದಂತೆ ಸ್ಥಳೀಯ ಮೀನುಗಾರಿಕಾ ಸಮುದಾಯಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಪ್ರಕ್ರಿಯೆಯು ಪ್ರಾರಂಭವಾಗಲು ಇನ್ನೂ ಹಲವಾರು ವರ್ಷಗಳು ಬೇಕಾಗಿದ್ದು, ಪೂರ್ಣಗೊಳ್ಳಲು ದಶಕಗಳೇ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಯೋಜನೆಯ ವಿರುದ್ದ ವಿವಾದಗಳು ಮತ್ತು ವಿರೋಧಗಳು ಈಗಾಲೇ ಪ್ರಾರಂಭವಾಗಿದೆ.

ಜಪಾನ್ ಯೋಜನೆಯನ್ನು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಚೀನಾ ಈ ನಿರ್ಧಾರವನ್ನು “ಅತ್ಯಂತ ಬೇಜವಾಬ್ದಾರಿಯುತ” ಎಂದು ಕರೆದಿದೆ. ಆದರೆ ಜಪಾನ್ ಸರ್ಕಾರ ತನ್ನ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ನೀರು ಬಿಡುಗಡೆ ಸುರಕ್ಷಿತವಾಗಿರುತ್ತದೆ ಎಂದು ವಾದಿಸಿದೆ. ಯಾಕೆಂದರೆ ನೀರಿನಲ್ಲಿ ಇರುವ ಎಲ್ಲಾ ವಿಕಿರಣದ ಅಂಶಗಳನ್ನು ಸಂಸ್ಕರಿಸಿ, ದುರ್ಬಲಗೊಳಿಸಿ, ತೆಗೆದುಹಾಕಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯು ನೀರು ಬಿಡುಗಡೆಯನ್ನು ಅನುಮೋದಿಸಿದೆ, ಇದು ವಿಶ್ವದ ಬೇರೆಡೆ ಪರಮಾಣು ಸ್ಥಾವರಗಳಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆಯೇ ಇದೆ ಎಂದು ಹೇಳಿದೆ.

2011 ರ ಸುನಾಮಿಯ ನಂತರ ದುರ್ಬಲಗೊಂಡಿರುವ ಪರಮಾಣು ಸ್ಥಾವರವನ್ನು ನಿರ್ಮೂಲನೆ ಮಾಡುವ ದಶಕಗಳ ಪ್ರಕ್ರಿಯೆಯಲ್ಲಿ ನೀರನ್ನು ವಿಲೇವಾರಿ ಮಾಡುವುದು “ಅನಿವಾರ್ಯ ಕಾರ್ಯ” ಎಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಸಚಿವರ ಸಭೆಯಲ್ಲಿ ಹೇಳಿದ್ದಾರೆ.

ಆ ಪರಮಾಣು ಸ್ಥಾವರದಲ್ಲಿ ಸುಮಾರು 1.25 ದಶಲಕ್ಷ ಟನ್ ನೀರು ಟ್ಯಾಂಕ್‌ಗಳಲ್ಲಿ ಸಂಗ್ರಹವಾಗಿದೆ ಎನ್ನಲಾಗಿದೆ.

ದೇಶದ ಮೀನುಗಾರಿಕಾ ಸಮುದಾಯಗಳು ನೀರನ್ನು ಬಿಡುಗಡೆ ಮಾಡುವುದರಿಂದ ಈ ಪ್ರದೇಶದಿಂದ ಸಮುದ್ರಾಹಾರದ ಮೇಲೆ ಹೊಡೆತ ಬೀಳುತ್ತದೆ ಮತ್ತುಅದನ್ನು ಮರು ಸ್ಥಾಪಿಸಲು ಹಲವು ವರ್ಷಗಳೆ ಹಿಡಿಯುತ್ತದೆ ಎಂದು ವಾದಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಜ್ಞಾನಿ, ಲೇಖಕ ನಾಗೇಶ್ ಹೆಗಡೆ, “ಜಪಾನ್ ಫುಕೋಶಿಮಾದ ನೀರನ್ನು ಕಳೆದ ಏಳು ವರ್ಷದಿಂದ ಸಮುದ್ರಕ್ಕೆ ಬಿಡುತ್ತಿದ್ದಾರೆ. ಒಂದು ಕಡೆ ಅಮೆರಿಕಾ ಒತ್ತಡವಿದ್ದರೆ, ಇನ್ನೊಂದು ಕಡೆ ದಿನ ದಿನ ಫುಕೋಷಿಮಾದ ನೀರು ಜಾಸ್ತಿಯಾಗುತ್ತಿರುವುದರಿಂದ ಜಪಾನ್‌ಗೂ ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಇದೀಗ ಅನಿವಾರ್ಯವಾಗಿ ನೀರು ಬಿಡುಗಡೆ ಬಗ್ಗೆ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

May be an image of 1 person
ನಾಗೇಶ್ ಹೆಗಡೆ

“ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ನೀರಿನಲ್ಲಿರುವ ವಿಕಿರಣವನ್ನು ಸಂಸ್ಕರಣೆ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ ಎಂಬುದು ಸುಳ್ಳು, ಅದನ್ನು ಸಂಸ್ಕರಣೆ ಮಾಡುವ ತಂತ್ರಜ್ಞಾನವೇ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಜಪಾನ್ ನಮ್ಮ ದೇಶಕ್ಕಿಂತ ದೂರವಿರುವುರಿಂದ ಈ ನೀರಿನಿಂದ ಭಾರತಕ್ಕೆ ನೇರ ಪರಿಣಾಮ ಬೀರುವುದಿಲ್ಲ. ಅಮೆರಿಕಾ ಮತ್ತು ಜಪಾನ್ ಈ ವಿಚಾರದಲ್ಲಿ ಜಗಳ ಮಾಡಿದರೆ ನಮ್ಮ ಅಣುಸ್ಥಾವರವನ್ನು ಸುರಕ್ಷಿತವಾಗಿ ಇಡಲು ಅನುಕೂಲವಾಗುತ್ತದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಪಾನ್‌ ದೇಶದವರೇ ಸಮುದ್ರಕ್ಕೆ ನೀರು ಬಿಡುತ್ತಿದ್ದಾರೆ, ನಾವು ಯಾಕೆ ಕೈಗಾ ಅಣುಸ್ಥಾವರದ್ದು, ಕೊಡಂಕುಳಂನ ಅಣುಸ್ಥಾವರದ ನೀರು ಸಮುದ್ರಕ್ಕೆ ಬಿಡಬಾರದು ಎಂದು ಕೇಳುವ ಅನಾನುಕೂಲ ಕೂಡಾ ಆಗುವ ಸಾಧ್ಯತೆಯಿದೆ” ಎಂದು ನಾಗೇಶ್ ಹೆಗಡೆ ಹೇಳಿದ್ದಾರೆ.

ಭಾರತದಲ್ಲೂ ಇಂತಹ ನೀರನ್ನು ಸಮುದ್ರಕ್ಕೆ ಬಿಡುತ್ತಿದ್ದಾರೆ ಆದರೆ ಅದು ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...

ಗುರುತು ಬಹಿರಂಗ ಆರೋಪ; ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರಿಂದ ಗೂಗಲ್‌ ವಿರುದ್ಧ ಮೊಕದ್ದಮೆ

ಜೆಫ್ರಿ ಎಪ್ಸ್ಟೀನ್ ಸಂತ್ರಸ್ತರು ಗೂಗಲ್ ವಿರುದ್ಧ ಯುಎಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಅದರ ಸರ್ಚ್ ಇಂಜಿನ್ ಮತ್ತು ಎಐ ಪರಿಕರಗಳಲ್ಲಿ ತಮ್ಮ ಹೆಸರುಗಳು, ಇಮೇಲ್‌ಗಳು ಮತ್ತು ಫೋನ್ ಸಂಖ್ಯೆಗಳನ್ನು ಪ್ರಸಾರ ಮಾಡುತ್ತಿವೆ...

ಬೆಂಗಳೂರು : ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಗೆ ‘ಟೆರರಿಸ್ಟ್’ ಎಂದು ನಿಂದಿಸಿದ ಪ್ರಾಧ್ಯಾಪಕ!

ಪ್ರಾಧ್ಯಾಪಕರೊಬ್ಬರು ತರಗತಿ ಕೊಠಡಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು 'ಟೆರರಿಸ್ಟ್' ಎಂದು ನಿಂದಿಸಿದ ಘಟನೆ ಬೆಂಗಳೂರಿನ ಪಿಇಎಸ್‌ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ...

ನೇಪಾಳ : ಹೊಸ ಪ್ರಧಾನಿ ಅಧಿಕಾರ ಸ್ವೀಕರಿಸಿದ ಮರುದಿನವೇ ಮಾಜಿ ಪ್ರಧಾನಿಯ ಬಂಧನ!

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ (ಬಾಲೆನ್ ಶಾ) ಪ್ರಮಾಣವಚನ ಸ್ವೀಕರಿಸಿದ ಮರುದಿನವೇ (ಮಾ.28, ಶನಿವಾರ), ಮಾಜಿ ಪ್ರಧಾನಿ ಕೆ. ಪಿ. ಶರ್ಮಾ ಓಲಿ ಅವರ ಬಂಧನವಾಗಿದೆ. ಸೆಪ್ಟೆಂಬರ್ 2025ರಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ...

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...