Homeಮುಖಪುಟಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

- Advertisement -
- Advertisement -

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಒಂದು ದಶಲಕ್ಷ ಟನ್‌ಗಿಂತಲೂ ಹೆಚ್ಚು ಸಂಸ್ಕರಿಸಿದ ನೀರನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇದನ್ನು ಚೀನಾ ಸೇರಿದಂತೆ ಸ್ಥಳೀಯ ಮೀನುಗಾರಿಕಾ ಸಮುದಾಯಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಪ್ರಕ್ರಿಯೆಯು ಪ್ರಾರಂಭವಾಗಲು ಇನ್ನೂ ಹಲವಾರು ವರ್ಷಗಳು ಬೇಕಾಗಿದ್ದು, ಪೂರ್ಣಗೊಳ್ಳಲು ದಶಕಗಳೇ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಯೋಜನೆಯ ವಿರುದ್ದ ವಿವಾದಗಳು ಮತ್ತು ವಿರೋಧಗಳು ಈಗಾಲೇ ಪ್ರಾರಂಭವಾಗಿದೆ.

ಜಪಾನ್ ಯೋಜನೆಯನ್ನು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಚೀನಾ ಈ ನಿರ್ಧಾರವನ್ನು “ಅತ್ಯಂತ ಬೇಜವಾಬ್ದಾರಿಯುತ” ಎಂದು ಕರೆದಿದೆ. ಆದರೆ ಜಪಾನ್ ಸರ್ಕಾರ ತನ್ನ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ನೀರು ಬಿಡುಗಡೆ ಸುರಕ್ಷಿತವಾಗಿರುತ್ತದೆ ಎಂದು ವಾದಿಸಿದೆ. ಯಾಕೆಂದರೆ ನೀರಿನಲ್ಲಿ ಇರುವ ಎಲ್ಲಾ ವಿಕಿರಣದ ಅಂಶಗಳನ್ನು ಸಂಸ್ಕರಿಸಿ, ದುರ್ಬಲಗೊಳಿಸಿ, ತೆಗೆದುಹಾಕಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯು ನೀರು ಬಿಡುಗಡೆಯನ್ನು ಅನುಮೋದಿಸಿದೆ, ಇದು ವಿಶ್ವದ ಬೇರೆಡೆ ಪರಮಾಣು ಸ್ಥಾವರಗಳಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆಯೇ ಇದೆ ಎಂದು ಹೇಳಿದೆ.

2011 ರ ಸುನಾಮಿಯ ನಂತರ ದುರ್ಬಲಗೊಂಡಿರುವ ಪರಮಾಣು ಸ್ಥಾವರವನ್ನು ನಿರ್ಮೂಲನೆ ಮಾಡುವ ದಶಕಗಳ ಪ್ರಕ್ರಿಯೆಯಲ್ಲಿ ನೀರನ್ನು ವಿಲೇವಾರಿ ಮಾಡುವುದು “ಅನಿವಾರ್ಯ ಕಾರ್ಯ” ಎಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಸಚಿವರ ಸಭೆಯಲ್ಲಿ ಹೇಳಿದ್ದಾರೆ.

ಆ ಪರಮಾಣು ಸ್ಥಾವರದಲ್ಲಿ ಸುಮಾರು 1.25 ದಶಲಕ್ಷ ಟನ್ ನೀರು ಟ್ಯಾಂಕ್‌ಗಳಲ್ಲಿ ಸಂಗ್ರಹವಾಗಿದೆ ಎನ್ನಲಾಗಿದೆ.

ದೇಶದ ಮೀನುಗಾರಿಕಾ ಸಮುದಾಯಗಳು ನೀರನ್ನು ಬಿಡುಗಡೆ ಮಾಡುವುದರಿಂದ ಈ ಪ್ರದೇಶದಿಂದ ಸಮುದ್ರಾಹಾರದ ಮೇಲೆ ಹೊಡೆತ ಬೀಳುತ್ತದೆ ಮತ್ತುಅದನ್ನು ಮರು ಸ್ಥಾಪಿಸಲು ಹಲವು ವರ್ಷಗಳೆ ಹಿಡಿಯುತ್ತದೆ ಎಂದು ವಾದಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಜ್ಞಾನಿ, ಲೇಖಕ ನಾಗೇಶ್ ಹೆಗಡೆ, “ಜಪಾನ್ ಫುಕೋಶಿಮಾದ ನೀರನ್ನು ಕಳೆದ ಏಳು ವರ್ಷದಿಂದ ಸಮುದ್ರಕ್ಕೆ ಬಿಡುತ್ತಿದ್ದಾರೆ. ಒಂದು ಕಡೆ ಅಮೆರಿಕಾ ಒತ್ತಡವಿದ್ದರೆ, ಇನ್ನೊಂದು ಕಡೆ ದಿನ ದಿನ ಫುಕೋಷಿಮಾದ ನೀರು ಜಾಸ್ತಿಯಾಗುತ್ತಿರುವುದರಿಂದ ಜಪಾನ್‌ಗೂ ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಇದೀಗ ಅನಿವಾರ್ಯವಾಗಿ ನೀರು ಬಿಡುಗಡೆ ಬಗ್ಗೆ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

May be an image of 1 person
ನಾಗೇಶ್ ಹೆಗಡೆ

“ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ನೀರಿನಲ್ಲಿರುವ ವಿಕಿರಣವನ್ನು ಸಂಸ್ಕರಣೆ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ ಎಂಬುದು ಸುಳ್ಳು, ಅದನ್ನು ಸಂಸ್ಕರಣೆ ಮಾಡುವ ತಂತ್ರಜ್ಞಾನವೇ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಜಪಾನ್ ನಮ್ಮ ದೇಶಕ್ಕಿಂತ ದೂರವಿರುವುರಿಂದ ಈ ನೀರಿನಿಂದ ಭಾರತಕ್ಕೆ ನೇರ ಪರಿಣಾಮ ಬೀರುವುದಿಲ್ಲ. ಅಮೆರಿಕಾ ಮತ್ತು ಜಪಾನ್ ಈ ವಿಚಾರದಲ್ಲಿ ಜಗಳ ಮಾಡಿದರೆ ನಮ್ಮ ಅಣುಸ್ಥಾವರವನ್ನು ಸುರಕ್ಷಿತವಾಗಿ ಇಡಲು ಅನುಕೂಲವಾಗುತ್ತದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಪಾನ್‌ ದೇಶದವರೇ ಸಮುದ್ರಕ್ಕೆ ನೀರು ಬಿಡುತ್ತಿದ್ದಾರೆ, ನಾವು ಯಾಕೆ ಕೈಗಾ ಅಣುಸ್ಥಾವರದ್ದು, ಕೊಡಂಕುಳಂನ ಅಣುಸ್ಥಾವರದ ನೀರು ಸಮುದ್ರಕ್ಕೆ ಬಿಡಬಾರದು ಎಂದು ಕೇಳುವ ಅನಾನುಕೂಲ ಕೂಡಾ ಆಗುವ ಸಾಧ್ಯತೆಯಿದೆ” ಎಂದು ನಾಗೇಶ್ ಹೆಗಡೆ ಹೇಳಿದ್ದಾರೆ.

ಭಾರತದಲ್ಲೂ ಇಂತಹ ನೀರನ್ನು ಸಮುದ್ರಕ್ಕೆ ಬಿಡುತ್ತಿದ್ದಾರೆ ಆದರೆ ಅದು ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...