Homeಮುಖಪುಟಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

ಜಪಾನ್ ಪರಮಾಣು ಸ್ಥಾವರದ ನೀರು ಸಮುದ್ರಕ್ಕೆ: ಭಾರತದ ಮೇಲೆ ಯಾವ ಪರಿಣಾಮ ಬೀರಲಿದೆ?

- Advertisement -
- Advertisement -

ಜಪಾನ್‌ನ ಫುಕುಶಿಮಾ ಪರಮಾಣು ಸ್ಥಾವರದಿಂದ ಒಂದು ದಶಲಕ್ಷ ಟನ್‌ಗಿಂತಲೂ ಹೆಚ್ಚು ಸಂಸ್ಕರಿಸಿದ ನೀರನ್ನು ಸಮುದ್ರಕ್ಕೆ ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. ಇದನ್ನು ಚೀನಾ ಸೇರಿದಂತೆ ಸ್ಥಳೀಯ ಮೀನುಗಾರಿಕಾ ಸಮುದಾಯಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಪ್ರಕ್ರಿಯೆಯು ಪ್ರಾರಂಭವಾಗಲು ಇನ್ನೂ ಹಲವಾರು ವರ್ಷಗಳು ಬೇಕಾಗಿದ್ದು, ಪೂರ್ಣಗೊಳ್ಳಲು ದಶಕಗಳೇ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಯೋಜನೆಯ ವಿರುದ್ದ ವಿವಾದಗಳು ಮತ್ತು ವಿರೋಧಗಳು ಈಗಾಲೇ ಪ್ರಾರಂಭವಾಗಿದೆ.

ಜಪಾನ್ ಯೋಜನೆಯನ್ನು ಘೋಷಿಸಿದ ಕೆಲವೇ ಗಂಟೆಗಳಲ್ಲಿ, ಚೀನಾ ಈ ನಿರ್ಧಾರವನ್ನು “ಅತ್ಯಂತ ಬೇಜವಾಬ್ದಾರಿಯುತ” ಎಂದು ಕರೆದಿದೆ. ಆದರೆ ಜಪಾನ್ ಸರ್ಕಾರ ತನ್ನ ಯೋಜನೆಯನ್ನು ಸಮರ್ಥಿಸಿಕೊಂಡಿದ್ದು, ನೀರು ಬಿಡುಗಡೆ ಸುರಕ್ಷಿತವಾಗಿರುತ್ತದೆ ಎಂದು ವಾದಿಸಿದೆ. ಯಾಕೆಂದರೆ ನೀರಿನಲ್ಲಿ ಇರುವ ಎಲ್ಲಾ ವಿಕಿರಣದ ಅಂಶಗಳನ್ನು ಸಂಸ್ಕರಿಸಿ, ದುರ್ಬಲಗೊಳಿಸಿ, ತೆಗೆದುಹಾಕಲಾಗುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಗೌರಿ ಕಾರ್ನರ್: ಕೋಮುವಾದಿಗಳ ನಡುವೆ ಇಂಥವರೂ ಉಂಟು; ಧರ್ಮಗಳ ನಡುವಿನ ಬಾಂಧವ್ಯಕ್ಕೆ ಉದಾಹರಣೆಗಳು ಅಸಂಖ್ಯಾತ

ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (ಐಎಇಎ)ಯು ನೀರು ಬಿಡುಗಡೆಯನ್ನು ಅನುಮೋದಿಸಿದೆ, ಇದು ವಿಶ್ವದ ಬೇರೆಡೆ ಪರಮಾಣು ಸ್ಥಾವರಗಳಲ್ಲಿ ತ್ಯಾಜ್ಯ ನೀರನ್ನು ವಿಲೇವಾರಿ ಮಾಡುವಂತೆಯೇ ಇದೆ ಎಂದು ಹೇಳಿದೆ.

2011 ರ ಸುನಾಮಿಯ ನಂತರ ದುರ್ಬಲಗೊಂಡಿರುವ ಪರಮಾಣು ಸ್ಥಾವರವನ್ನು ನಿರ್ಮೂಲನೆ ಮಾಡುವ ದಶಕಗಳ ಪ್ರಕ್ರಿಯೆಯಲ್ಲಿ ನೀರನ್ನು ವಿಲೇವಾರಿ ಮಾಡುವುದು “ಅನಿವಾರ್ಯ ಕಾರ್ಯ” ಎಂದು ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಸಚಿವರ ಸಭೆಯಲ್ಲಿ ಹೇಳಿದ್ದಾರೆ.

ಆ ಪರಮಾಣು ಸ್ಥಾವರದಲ್ಲಿ ಸುಮಾರು 1.25 ದಶಲಕ್ಷ ಟನ್ ನೀರು ಟ್ಯಾಂಕ್‌ಗಳಲ್ಲಿ ಸಂಗ್ರಹವಾಗಿದೆ ಎನ್ನಲಾಗಿದೆ.

ದೇಶದ ಮೀನುಗಾರಿಕಾ ಸಮುದಾಯಗಳು ನೀರನ್ನು ಬಿಡುಗಡೆ ಮಾಡುವುದರಿಂದ ಈ ಪ್ರದೇಶದಿಂದ ಸಮುದ್ರಾಹಾರದ ಮೇಲೆ ಹೊಡೆತ ಬೀಳುತ್ತದೆ ಮತ್ತುಅದನ್ನು ಮರು ಸ್ಥಾಪಿಸಲು ಹಲವು ವರ್ಷಗಳೆ ಹಿಡಿಯುತ್ತದೆ ಎಂದು ವಾದಿಸಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ವಿಜ್ಞಾನಿ, ಲೇಖಕ ನಾಗೇಶ್ ಹೆಗಡೆ, “ಜಪಾನ್ ಫುಕೋಶಿಮಾದ ನೀರನ್ನು ಕಳೆದ ಏಳು ವರ್ಷದಿಂದ ಸಮುದ್ರಕ್ಕೆ ಬಿಡುತ್ತಿದ್ದಾರೆ. ಒಂದು ಕಡೆ ಅಮೆರಿಕಾ ಒತ್ತಡವಿದ್ದರೆ, ಇನ್ನೊಂದು ಕಡೆ ದಿನ ದಿನ ಫುಕೋಷಿಮಾದ ನೀರು ಜಾಸ್ತಿಯಾಗುತ್ತಿರುವುದರಿಂದ ಜಪಾನ್‌ಗೂ ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಇದೀಗ ಅನಿವಾರ್ಯವಾಗಿ ನೀರು ಬಿಡುಗಡೆ ಬಗ್ಗೆ ಹೇಳುತ್ತಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

May be an image of 1 person
ನಾಗೇಶ್ ಹೆಗಡೆ

“ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಈ ನೀರಿನಲ್ಲಿರುವ ವಿಕಿರಣವನ್ನು ಸಂಸ್ಕರಣೆ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ ಎಂಬುದು ಸುಳ್ಳು, ಅದನ್ನು ಸಂಸ್ಕರಣೆ ಮಾಡುವ ತಂತ್ರಜ್ಞಾನವೇ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಜಪಾನ್ ನಮ್ಮ ದೇಶಕ್ಕಿಂತ ದೂರವಿರುವುರಿಂದ ಈ ನೀರಿನಿಂದ ಭಾರತಕ್ಕೆ ನೇರ ಪರಿಣಾಮ ಬೀರುವುದಿಲ್ಲ. ಅಮೆರಿಕಾ ಮತ್ತು ಜಪಾನ್ ಈ ವಿಚಾರದಲ್ಲಿ ಜಗಳ ಮಾಡಿದರೆ ನಮ್ಮ ಅಣುಸ್ಥಾವರವನ್ನು ಸುರಕ್ಷಿತವಾಗಿ ಇಡಲು ಅನುಕೂಲವಾಗುತ್ತದೆ. ಅಥವಾ ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಪಾನ್‌ ದೇಶದವರೇ ಸಮುದ್ರಕ್ಕೆ ನೀರು ಬಿಡುತ್ತಿದ್ದಾರೆ, ನಾವು ಯಾಕೆ ಕೈಗಾ ಅಣುಸ್ಥಾವರದ್ದು, ಕೊಡಂಕುಳಂನ ಅಣುಸ್ಥಾವರದ ನೀರು ಸಮುದ್ರಕ್ಕೆ ಬಿಡಬಾರದು ಎಂದು ಕೇಳುವ ಅನಾನುಕೂಲ ಕೂಡಾ ಆಗುವ ಸಾಧ್ಯತೆಯಿದೆ” ಎಂದು ನಾಗೇಶ್ ಹೆಗಡೆ ಹೇಳಿದ್ದಾರೆ.

ಭಾರತದಲ್ಲೂ ಇಂತಹ ನೀರನ್ನು ಸಮುದ್ರಕ್ಕೆ ಬಿಡುತ್ತಿದ್ದಾರೆ ಆದರೆ ಅದು ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...