Homeಕರೋನಾ ತಲ್ಲಣಕೊರೊನಾ ಉಲ್ಬಣ: ಮೇ 1ರ ವರೆಗೆ ಮಹಾರಾಷ್ಟ್ರದಲ್ಲಿ ಕರ್ಫ್ಯೂ

ಕೊರೊನಾ ಉಲ್ಬಣ: ಮೇ 1ರ ವರೆಗೆ ಮಹಾರಾಷ್ಟ್ರದಲ್ಲಿ ಕರ್ಫ್ಯೂ

- Advertisement -
- Advertisement -

ಮಹಾರಾಷ್ಟ್ರದಾದ್ಯಂತ ಕೊರೊನಾ ಉಲ್ಬಣವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಏಪ್ರಿಲ್ 14 ರ ರಾತ್ರಿ 08 ರಿಂದ ಮೇ 1 ರವರೆಗೆ ರಾಜ್ಯದ ಜನರ ಸಂಚಾರಕ್ಕೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ಮಂಗಳವಾರ ಘೋಷಿಸಿದ್ದಾರೆ. ಆದರೆ ಅದು ಲಾಕ್‌ಡೌನ್ ಅಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯವನ್ನು ಉದ್ದೇಶಿಸಿ ಮಾಡಿದ 38 ನಿಮಿಷಗಳ ಭಾಷಣದಲ್ಲಿ, ಏಪ್ರಿಲ್ 6 ರಿಂದ ಜಾರಿಗೆ ತಂದಿದ್ದ ನಿಯಮಗಳಿಗಿಂತ ಕಠಿಣವಾದ ನಿರ್ಬಂಧಗಳನ್ನು ಠಾಕ್ರೆ ಘೋಷಿಸಿದರು. ಆದರೆ ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಿದ್ದಾರೆ. ಇದರಿಂದಾಗಿ ಪರಿಣಾಮ ಬೀರುವ ಕ್ಷೇತ್ರಗಳು ಮತ್ತು ಕೆಲವು ವಿಭಾಗಗಳಿಗೆ 5,476 ಕೋಟಿ ರೂ. ಪರಿಹಾರ ಘೋಷಿಸಿದ್ದಾರೆ.

ಆಡಳಿತ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ಸೆಕ್ಷನ್ 144 ರ ಅಡಿಯಲ್ಲಿ ರಾಜ್ಯದಲ್ಲಿ ಬುಧವಾರ ರಾತ್ರಿಯಿಂದ ನಿಷೇಧಾಜ್ಞೆ ವಿಧಿಸಲಾಗಿದ್ದು, ಮೇ 1 ರವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ: ಸುಗ್ರೀವಾಜ್ಞೆ ಹೊರಡಿಸುವಲ್ಲಿ ಯುಪಿಎಗಿಂತ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವೇ ಮುಂದು!

ನಿರ್ಬಂಧದಂತೆ, ಯಾವುದೇ ವ್ಯಕ್ತಿಯು ಸಕಾರಣವಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಓಡಾಡಬಾರದು. ಕೆಲಸದ ದಿನಗಳಲ್ಲಿ ಬೆಳಿಗ್ಗೆ 7 ರಿಂದ ರಾತ್ರಿ 8 ರವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳು, ಚಟುವಟಿಕೆಗಳು ಮತ್ತು ಸೇವೆಗಳು ಮುಚ್ಚಲ್ಪಡುತ್ತವೆ. ಚಲನಚಿತ್ರಗಳು, ಧಾರಾವಾಹಿಗಳು ಮತ್ತು ಜಾಹೀರಾತುಗಳ ಚಿತ್ರೀಕರಣವು ಮುಚ್ಚಲ್ಪಡುತ್ತದೆ. ಮದುವೆಗಳಲ್ಲಿ ಕೇವಲ 25 ಜನರಿಗೆ ಮಾತ್ರ ಅವಕಾಶವಿರುತ್ತದೆ.

ಆದಾಗ್ಯೂ, ರೈಲುಗಳು ಮತ್ತು ಬಸ್ ಸೇವೆಗಳು ಸೇರಿದಂತೆ ಸಾರ್ವಜನಿಕ ಸಾರಿಗೆ, ದಿನಸಿ, ತರಕಾರಿ ಅಂಗಡಿಗಳು, ಹಣ್ಣು ಮಾರಾಟಗಾರರು, ಡೈರಿಗಳು, ಬೇಕರಿಗಳು, ಮಿಠಾಯಿಗಳು, ಎಲ್ಲಾ ರೀತಿಯ ಆಹಾರ ಮಳಿಗೆಗಳು ಮತ್ತು ಸಾರ್ವಜನಿಕ ಉಪಯುಕ್ತತೆಗಳಂತಹ ಅಗತ್ಯ ಸೇವೆಗಳು ತೆರೆದಿರುತ್ತವೆ.

ಉತ್ಪಾದನಾ ವಲಯಕ್ಕೆ ಸಂಬಂಧಿಸಿದಂತೆ, ಕೈಗಾರಿಕೆಗಳಿಗೆ 50% ಸಾಮರ್ಥ್ಯದಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಿದೆ. ಆದರೆ ಈ ಕೈಗಾರಿಕೆಗಳು ತಮ್ಮ ಕಾರ್ಮಿಕರಿಗೆ ಉಳಿದುಕೊಳ್ಳಲು ಕ್ಯಾಂಪಸ್‌ನಲ್ಲೇ ಅಥವಾ ಪ್ರತ್ಯೇಕವಾದ ವ್ಯವಸ್ಥೆ ಮಾಡಬೇಕಾಗುತ್ತದೆ. ಕೈಗಾರಿಕೆಯ ಆವರಣದ ಹೊರಗೆ ಸಿಬ್ಬಂದಿಗಳು ಓಡಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಿಣರಾಯಿ ವಿಜಯನ್ ಸಂಪುಟಕ್ಕೆ ಕೇರಳ ಶಿಕ್ಷಣ ಸಚಿವ ಕೆ.ಟಿ. ಜಲೀಲ್‌‌ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...