Homeಮುಖಪುಟ1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

1.84 ಲಕ್ಷ ಕೋವಿಡ್ ಪ್ರಕರಣಗಳು ವರದಿ: ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ!

- Advertisement -
- Advertisement -

ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 1.84 ಲಕ್ಷ ಕೋವಿಡ್ ಪ್ರಕರಣಗಳು ವರದಿಯಾಗಿ ದಾಖಲೆ ಸೃಷ್ಟಿಸಿವೆ. ದಿನದಲ್ಲಿ 1027 ಸಾವುಗಳು ಸಂಭವಿಸಿವೆ. ಈ ನಡುವೆಯೇ ಇಂದು ಕುಂಭಮೇಳದಲ್ಲಿ ಮೂರನೇ ಅತಿದೊಡ್ಡ ಶಾಹಿ ಸ್ನಾನ ಜರುಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬುಧವಾರ ಮುಂಜಾನೆ ಕುಂಭಮೇಳದ ಮೂರನೇ ಮತ್ತು ಅತಿದೊಡ್ಡ ‘ಶಾಹಿ ಸ್ನಾನ’ದ ಸಂದರ್ಭದಲ್ಲಿ ಭಕ್ತರು ಹರಿದ್ವಾರದ ಗಂಗಾದಲ್ಲಿ ಪವಿತ್ರ ಸ್ನಾನ ಮಾಡುವರು. ಪ್ರಮುಖ ಘಟನೆಗಳ ವೇಳಾಪಟ್ಟಿ ಪ್ರಕಾರ, ನಾಲ್ಕು ‘ಶಾಹಿ ಸ್ನಾನ’ ಮತ್ತು ಒಂಬತ್ತು ‘ಗಂಗಾ ಸ್ನಾನ’ಗಳು ಈ ವರ್ಷ ಹರಿದ್ವಾರದಲ್ಲಿ ನಡೆಯಲಿದೆ.

ಮಾರ್ಚ್ 11 ರಂದು ಮಹಾಶಿವರಾತ್ರಿಯಂದು ಮೊದಲ ಶಾಹಿ ಸ್ನಾನ ನಡೆದರೆ, ಎರಡನೆಯದು ಏಪ್ರಿಲ್ 12ರ ಸೋಮವಾರ ಸೋಮವತಿ ಅಮಾವಾಸ್ಯೆಯಲ್ಲಿ ನಡೆಯಿತು. ಇಂದು ಮೂರನೇ ಮತ್ತು ಅತಿ ದೊಡ್ಡ ಶಾಹಿ ಸ್ನಾನ ಜರುಗಲಿದೆ. ಹಿಂದೂಗಳ ಪವಿತ್ರ ಆಚರಣೆ ಎಂದು ಕರೆಯಲ್ಪಡುವ ಕುಂಭಮೇಳ ಪ್ರತಿ ವರ್ಷ ಮೂರ್ನಾಲ್ಕು ತಿಂಗಳು ನಡೆಯುತ್ತಿತ್ತು. ಈ ವರ್ಷ ಸಾಂಕ್ರಾಮಿಕದ ಕಾರಣದಿಂದಾಗಿ ಒಂದು ತಿಂಗಳಿಗೆ ಸೀಮಿತಗೊಳಿಸಲಾಗಿದೆ.

ಸೋಮವಾರ ಹೆಚ್ಚಿನ ಸಂಖ್ಯೆಯ ಭಕ್ತರು ಮಾಸ್ಕ್ ಧರಿಸಲಿಲ್ಲ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಸಾಧ್ಯವೆಂದು ಕಂಡುಬಂದಿದೆ. ಉತ್ತರಾಖಂಡ ಸರ್ಕಾರದ ಹೇಳಿಕೆಯ ಪ್ರಕಾರ ಸುಮಾರು 35 ಲಕ್ಷ ಜನರು ಭಾಗವಹಿಸಿದ್ದರು ಎನ್ನಲಾಗಿದೆ.

ಇನ್ನೊಂದೆಡೆ ದಿನನಿತ್ಯದ ಪ್ರಕರಣಗಳಲ್ಲಿ ಬಹುದೊಡ್ಡ ಏರಿಕೆಯಾಗಿದೆ. ಕಳೆದ ಆರು ತಿಂಗಳಲ್ಲಿಯೇ ಅತ್ಯಂತ ಹೆಚ್ಚಿನ ಸಾವುಗಳು (1,027) ಸಹ ನಿನ್ನೆ ಒಂದು ದಿನದಲ್ಲಿ ವರದಿಯಾಗಿವೆ. ಒಟ್ಟಾರೆಯಾಗಿ ಭಾರತವು 1.38 ಕೋಟಿ ಪ್ರಕರಣಗಳನ್ನು ದಾಖಲಿಸಿದ್ದು, 1,72,085 ಸಾವುಗಳನ್ನು ಕಂಡಿದೆ.

ಇದೇ ಸಂದರ್ಭದಲ್ಲಿ ಕಳೆದ ವರ್ಷದ ಮಾರ್ಚ್ ಮಧ್ಯಭಾಗದಲ್ಲಿ ತಬ್ಲಿಗಿಗಳು ಹಮ್ಮಿಕೊಂಡಿದ್ದ ಮರ್ಕಜ್ ಮತ್ತು ಈಗಿನ ಕುಂಭಮೇಳಕ್ಕೂ ಹೋಲಿಸುವುದು ಸರಿಯಲ್ಲ ಎಂದು ಉತ್ತರಖಂಡ ಸಿಎಂ ತಿರತ್ ಸಿಂಗ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರ್ಕಜ್‌ನಲ್ಲಿ ಕಿರಿದಾದ ಜಾಗದಲ್ಲಿ, ಕಟ್ಟಡದ ಒಳಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮತ್ತು ಅದರಲ್ಲಿ ವಿದೇಶಿಯರೂ ಭಾಗವಹಿಸಿದ್ದರು. ಆದರೆ ಕುಂಭಮೇಳವನ್ನು ವಿಶಾಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಮತ್ತು ನಮ್ಮ ಭಕ್ತರು ಮಾತ್ರ ಭಾಗವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದಕ್ಕೆ ವ್ಯಾಪಕ ವಿರೋಧಗಳು ಕೇಳಿಬಂದಿದ್ದು, ಕಳೆದ ವರ್ಷ ಸಾಂಕ್ರಾಮಿಕ ಇನ್ನು ಆರಂಭಿಕ ಹಂತದಲ್ಲಿತ್ತು. ಸರ್ಕಾರಕ್ಕೆ ಅದರ ಬಗ್ಗೆ ಸ್ಪಷ್ಟ ಮಾಹಿತಿ ಇರಲಿಲ್ಲ ಮತ್ತು ಕೇವಲ 3 ಸಾವಿರ ಜನ ಅಲ್ಲಿ ಭಾಗವಹಿಸಿದ್ದರು. ಆದರೆ ಈಗ ಕೊರೊನಾ ಎಂತಹ ಅಪಾಯಕಾರಿ ಸಾಂಕ್ರಾಮಿಕ ಎಂದು ನಮಗೆ ತಿಳಿದಿದೆ, ಆದರೂ ಕುಂಭಮೇಳದಲ್ಲಿ 35 ಲಕ್ಷ ಜನ ಭಾಗವಹಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...