Homeಕರ್ನಾಟಕಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

- Advertisement -
- Advertisement -

ಕೊರೊನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ ಕುಮಾರಸ್ವಾಮಿ, “ಕೊರೊನಾ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ” ಎಂದು ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಅವರು, “ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್‌ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

“ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು, ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ” ಎಂದು ಅವರು ಹೇಳಿದ್ದಾರೆ.

“ಈ ಮಧ್ಯೆ ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್‌ ವಿಷಯದಲ್ಲಿ ಎಡವಿವೆ” ಎಂದು ಅವರು ಹೇಳಿದ್ದಾರೆ.

“ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...