Homeಕರೋನಾ ತಲ್ಲಣಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಉಲ್ಬಣವನ್ನು ತಡೆಗಟ್ಟಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

- Advertisement -
- Advertisement -

ಪವಿತ್ರ ರಂಜಾನ್ ತಿಂಗಳಲ್ಲಿ ಮಸೀದಿಯಲ್ಲಿ ಒಂದು ಬಾರಿಗೆ 50 ಜನರಂತರ ಒಂದು ದಿನದಲ್ಲಿ ಐದು ಬಾರಿ ನಮಾಜ್ (ಪ್ರಾರ್ಥನೆ) ಮಾಡಲು ಅವಕಾಶ ನೀಡುವಂತೆ ಕೋರಿದ್ದ ಜುಮಾ ಮಸೀದಿ ಟ್ರಸ್ಟ್‌ಗೆ ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನಿರಾಕರಿಸಿದೆ.

ಧಾರ್ಮಿಕ ಆಚರಣೆಗಳನ್ನು ಅನುಸರಿಸುವ ಹಕ್ಕು ಮುಖ್ಯವಾದರೂ, ಕೊರೊನಾ ಉಲ್ಬಣದ ಸಮಯದಲ್ಲಿ, ಸಾರ್ವಜನಿಕ ಆದೇಶ ಮತ್ತು ನಾಗರಿಕರ ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಆರ್.ಡಿ.ಧನುಕಾ ಮತ್ತು ವಿ.ಜಿ.ಬಿಶ್ತ್ ಅವರ ವಿಭಾಗೀಯ ನ್ಯಾಯಪೀಠದ ರಜಾದಿನದ ನ್ಯಾಯಾಲಯವು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲೇಖಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಅನುಮತಿ ನಿರಾಕರಿಸಿದೆ.

ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು  ದಕ್ಷಿಣ ಮುಂಬೈನಲ್ಲಿರುವ ಮಸೀದಿಯನ್ನು ತೆರೆಯಲು ಅವಕಾಶ ನೀಡುವಂತೆ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.  ಏಪ್ರಿಲ್ 13 ರ ಮಹಾರಾಷ್ಟ್ರ ಸರ್ಕಾರದ ಸುತ್ತೋಲೆಯ ಪ್ರಕಾರ ಮಸೀದಿಯನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

ಒಂದು ಎಕರೆ ವಿಸ್ತಿರ್ಣ ಹೊಂದಿರುವ ಮಸೀದಿಯಲ್ಲಿ ಒಂದೇ ಸಮಯದಲ್ಲಿ 7,000 ಜನರು ಸಭೆ ಸೇರಬಹುದು ಎಂದು ಅರ್ಜಿದಾರರು ತಿಳಿಸಿದ್ದಾರೆ. ಆದರೂ, ಕೊರೊನಾ ನಿಬಂರ್ಧಗಳನ್ನು ಗಮನದಲ್ಲಿಟ್ಟುಕೊಂಡು, ಪವಿತ್ರ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಒಂದು ಸಮಯದಲ್ಲಿ ಕೇವಲ 50 ಜನರಿಗೆ ಮಾತ್ರ ಅವಕಾಶ ಕೊಟ್ಟು, ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳು ಮತ್ತು ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಅರ್ಜಿದಾರರು ತಿಳಿಸಿದ್ದರು.

ಕೊರೊನಾ ಉಲ್ಬಣವನ್ನು ತಡೆಗಟ್ಟುವ ಕ್ರಮಗಳನ್ನು ಕೈಗೊಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ, 15 ದಿನಗಳ ಅವಧಿಯಲ್ಲಿ, ಎಲ್ಲಾ ಧಾರ್ಮಿಕ ಪೂಜಾ ಸ್ಥಳಗಳು ಮುಚ್ಚಿರಬೇಕು ಮತ್ತು ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಾತ್ರ ತಮ್ಮ ಕರ್ತವ್ಯವನ್ನು ಮುಂದುವರಿಸಲು ಅವಕಾಶವಿದೆ. ಪೂಜಾ ಸ್ಥಳಗಳ ಎಲ್ಲಾ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಬೇಗನೆ ಲಸಿಕೆ ನೀಡುವಂತೆ ಸೂಚಿಸಲಾಗಿದೆ.

ಜನರು ತಮ್ಮ ಧರ್ಮವನ್ನು ಆಚರಿಸಲು ಸರ್ಕಾರ ನಿರಾಕರಿಸುತ್ತಿಲ್ಲ. ಆದರೆ ಕೊರೊನಾ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಅವರು ಪ್ರಾರ್ಥನೆಯನ್ನು ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಪರ  ಹಾಜರಾದ ಹೆಚ್ಚುವರಿ ಸರ್ಕಾರಿ ವಕೀಲರಾದ ಜ್ಯೋತಿ ಚವ್ಹಾಣ್ ಹೇಳಿದ್ದಾರೆ. ರಾಜ್ಯವು ಲಸಿಕೆಗಳು ಮತ್ತು ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಸಾಮಾಜಿಕ ಕೂಟಗಳಿಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದರು.


ಇದನ್ನೂ ಓದಿ: ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...