Homeಕರೋನಾ ತಲ್ಲಣಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಆತಂಕ: ರಂಜಾನ್ ಪ್ರಾರ್ಥನೆಗೆ ಅನುಮತಿ ನೀಡದ ಬಾಂಬೆ ಹೈಕೋರ್ಟ್

ಕೊರೊನಾ ಉಲ್ಬಣವನ್ನು ತಡೆಗಟ್ಟಲು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

- Advertisement -
- Advertisement -

ಪವಿತ್ರ ರಂಜಾನ್ ತಿಂಗಳಲ್ಲಿ ಮಸೀದಿಯಲ್ಲಿ ಒಂದು ಬಾರಿಗೆ 50 ಜನರಂತರ ಒಂದು ದಿನದಲ್ಲಿ ಐದು ಬಾರಿ ನಮಾಜ್ (ಪ್ರಾರ್ಥನೆ) ಮಾಡಲು ಅವಕಾಶ ನೀಡುವಂತೆ ಕೋರಿದ್ದ ಜುಮಾ ಮಸೀದಿ ಟ್ರಸ್ಟ್‌ಗೆ ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನಿರಾಕರಿಸಿದೆ.

ಧಾರ್ಮಿಕ ಆಚರಣೆಗಳನ್ನು ಅನುಸರಿಸುವ ಹಕ್ಕು ಮುಖ್ಯವಾದರೂ, ಕೊರೊನಾ ಉಲ್ಬಣದ ಸಮಯದಲ್ಲಿ, ಸಾರ್ವಜನಿಕ ಆದೇಶ ಮತ್ತು ನಾಗರಿಕರ ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿ ಆರ್.ಡಿ.ಧನುಕಾ ಮತ್ತು ವಿ.ಜಿ.ಬಿಶ್ತ್ ಅವರ ವಿಭಾಗೀಯ ನ್ಯಾಯಪೀಠದ ರಜಾದಿನದ ನ್ಯಾಯಾಲಯವು ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ಉಲ್ಲೇಖಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ, ಅನುಮತಿ ನಿರಾಕರಿಸಿದೆ.

ರಂಜಾನ್ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು  ದಕ್ಷಿಣ ಮುಂಬೈನಲ್ಲಿರುವ ಮಸೀದಿಯನ್ನು ತೆರೆಯಲು ಅವಕಾಶ ನೀಡುವಂತೆ ಟ್ರಸ್ಟ್ ಅರ್ಜಿ ಸಲ್ಲಿಸಿತ್ತು.  ಏಪ್ರಿಲ್ 13 ರ ಮಹಾರಾಷ್ಟ್ರ ಸರ್ಕಾರದ ಸುತ್ತೋಲೆಯ ಪ್ರಕಾರ ಮಸೀದಿಯನ್ನು ಬಂದ್ ಮಾಡಲಾಗಿದೆ.

ಇದನ್ನೂ ಓದಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

ಒಂದು ಎಕರೆ ವಿಸ್ತಿರ್ಣ ಹೊಂದಿರುವ ಮಸೀದಿಯಲ್ಲಿ ಒಂದೇ ಸಮಯದಲ್ಲಿ 7,000 ಜನರು ಸಭೆ ಸೇರಬಹುದು ಎಂದು ಅರ್ಜಿದಾರರು ತಿಳಿಸಿದ್ದಾರೆ. ಆದರೂ, ಕೊರೊನಾ ನಿಬಂರ್ಧಗಳನ್ನು ಗಮನದಲ್ಲಿಟ್ಟುಕೊಂಡು, ಪವಿತ್ರ ತಿಂಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಒಂದು ಸಮಯದಲ್ಲಿ ಕೇವಲ 50 ಜನರಿಗೆ ಮಾತ್ರ ಅವಕಾಶ ಕೊಟ್ಟು, ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆಗಳು ಮತ್ತು ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಅರ್ಜಿದಾರರು ತಿಳಿಸಿದ್ದರು.

ಕೊರೊನಾ ಉಲ್ಬಣವನ್ನು ತಡೆಗಟ್ಟುವ ಕ್ರಮಗಳನ್ನು ಕೈಗೊಂಡ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಏಪ್ರಿಲ್ 14 ರ ರಾತ್ರಿ 8 ರಿಂದ ಮೇ 1 ರವರೆಗೆ ರಾಜ್ಯದಲ್ಲಿ ಕರ್ಫ್ಯೂ ತರಹದ ನಿರ್ಬಂಧಗಳನ್ನು ಪ್ರಕಟಿಸಿದ್ದಾರೆ.

ರಾಜ್ಯ ಸರ್ಕಾರದ ಸುತ್ತೋಲೆಯ ಪ್ರಕಾರ, 15 ದಿನಗಳ ಅವಧಿಯಲ್ಲಿ, ಎಲ್ಲಾ ಧಾರ್ಮಿಕ ಪೂಜಾ ಸ್ಥಳಗಳು ಮುಚ್ಚಿರಬೇಕು ಮತ್ತು ಪೂಜಾ ಸ್ಥಳದ ಸೇವೆಯಲ್ಲಿ ತೊಡಗಿರುವ ಸಿಬ್ಬಂದಿಗೆ ಮಾತ್ರ ತಮ್ಮ ಕರ್ತವ್ಯವನ್ನು ಮುಂದುವರಿಸಲು ಅವಕಾಶವಿದೆ. ಪೂಜಾ ಸ್ಥಳಗಳ ಎಲ್ಲಾ ಸಿಬ್ಬಂದಿಗೆ ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಬೇಗನೆ ಲಸಿಕೆ ನೀಡುವಂತೆ ಸೂಚಿಸಲಾಗಿದೆ.

ಜನರು ತಮ್ಮ ಧರ್ಮವನ್ನು ಆಚರಿಸಲು ಸರ್ಕಾರ ನಿರಾಕರಿಸುತ್ತಿಲ್ಲ. ಆದರೆ ಕೊರೊನಾ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಅವರು ಪ್ರಾರ್ಥನೆಯನ್ನು ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಪರ  ಹಾಜರಾದ ಹೆಚ್ಚುವರಿ ಸರ್ಕಾರಿ ವಕೀಲರಾದ ಜ್ಯೋತಿ ಚವ್ಹಾಣ್ ಹೇಳಿದ್ದಾರೆ. ರಾಜ್ಯವು ಲಸಿಕೆಗಳು ಮತ್ತು ಆಮ್ಲಜನಕದ ಕೊರತೆಯನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಸಾಮಾಜಿಕ ಕೂಟಗಳಿಗೆ ಅವಕಾಶ ನೀಡುವುದು ಸೂಕ್ತವಲ್ಲ ಎಂದರು.


ಇದನ್ನೂ ಓದಿ: ಮರ್ಕಾಜ್ ಮಸೀದಿಯಲ್ಲಿ ಪ್ರಾರ್ಥನೆಗೆ 20 ಜನರಿಗಷ್ಟೇ ಅವಕಾಶ: ಕೇಂದ್ರದ ನಿಲುವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...