Homeಕರೋನಾ ತಲ್ಲಣರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್ ಪ್ರಮಾಣಗಳ ಕೊರತೆ ಇದೆ ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಶನ್‌ನ (ಫಾನಾ) ಕಾರ್ಯಕಾರಿ ಸಮಿತಿ ಸದಸ್ಯ ಡಾ. ರಾಜಶೇಖರ್ ಅವರು ಬುಧವಾರ ಹೇಳಿದ್ದಾರೆ. ಅಗತ್ಯ ರೋಗಿಗಳಿಗೆ ಔಷಧದ ಹೆಚ್ಚುವರಿ ಸರಬರಾಜು ಮಾಡುವುದಾಗಿ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ಭರವಸೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕೊರೊನಾ ನಿರ್ವಹಣೆಯಲ್ಲಿ ರೆಮ್ಡಿಸಿವಿರ್ ಒಂದು ಪ್ರಮುಖ ಚುಚ್ಚುಮದ್ದು. ಕೊರೊನಾ ಮೊದಲ ಅಲೆಯ ನಂತರ, ತಯಾರಕರು ತಮ್ಮ ಉತ್ಪಾದನೆಯನ್ನು ನಿಧಾನಗೊಳಿಸಿದರು. ಆದಾಗ್ಯೂ, ಎರಡನೇ ಅಲೆಯ ತ್ವರಿತ ಆಕ್ರಮಣದಿಂದಾಗಿ ಡೋಸೇಜ್‌ಗಳ ಕೊರತೆ ಪ್ರಾರಂಭವಾಗಿತ್ತು. ಇದೀಗ ಒಂದು ವಾರದದಿಂದ ರೆಮ್‌ಡೆಸಿವಿರ್‌ನ ತೀವ್ರ ಕೊರತೆ ಇದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಉಲ್ಬಣ: ಕಳೆದ ಒಂದು ದಿನದಲ್ಲಿ ಹಲವು ದಾಖಲೆ ಮಾಡಿದ ಭಾರತ!

“ಹಲವಾರು ಆಸ್ಪತ್ರೆಗಳಲ್ಲಿ ರೆಮ್ಡಿಸಿವಿರ್ ಇಂಜೆಕ್ಷನ್ ಅಗತ್ಯವಿರುವ ರೋಗಿಗಳಿದ್ದಾರೆ. ಆದಾಗ್ಯೂ, ಅಗತ್ಯವಿರುವ ರೋಗಿಗಳಲ್ಲಿ 20% ದಿಂದ 30% ರಷ್ಟು ಜನರಿಗೂ ದಾಸ್ತಾನು ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ಇಂದು ನಾವು ಸರ್ಕಾರ ಮತ್ತು ಡಿಜಿಸಿಐ ಜೊತೆ ಸಭೆ ನಡೆಸಿದ್ದೇವೆ. ನಾವು ಈ ಬಗ್ಗೆ ಎಚ್ಚರಿಸಿದ ಮಾಡಿದ ಕೆಲವೇ ಗಂಟೆಗಳಲ್ಲಿ ಅಗತ್ಯ ರೋಗಿಗಳಿಗೆ ಬೇಕಾದುದನ್ನು ಪೂರೈಸುವ ಭರವಸೆ ನೀಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಕೊರೊನಾ ಸನ್ನಿವೇಶದ ಬಗ್ಗೆ ಮಾತನಾಡಿದ ರಾಜಶೇಖರ್, “ಮೊದಲ ಅಲೆಯ ಸಮಯದಲ್ಲಿ, ಸಾಕಷ್ಟು ಎಚ್ಚರಿಕೆ ಮತ್ತು ಭಯವಿತ್ತು, ಈಗ ಜನರಿಗೆ ಆ ಭಯವಿಲ್ಲ. ನಾವು ಗಮನಿಸಬೇಕಾದ ಅಂಶವೆಂದರೆ, ಎಲ್ಲಿಗೂ ಪ್ರಯಾಣಿಸದ ಮತ್ತು ಯಾವುದೇ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿಲ್ಲದ ಜನರು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎರಡನೆ ಅಲೆಯಲ್ಲಿ, ಸೋಂಕಿನ ಹರಡುವಿಕೆಯ ಪ್ರಮಾಣವು ಹೆಚ್ಚು ವೇಗವಾಗಿರುತ್ತದೆ, ಆರಂಭಿಕ ದಿನಗಳಲ್ಲಿ, ಇದು ದ್ವಿಗುಣಗೊಳ್ಳಲು 18 ದಿನಗಳನ್ನು ತೆಗೆದುಕೊಳ್ಳುತ್ತಿತ್ತು. ಆದರೆ ಈಗ ದ್ವಿಗುಣಗೊಳ್ಳಲು ಎಂಟು ರಿಂದ ಒಂಬತ್ತು ದಿನಗಳನ್ನು ತೆಗೆದುಕೊಳ್ಳುತ್ತದೆ. ಭವಿಷ್ಯದಲ್ಲಿ ಇದು ದ್ವಿಗುಣಗೊಳ್ಳಲು ಕೇವಲ ಐದು ದಿನಗಳು ಬೇಕಾಗಬಹುದು” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 10 ನೇ ತರಗತಿ ಪರೀಕ್ಷೆಗಳು ರದ್ದು, 12 ನೇ ತರಗತಿ ಪರೀಕ್ಷೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...