Homeಕರೋನಾ ತಲ್ಲಣಟೀಕೆಗಳಿಂದ ಎಚ್ಚೆತ್ತ ಸರ್ಕಾರ: ಎರಡು ವಾರಗಳು ಮುಂಚೆಯೇ ಕುಂಭಮೇಳಕ್ಕೆ ತೆರೆ ಸಾಧ್ಯತೆ

ಟೀಕೆಗಳಿಂದ ಎಚ್ಚೆತ್ತ ಸರ್ಕಾರ: ಎರಡು ವಾರಗಳು ಮುಂಚೆಯೇ ಕುಂಭಮೇಳಕ್ಕೆ ತೆರೆ ಸಾಧ್ಯತೆ

ಬುಧವಾರ ಮಧ್ಯಾಹ್ನದ ಹೊತ್ತಿಗೆ ಸುಮಾರು 10 ಲಕ್ಷ ಜನರು ನದಿಯಲ್ಲಿ ಸ್ನಾನ ಮಾಡಿದ್ದಾರೆ ಎಂದು ಉತ್ತರಾಖಂಡ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ದೇಶದಲ್ಲಿ ಪರಿಸ್ಥಿತಿ ಬಿಗಡಾಯಿಸಿದ್ದು, ಈ ನಡುವೆಯೇ ಲಕ್ಷಾಂತರ ಜನ ಒಂದೆಡೆ ಸೇರಿದ್ದ ಕುಂಭಮೇಳದ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಇದರಿಂದ ಉತ್ತರಾಖಂಡ ಸರ್ಕಾರ ಮತ್ತು ಧಾರ್ಮಿಕ ಮುಖಂಡರ ನಡುವೆ ಚರ್ಚೆ ನಡೆದಿದ್ದು, ಎರಡು ವಾರಗಳ ಮುಂಚೆಯೇ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳವು ಕೊನೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಗಂಗಾ ನದಿಯ ದಡದಲ್ಲಿ ನಡೆಯುತ್ತಿರುವ ಕುಂಭಮೇಳದ ಶಾಹಿ ಸ್ನಾನದಲ್ಲಿ ಲಕ್ಷಾಂತರ ಜನರು ಒಟ್ಟುಗೂಡುತ್ತಿದ್ದಾರೆ, ದೇಶಾದ್ಯಂತ ಸೋಂಕುಗಳು ಹೆಚ್ಚುತ್ತಿರುವ ಮಧ್ಯೆ ಹರಿದ್ವಾರ ಕೊರೊನಾ ಹಾಟ್‌ಸ್ಫಾಟ್ ಆಗಲಿದೆ ಎಂಬ ಆತಂಕ ಹೆಚ್ಚಾಗುತ್ತಿತ್ತು.

ಇದಲ್ಲದೆ, ಕುಂಭಮೇಳದಲ್ಲಿ ಪರಸ್ಪರ ಅಂತರ ಕಾಪಾಡಿಕೊಳ್ಳುವುದು ತುಂಬಾ ಕಷ್ಟ. ಅದನ್ನು ಜಾರಿ ಮಾಡಲು ಹೋದರೆ ಕಾಲ್ತುಳಿತದಂತಹ ಘಟನೆಗಳು ಸಂಭವಿಸಬಹುದು. ಆದ್ದರಿಂದ ಇಲ್ಲಿ ದೈಹಿಕ ಅಂತರವನ್ನು ಜಾರಿಗೊಳಿಸಲು ನಮಗೆ ಸಾಧ್ಯವಾಗುವುದಿಲ್ಲ ಎಂದು ಕುಂಭಮೇಳದ ಉಸ್ತುವಾರಿ ಇನ್ಸ್‌ಪೆಕ್ಟರ್ ಜನರಲ್ ಸಂಜಯ್ ಗುಂಜ್ಯಾಲ್ ಹೇಳಿದ್ದರು.

ಇದನ್ನೂ ಓದಿ: ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಬುಧವಾರ ಮುಂಜಾನೆ ಕುಂಭಮೇಳದ ಮೂರನೇ ಮತ್ತು ಅತಿದೊಡ್ಡ ‘ಶಾಹಿ ಸ್ನಾನ’ದ ಸಂದರ್ಭದಲ್ಲಿ ಸಾವಿರಾರು ಭಕ್ತರು ಹರಿದ್ವಾರದ ಗಂಗಾದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಪ್ರಮುಖ ಘಟನೆಗಳ ವೇಳಾಪಟ್ಟಿ ಪ್ರಕಾರ, ನಾಲ್ಕು ‘ಶಾಹಿ ಸ್ನಾನ’ ಮತ್ತು ಒಂಬತ್ತು ‘ಗಂಗಾ ಸ್ನಾನ’ಗಳು ಈ ವರ್ಷ ಹರಿದ್ವಾರದಲ್ಲಿ ನಡೆಯಲಿದ್ದವು. ಈಗ ಇವುಗಳನ್ನು ನಡೆಸದಿರಲು ಮತ್ತು ಇಂದಿಗೆ ಕುಂಭಮೇಳಕ್ಕೆ ತೆರೆ ಎಳೆಯಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕುಂಭದ ಅತ್ಯಂತ ಶುಭ ದಿನಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ಶಾಹಿ ಸ್ನಾನದ ಸಂದರ್ಭದಲ್ಲಿ ಮಧ್ಯಾಹ್ನ 2 ಗಂಟೆಯವರೆ 9,43,452 ಭಕ್ತರು ಪಾಲ್ಗೊಂಡಿದ್ದರು ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಮಧ್ಯಾಹ್ನದ ಹೊತ್ತಿಗೆ ಸುಮಾರು 10 ಲಕ್ಷ ಜನರು ನದಿಯಲ್ಲಿ ಸ್ನಾನ ಮಾಡಿದ್ದಾರೆ ಎಂದು ಹರಿದ್ವಾರದಲ್ಲಿ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದ ಉತ್ತರಾಖಂಡ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಮುಂದಿನ ಮಹತ್ವದ ಕುಂಭವೇಳದ ದಿನವನ್ನು ಏಪ್ರಿಲ್ 27 ಕ್ಕೆ ನಿಗದಿಪಡಿಸಲಾಗಿತ್ತು.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...