ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮತ್ತು ಜನರಿಗೆ ಏನು ಬೇಕು ಎಂದು ತಿಳಿದಿದ್ದರಿಂದ ಬಿ.ಆರ್. ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತದ “ಅಧಿಕೃತ ರಾಷ್ಟ್ರೀಯ ಭಾಷೆ” ಎಂದು ಪ್ರಸ್ತಾಪಿಸಿದ್ದರು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಬುಧವಾರ ಹೇಳಿದ್ದಾರೆ.
ಮಹಾರಾಷ್ಟ್ರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎಂಎನ್ಎಲ್ಯು) ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಬೊಬ್ಡೆ ಮಾತನಾಡುತ್ತಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಭಾಗವಹಿಸಿದ್ದರು.
ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ಪ್ರಾಚೀನ ಭಾರತೀಯ ಪಠ್ಯವಾದ “ನ್ಯಾಯಶಾಸ್ತ್ರ”ವು ಅರಿಸ್ಟಾಟಲ್ ಮತ್ತು ಪರ್ಷಿಯನ್ ತರ್ಕ ವ್ಯವಸ್ಥೆಗಿಂತ ಕೆಳಮಟ್ಟದ್ದಲ್ಲ ಮತ್ತು “ನಮ್ಮ ಪೂರ್ವಜರ ಪ್ರತಿಭೆಳನ್ನು ಕಡೆಗಣಿಸಲು ಮತ್ತು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣಗಳಿಲ್ಲ” ಎಂದು ಸಿಜೆಐ ಹೇಳಿದ್ದಾರೆ.
ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ನೆನಪಿಸಿಕೊಂಡ ಸಿಜೆಐ, “ಇಂದು ಬೆಳಿಗ್ಗೆ, ನಾನು ಯಾವ ಭಾಷೆಯಲ್ಲಿ ಭಾಷಣ ಮಾಡಬೇಕೆಂಬುದರ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೆ. ಇಂದು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ್ದರಿಂದ ಮಾತನಾಡುವ ಭಾಷೆ ಮತ್ತು ಕೆಲಸ ಮಾಡುವ ಭಾಷೆಗಳ ನಡುವಿನ ಸಂಘರ್ಷ ತುಂಬಾ ಹಳೆಯದು ಎಂದು ನನಗೆ ನೆನಪಾಯಿತು” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಸಂವಿಧಾನ ಕರಡನ್ನು ರಚಿಸಿದ್ದು ಬ್ರಾಹ್ಮಣರೇ ಹೊರತು ಅಂಬೇಡ್ಕರ್ ಅಲ್ಲ: ಗುಜರಾತ್ ಸ್ಪೀಕರ್ ವಿವಾದಾತ್ಮಕ ಹೇಳಿಕೆ
“ಅಧೀನ ನ್ಯಾಯಾಲಯಗಳ ಭಾಷೆ ಹೇಗಿರಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್ಗೆ ಅನೇಕ ಪತ್ರಗಳು ಬರುತ್ತವೆ, ಆದರೆ ಈ ವಿಷಯದ ಬಗ್ಗೆ ಪರಾಮರ್ಶೆ ನಡೆಯುತ್ತಿಲ್ಲ ಎಂದೆನಿಸುತ್ತದೆ. ಡಾ. ಅಂಬೇಡ್ಕರ್ ಈ ಅಂಶವನ್ನು ನಿರೀಕ್ಷಿಸಿದ್ದರು ಮತ್ತು ಅವರು ಭಾರತದ ಒಕ್ಕೂಟದ ಅಧಿಕೃತ ಭಾಷೆ ಸಂಸ್ಕೃತವಾಗಿರಬೇಕು ಎಂಬ ಪ್ರಸ್ತಾಪವನ್ನು ಇಟ್ಟಿದ್ದರು” ಎಂದು ಬೋಬ್ಡೆ ಹೇಳಿದ್ದಾರೆ.
ಕೆಲವು ಮೌಲ್ವಿಗಳು, ಪಂಡಿತರು ಮತ್ತು ಪುರೋಹಿತರು, ಅಂಬೇಡ್ಕರ್ ಅವರ ಸಹಿಯನ್ನು ಹೊಂದಿರುವ ಆ ಪ್ರಸ್ತಾಪವನ್ನು ಮಂಡಿಸಲಾಗಿದೆಯೆ ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.
ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ
“ಉತ್ತರ ಭಾರತದಲ್ಲಿ ತಮಿಳು ಸ್ವೀಕಾರಾರ್ಹವಲ್ಲವಾದ್ದರಿಂದ ಅದನ್ನು ಅಲ್ಲಿ ವಿರೋಧಿಸಬಹುದು ಮತ್ತು ಅದೇ ರೀತಿ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ವಿರೋಧಿಸಬಹುದು ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ಆದರೆ, ಉತ್ತರ ಭಾರತ ಅಥವಾ ದಕ್ಷಿಣ ಭಾರತದಲ್ಲಿ ಸಂಸ್ಕೃತವನ್ನು ವಿರೋಧಿಸುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಅವರು ಈ ಪ್ರಸ್ತಾಪವನ್ನು ಇಟ್ಟಿದ್ದರು, ಆದರೆ ಅದು ಯಶಸ್ವಿಯಾಗಲಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.
“ಅಂಬೇಡ್ಕರ್ ಅವರಿಗೆ ಕಾನೂನಿನ ಬಗ್ಗೆ ಮಾತ್ರವಲ್ಲದೆ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆಯೂ ಚೆನ್ನಾಗಿ ತಿಳಿದಿತ್ತು. ಜನರು, ದೇಶದ ಬಡವರು ಏನು ಬಯಸುತ್ತಾರೆಂದು ಅವರಿಗೆ ತಿಳಿದಿತ್ತು. ಈ ಎಲ್ಲ ಅಂಶಗಳ ಬಗ್ಗೆ ಅವರಿಗೆ ಸಂಪೂರ್ಣ ಜ್ಞಾನವಿತ್ತು ಮತ್ತು ಅದಕ್ಕಾಗಿಯೇ ಅವರು ಈ ಪ್ರಸ್ತಾಪವನ್ನು ಮಂಡಿಸಲು ಯೋಚಿಸಿದ್ದರು” ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.
ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್ವಾದಿ ನಿರ್ದೇಶಕ ಪ.ರಂಜಿತ್



???