Homeಮುಖಪುಟಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ

- Advertisement -
- Advertisement -

ರಾಜಕೀಯ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮತ್ತು ಜನರಿಗೆ ಏನು ಬೇಕು ಎಂದು ತಿಳಿದಿದ್ದರಿಂದ ಬಿ.ಆರ್. ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತದ “ಅಧಿಕೃತ ರಾಷ್ಟ್ರೀಯ ಭಾಷೆ” ಎಂದು ಪ್ರಸ್ತಾಪಿಸಿದ್ದರು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಬೊಬ್ಡೆ ಬುಧವಾರ ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎಂಎನ್‌ಎಲ್‌ಯು) ಶೈಕ್ಷಣಿಕ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಬೊಬ್ಡೆ ಮಾತನಾಡುತ್ತಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕೇಂದ್ರ ಸಚಿವ ಮತ್ತು ನಾಗ್ಪುರ ಸಂಸದ ನಿತಿನ್ ಗಡ್ಕರಿ ಮತ್ತು ಇತರರು ಈ ಕಾರ್ಯಕ್ರಮದಲ್ಲಿ ಆನ್‌ಲೈನ್ ಮೂಲಕ ಭಾಗವಹಿಸಿದ್ದರು.

ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ

ಪ್ರಾಚೀನ ಭಾರತೀಯ ಪಠ್ಯವಾದ “ನ್ಯಾಯಶಾಸ್ತ್ರ”ವು ಅರಿಸ್ಟಾಟಲ್ ಮತ್ತು ಪರ್ಷಿಯನ್ ತರ್ಕ ವ್ಯವಸ್ಥೆಗಿಂತ ಕೆಳಮಟ್ಟದ್ದಲ್ಲ ಮತ್ತು “ನಮ್ಮ ಪೂರ್ವಜರ ಪ್ರತಿಭೆಳನ್ನು ಕಡೆಗಣಿಸಲು ಮತ್ತು ಅದರಿಂದ ಪ್ರಯೋಜನ ಪಡೆಯದಿರಲು ಯಾವುದೇ ಕಾರಣಗಳಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ನೆನಪಿಸಿಕೊಂಡ ಸಿಜೆಐ, “ಇಂದು ಬೆಳಿಗ್ಗೆ, ನಾನು ಯಾವ ಭಾಷೆಯಲ್ಲಿ ಭಾಷಣ ಮಾಡಬೇಕೆಂಬುದರ ಬಗ್ಗೆ ಗೊಂದಲಕ್ಕೆ ಒಳಗಾಗಿದ್ದೆ. ಇಂದು ಡಾ.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಾದ್ದರಿಂದ ಮಾತನಾಡುವ ಭಾಷೆ ಮತ್ತು ಕೆಲಸ ಮಾಡುವ ಭಾಷೆಗಳ ನಡುವಿನ ಸಂಘರ್ಷ ತುಂಬಾ ಹಳೆಯದು ಎಂದು ನನಗೆ ನೆನಪಾಯಿತು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನ ಕರಡನ್ನು ರಚಿಸಿದ್ದು ಬ್ರಾಹ್ಮಣರೇ ಹೊರತು ಅಂಬೇಡ್ಕರ್‌ ಅಲ್ಲ: ಗುಜರಾತ್‌ ಸ್ಪೀಕರ್‌ ವಿವಾದಾತ್ಮಕ ಹೇಳಿಕೆ

“ಅಧೀನ ನ್ಯಾಯಾಲಯಗಳ ಭಾಷೆ ಹೇಗಿರಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್‌ಗೆ ಅನೇಕ ಪತ್ರಗಳು ಬರುತ್ತವೆ, ಆದರೆ ಈ ವಿಷಯದ ಬಗ್ಗೆ ಪರಾಮರ್ಶೆ ನಡೆಯುತ್ತಿಲ್ಲ ಎಂದೆನಿಸುತ್ತದೆ. ಡಾ. ಅಂಬೇಡ್ಕರ್ ಈ ಅಂಶವನ್ನು ನಿರೀಕ್ಷಿಸಿದ್ದರು ಮತ್ತು ಅವರು ಭಾರತದ ಒಕ್ಕೂಟದ ಅಧಿಕೃತ ಭಾಷೆ ಸಂಸ್ಕೃತವಾಗಿರಬೇಕು ಎಂಬ ಪ್ರಸ್ತಾಪವನ್ನು ಇಟ್ಟಿದ್ದರು” ಎಂದು ಬೋಬ್ಡೆ ಹೇಳಿದ್ದಾರೆ.

ಕೆಲವು ಮೌಲ್ವಿಗಳು, ಪಂಡಿತರು ಮತ್ತು ಪುರೋಹಿತರು, ಅಂಬೇಡ್ಕರ್‌ ​​ಅವರ ಸಹಿಯನ್ನು ಹೊಂದಿರುವ ಆ ಪ್ರಸ್ತಾಪವನ್ನು ಮಂಡಿಸಲಾಗಿದೆಯೆ ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ: ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ

“ಉತ್ತರ ಭಾರತದಲ್ಲಿ ತಮಿಳು ಸ್ವೀಕಾರಾರ್ಹವಲ್ಲವಾದ್ದರಿಂದ ಅದನ್ನು ಅಲ್ಲಿ ವಿರೋಧಿಸಬಹುದು ಮತ್ತು ಅದೇ ರೀತಿ ದಕ್ಷಿಣ ಭಾರತದಲ್ಲಿ ಹಿಂದಿಯನ್ನು ವಿರೋಧಿಸಬಹುದು ಎಂಬುದು ಅಂಬೇಡ್ಕರ್ ಅವರ ಅಭಿಪ್ರಾಯವಾಗಿತ್ತು. ಆದರೆ, ಉತ್ತರ ಭಾರತ ಅಥವಾ ದಕ್ಷಿಣ ಭಾರತದಲ್ಲಿ ಸಂಸ್ಕೃತವನ್ನು ವಿರೋಧಿಸುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಅವರು ಈ ಪ್ರಸ್ತಾಪವನ್ನು ಇಟ್ಟಿದ್ದರು, ಆದರೆ ಅದು ಯಶಸ್ವಿಯಾಗಲಿಲ್ಲ” ಎಂದು ಸಿಜೆಐ ಬೊಬ್ಡೆ ಹೇಳಿದ್ದಾರೆ.

“ಅಂಬೇಡ್ಕರ್ ಅವರಿಗೆ ಕಾನೂನಿನ ಬಗ್ಗೆ ಮಾತ್ರವಲ್ಲದೆ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆಯೂ ಚೆನ್ನಾಗಿ ತಿಳಿದಿತ್ತು. ಜನರು, ದೇಶದ ಬಡವರು ಏನು ಬಯಸುತ್ತಾರೆಂದು ಅವರಿಗೆ ತಿಳಿದಿತ್ತು. ಈ ಎಲ್ಲ ಅಂಶಗಳ ಬಗ್ಗೆ ಅವರಿಗೆ ಸಂಪೂರ್ಣ ಜ್ಞಾನವಿತ್ತು ಮತ್ತು ಅದಕ್ಕಾಗಿಯೇ ಅವರು ಈ ಪ್ರಸ್ತಾಪವನ್ನು ಮಂಡಿಸಲು ಯೋಚಿಸಿದ್ದರು” ಎಂದು ಸಿಜೆಐ ಬೋಬ್ಡೆ ಹೇಳಿದ್ದಾರೆ.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...