Homeಕರೋನಾ ತಲ್ಲಣಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

ಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

- Advertisement -
- Advertisement -

ಚತ್ತೀಸ್‌ಗಡದ ರಾಜನಂದಗಾಂವ್‌ನಲ್ಲಿ ಕೊರೊನಾದಿಂದ ಮೃತಪಟ್ಟ ರೋಗಿಗಳ ಶವಗಳನ್ನು ಸಾಗಿಸಲು ಕಸದ ವ್ಯಾನ್ ಬಳಸುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಾಲ್ಕು ನೈರ್ಮಲ್ಯ ಕಾರ್ಮಿಕರು, ಪೂರ್ಣ ಪಿಪಿಇ ಕಿಟ್‌ಗಳನ್ನು ಧರಿಸಿ, ಶವಗಳನ್ನು ಶವಸಂಸ್ಕಾರಕ್ಕೆ ಕರೆದೊಯ್ಯಲು ಬೇಕಾಗಿ ವ್ಯಾನ್‌ನ ಹಿಂಭಾಗಕ್ಕೆ ಎತ್ತಿ ಹಾಕುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ತಲ್ಲಣ ಸೃಷ್ಟಿಸಿದ್ದು, ಸರ್ಕಾರದ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ಬಗ್ಗೆ ಮುಖ್ಯ ವೈದ್ಯಕೀಯ ಆರೋಗ್ಯ ಅಧಿಕಾರಿ, “ವಾಹನವನ್ನು ಜೋಡಿಸುವುದು ನಗರ ಪಂಚಾಯತ್ ಮತ್ತು ಸಿಎಮ್ಒನ ಜವಾಬ್ದಾರಿಯಾಗಿದೆ” ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳಲ್ಲಿನ ಉಲ್ಬಣ ಮತ್ತು ಹಾಸಿಗೆಗಳ ಕೊರತೆಯನ್ನು ಎದುರಿಸಲು, ರಾಜನಂದಗಾಂವ್‌ನ ಪ್ರೆಸ್ ಕ್ಲಬ್ ತನ್ನ ಆವರಣವನ್ನು ಕೋವಿಡ್ ಕೇಂದ್ರವನ್ನಾಗಿ ಪರಿವರ್ತಿಸಿದೆ. ರೋಗಲಕ್ಷಣವಿಲ್ಲದ ಆದರೆ ವೈದ್ಯಕೀಯ ನೆರವು ಅಗತ್ಯವಿರುವ ರೋಗಿಗಳಿಗೆ ಪ್ರೆಸ್ ಕ್ಲಬ್ ಸದಸ್ಯರು 30 ಹಾಸಿಗೆಗಳನ್ನು ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ದೇಶದ ಅತ್ಯಂತ ಹೆಚ್ಚು ಕೊರೊನಾ ಪೀಡಿತ ರಾಜ್ಯಗಳಲ್ಲಿ ಒಂದಾದ ಚತ್ತೀಸ್‌ಗಡದಲ್ಲಿ ಹೆಚ್ಚುತ್ತಿರುವ ಪ್ರಕರಣಗಳು ಮತ್ತು ಸಾವಿನಿಂದಾಗಿ ಆರೋಗ್ಯ ಮೂಲಸೌಕರ್ಯದ ಕೊರತೆ ಉಂಟಾಗಿದೆ.

ಪ್ರಮುಖ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕಗಳು ಮತ್ತು ಆಮ್ಲಜನಕ-ಸುಸಜ್ಜಿತ ಹಾಸಿಗೆಗಳು ಕಳೆದ ಒಂದು ವಾರದಿಂದ ಸುಮಾರು 100 ಪ್ರತಿಶತದಷ್ಟು ತುಂಬಿಹೋಗಿದೆ. ಶನಿವಾರದಂದು ರೆಕಾರ್ಡ್ ಮಾಡಲಾದ ವೀಡಿಯೊ ಕ್ಲಿಪ್ ಒಂದರಲ್ಲಿ ಮೃತ ದೇಹಗಳನ್ನು ಫ್ರೀಜರ್‌ಗಳಲ್ಲಿ ಇರಿಸಿಕೊಳ್ಳುವ ಬದಲು, ಎಲ್ಲೆಂದರಲ್ಲಿ ಇರಿಸಲಾಗುತ್ತಿವ ದೃಶ್ಯವನ್ನು ತೋರಿಸಿತ್ತು.

ಚತ್ತೀಸ್‌ಗಡದಲ್ಲಿ ಬುಧವಾರ 14,250 ಹೊಸ ಕೊರೊನಾ ಪ್ರಕರಣಗಳು ಮತ್ತು 120 ಸಾವುಗಳು ವರದಿಯಾಗಿದೆ. ರಾಜ್ಯದಲ್ಲಿ ಸೋಂಕಿನ ಸಂಖ್ಯೆ 4,86,244 ಮತ್ತು ಸಾವಿನ ಸಂಖ್ಯೆ 5,307 ಕ್ಕೆ ತಲುಪಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ತಿಳಿಸಿದೆ.

ಕಳೆದ ಒಂದು ತಿಂಗಳಲ್ಲಿ ರಾಜ್ಯದಲ್ಲಿ 1.68 ಲಕ್ಷ ಪ್ರಕರಣಗಳು ಮತ್ತು 1,417 ಸಾವುಗಳು ದಾಖಲಾಗಿವೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಚಿಕಿತ್ಸೆಗೆ ರೆಮ್ಡಿಸಿವಿರ್‌ ಕೊರತೆ: ಖಾಸಗಿ ಆಸ್ಪತ್ರೆಗಳ ಒಕ್ಕೂಟ ‘ಫಾನಾ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...