Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...