Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...