Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...