Homeಕರೋನಾ ತಲ್ಲಣದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

"ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಇಲ್ಲಿ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿಲ್ಲ"

- Advertisement -
- Advertisement -

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಸಂಬಂಧಿತ ಸಾವುಗಳು ಹೆಚ್ಚುತ್ತಲೇ ಇದೆ. ಈ ಹಿನ್ನೆಲೆ ದೆಹಲಿಯ ಅತಿದೊಡ್ಡ ಶವಾಗಾರವಾದ ನಿಗಂಬೋಧ್ ಘಾಟ್‌ನಲ್ಲಿ ಪ್ರತಿದಿನ ಶವಸಂಸ್ಕಾರಗಳ ಸಂಖ್ಯೆ 15 ರಿಂದ 30 ಕ್ಕೆ ಏರಿಕೆಯಾಗುತ್ತಿದೆ. ಜೊತೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ನೀಡಿ, ವಾರಾಂತ್ಯ ಕರ್ಫ್ಯೂ ಘೋಷಿಸಿ ಆದೇಶಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕದಿಂದ ದೆಹಲಿಯಲ್ಲಿ ಬುಧವಾರ 104 ಸಾವುಗಳು ದಾಖಲಾಗಿವೆ. ನವೆಂಬರ್ 20 ರಿಂದ ಇತ್ತಿಚೆಗೆ ದಾಖಲಾದ ಅತಿ ಹೆಚ್ಚಿನ ಕೊರೊನಾ ಸಾವುಗಳ ಸಂಖ್ಯೆಯಾಗಿದೆ.

ಮಂಗಳವಾರ ರಾತ್ರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ತನ್ನ ಅಜ್ಜನ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ತಂದಿದ್ದ ಗೌತಮ್ (27) ಬುಧವಾರ ಬೆಳಿಗ್ಗೆ 8:30 ಕ್ಕೆ ನಿಗಂಬೋಧ್ ಘಾಟ್‌ಗೆ ತಲುಪಿದ್ದರು. ಶವಸಂಸ್ಕಾರ ಕೇಂದ್ರದಲ್ಲಿ ಸ್ಥಳಾವಕಾಶವಿಲ್ಲದ ಕಾರಣ ಅಂತ್ಯಕ್ರಿಯೆ ನಡೆಸಲು ಸುಮಾರು ಐದು ಗಂಟೆಗಳಿಗಿಂತಲು ಹೆಚ್ಚು ಕಾಲ ಕಾಯಬೇಕಾಗಿತ್ತು.

ಇದನ್ನೂ ಓದಿ: ಪೂಜಾ ಸ್ಥಳಗಳ ಕಾಯ್ದೆ ರದ್ದು ಮಾಡುವ ಹುನ್ನಾರ; ಸೆಕ್ಯುಲರಿಸಂನ ಶವಸಂಸ್ಕಾರ

“ನಾವು ಬೆಳಿಗ್ಗೆ 8: 30 ಕ್ಕೆ ನಿಗಂಬೋಧ್ ಘಾಟ್‌ಗೆ ಬಂದಿದ್ದೇವೆ. ಐದು ಗಂಟೆಗಳು ಕಳೆದರು ನಮ್ಮ ಸರದಿ ಇನ್ನೂ ಬಂದಿರಲಿಲ್ಲ. ಇಲ್ಲಿನ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಪ್ರತಿ ಆಂಬ್ಯುಲೆನ್ಸ್‌ನಲ್ಲಿ ಎರಡು ಮೂರು ಮೃತ ದೇಹಗಳನ್ನು ತರಲಾಗುತ್ತಿದೆ” ಎಂದು ಗೌತಮ್ ಹೇಳಿದ್ದಾರೆ.

ಸ್ಮಶಾನದ ಉಸ್ತುವಾರಿಯಾಗಿರುವ ಮೊಹಮ್ಮದ್ ಶಮೀಮ್, “ಅಂತ್ಯಸಂಸ್ಕಾರಕ್ಕೆ ದಿನಕ್ಕೆ ಒಂದು ಅಥವಾ ಎರಡು ಮೃತ ದೇಹಗಳು ಬರುತ್ತಿದ್ದವು. ಕಳೆದ ಐದು ದಿನಗಳಲ್ಲಿ ಸ್ಥಿತಿ ಹದಗೆಟ್ಟಿದ್ದು, ಪ್ರತಿದಿನ 17 ಮೃತದೇಹಗಳು ಬರುತ್ತಿದೆ. ನಮಗೆ ಇನ್ನೂ 90 ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳಾವಕಾಶವಿದೆ. ಪರಿಸ್ಥಿತಿ ಮುಂದುವರಿದರೆ ಇದು ಮುಂದಿನ 10 ದಿನಗಳಲ್ಲಿ ಇಲ್ಲಿ ಯಾವುದೇ ಸ್ಥಳಾವಕಾಶವಿಲ್ಲ” ಎಂದಿದ್ದಾರೆ.

ಇತ್ತ ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಈಗಾಗಲೇ ತಯಾರಿ ಮಾಡಿಕೊಂಡಿರುವ ವಿವಾಹಗಳಂತಹ ಅಗತ್ಯ ಚಟುವಟಿಕೆಗಳನ್ನು ಕರ್ಫ್ಯೂ ಪಾಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಭಾಂಗಣಗಳು, ಮಾಲ್‌ಗಳು, ಜಿಮ್‌ಗಳು ಮತ್ತು ಸ್ಪಾಗಳನ್ನು ಮುಚ್ಚಲಾಗುತ್ತದೆ. ವಾರದ ದಿನಗಳಲ್ಲಿ ಮೂರನೇ ಒಂದು ಭಾಗದಷ್ಟು ಸಾಮರ್ಥ್ಯದೊಂದಿಗೆ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಹೊರಗಡೆ ಊಟ ಮಾಡುವುದನ್ನು ನಿಷೇಧಿಸಿ, ಪಾರ್ಸಲ್ ವ್ಯವಸ್ಥೆಗೆ ಮಾತ್ರ ಒಪ್ಪಿಗೆ ನೀಡಲಾಗಿದೆ.

“ಈ ನಿರ್ಬಂಧಗಳು ನಿಮ್ಮ ಸಲುವಾಗಿ, ನಿಮಗಾಗಿ ಮತ್ತು ನಿಮ್ಮ ಕುಟುಂಬಗಳಿಗೆ. ಇದು ಅನಾನುಕೂಲವಾಗುತ್ತದೆ ನಿಜ ಆದರೆ, ಕೊರೊನಾ ಹರಡುವುದನ್ನು ತಡೆಯಲು ಇದು ಅವಶ್ಯಕ” ಎಂದು ಅರವಿಂದ್ ಕೇಜ್ರಿವಾಲ್ ವಿಡಿಯೋ ಭಾಷಣದಲ್ಲಿ ತಿಳಿಸಿದ್ದಾರೆ. ಜೊತೆಗೆ ಎಲ್ಲಾ ಅಗತ್ಯ ಸೇವೆಗಳು ವಾರಾಂತ್ಯದಲ್ಲಿ ಲಭ್ಯವಿರುತ್ತವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ: ಮೃತದೇಹವನ್ನು ಕಸದ ವಾಹನದಲ್ಲಿ ಸಾಗಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...