Homeಕರ್ನಾಟಕಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81...

ಮಸ್ಕಿ: ಬಿಜೆಪಿ ಪರ ಹಣ ಹಂಚಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹಾಸನದ ಯುವಕರ ಬಂಧನ; 81 ಸಾವಿರ ರೂ. ವಶ!

- Advertisement -
- Advertisement -

ಬಿಜೆಪಿ ಮಸ್ಕಿಯಲ್ಲಿ ಒಂದು ವೋಟಿಗೆ ಸಾವಿರ ನಿಗದಿ ಮಾಡಿದೆ ಎಂದ ಆರೋಪಗಳು ಕೇಳಿ ಬಂದಿವೆ. ಇದಕ್ಕೆ ಸಾಕ್ಷಿ ಎಂಬಂತೆ ಮಸ್ಕಿಯ ತುರ್ವಿಹಾಳದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಿ ಎಂದು ಹಣ ಹಂಚುತ್ತಿದ್ದ ಮೂವರನ್ನು ನಿನ್ನೆ ಬಂಧಿಸಲಾಗಿದ್ದು, ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣ ಹಂಚುತ್ತಿದ್ದ ಮೂವರು ಯುವಕರು ತಾವು ಹಾಸನದವರೆಂದು ಪೊಲೀಸರ ಎದುರು ಒಪ್ಪಿಕೊಂಡಿದ್ದು, ನವೀನ್, ಸಚಿನ್ ಮತ್ತು ಆನಂದ್ ಎಂಬ ಯುವಕರ ಮೇಲೆ ಪ್ರಕರಣ ದಾಖಲಾಗಿದೆ. ಇವರಿಂದ 81 ಸಾವಿರ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮಸ್ಕಿ: ಬಿಜೆಪಿ ಹಣ ಹಂಚಿಕೆ ಆರೋಪದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್

ತುರ್ವಿಹಾಳದ ಶ್ರೀನಿವಾಸ್ ಕ್ಯಾಂಪ್ ರಸ್ತೆ ಬಳಿಯ ವಾರ್ಡ್ 1 ಮತ್ತು 3 ರಲ್ಲಿ ಮನೆಮನೆಗೆ ತೆರಳಿ, ಪ್ರತಾಪ ಗೌಡರಿಗೆ ಮತ ನೀಡುವಂತೆ ಹಣ ಹಂಚುತ್ತಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಇವರನ್ನು ಹಿಡಿದು, ’ನೀವೆಲ್ಲ ಎಲ್ಲಿಂದ ಬಂದಿರಲೇ?’ ಎಂದು ಆಕ್ರೋಶ ವ್ಯಕ್ತಪಡಿಸುವ ವಿಡಿಯೋ ವೈರಲ್ ಆಗಿದೆ. ನಂತರ ಕಾಂಗ್ರೆಸ್ ಕಾರ್ಯಕರ್ತರು ಈ ಮೂವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆ ಸಂದರ್ಭದಲ್ಲಿ ಠಾಣೆಗೆ ಬಂದ ಚುನಾವಣಾ ಜಾಗೃತ ದಳದ ಅಧಿಕಾರಿ ಎಂ. ಬೀರಪ್ಪ ಅವರ ತಂಡ ಈ ಮೂವರನ್ನು ವಿಚಾರಣೆಗೆ ಒಳಪಡಿಸಿದೆ. ಪ್ರಕರಣ ದಾಖಲಿಸಿ ಹಾಗೇ ಬಿಟ್ಟು ಕಳಿಸಲಾಗಿದೆಯೇ ಎಂಬ ಅನುಮಾನವೂ ಜನರಲ್ಲಿದೆ. ಈ ಕುರಿತು ಹೆಚ್ಚಿನ ವಿವರಣೆಗಾಗಿ ತುರ್ವಿಹಾಳ್ ಠಾಣೆಯ ಪಿಎಸ್‌ಐ ಯರಿಯಪ್ಪಂಗಡಿಯವರನ್ನು ಫೋನಿನಲ್ಲಿ ಸಂರ್ಕಿಸಲು ಯತ್ನಿಸಿದೆವು. ಅವರು ಲಭ್ಯವಾಗಿಲ್ಲ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿಚಾರದಲ್ಲಿ ಚುನಾವಣಾ ಆಯೋಗ ಪಕ್ಷಪಾತ ತೋರುತ್ತಿದೆ- ಶಿವಸೇನೆ

ಹೊರಗಿನವರ ಆಟ-ಬಂಗಾಳದಲ್ಲೂ, ಇಲ್ಲೂ

ಬಂಗಾಳದಲ್ಲೂ ಬಿಜೆಪಿ ಸಾವಿರಾರು ಸಂಖ್ಯೆಯಲ್ಲಿ ಹೊರಗಿನವರನ್ನು ಕರೆತಂದು ಗಲಭೆ ಮತ್ತು ಕೊವಿಡ್ ಹರಡುವಿಕೆಗೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸುತ್ತಲೇ ಇದ್ದಾರೆ.
ಮಸ್ಕಿಯಲ್ಲೂ ಹಾಸನ, ಶಿರಾ, ಶಿವಮೊಗ್ಗ, ಮೈಸೂರು ಕಡೆಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಹಣ ಹಂಚಲು ಕರೆ ತರಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಕಾರ್ಯಾಚರಣೆ ಹಿಂದೆ ವಿಜಯೇಂದ್ರ ಇದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರನ್ನೂ ಸಲ್ಲಿಸಿದೆ.

ಆದರೆ, ಆಯೋಗ ಇದನ್ನು ಗಂಭಿರವಾಗಿ ಪರಿಗಣಿಸಿಲ್ಲ, ಇದಕ್ಕೆ ಸರ್ಕಾರದ ಪ್ರಭಾವ ಕಾರಣ ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ. ಹಣ ಹಂಚುವ ವಿಡಿಯೋಗಳು ಹರಿದಾಡಿದರೂ ಇಲ್ಲಿನ ಚುನಾವಣಾ ಜಾಗೃತಾ ಅಧಿಕಾರಿಗಳು ಮತ್ತು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ.

ಮಸ್ಕಿ ಪಕ್ಕದ ಮುದಗಲ್, ಲಿಂಗಸೂಗುರು ಮತ್ತು ಸಿಂಧನೂರಿನ ಲಾಡ್ಜ್‌ಗಳ ಮೇಲೆ ದಾಳಿ ನಡೆಸಿದರೆ ನೂರಾರು ಕಾರ್ಯಕರ್ತರು ಮತ್ತು ಅಪಾರ ಹಣ ಸಿಗಬಹುದು ಎಂದು ರೈತ ಹೋರಾಟಗಾರರು ಹೇಳುತ್ತಲೇ ಬಂದಿದ್ದಾರೆ. ಇಂದು ರಾತ್ರಿ ಪ್ರಚಾರ ಅಂತ್ಯವಾಗಲಿದ್ದು ಬಿಜೆಪಿ ಸಾಕಷ್ಟು ಹಣ ಹರಿಸಲಿದೆ ಎಂದೂ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...