Homeಕರ್ನಾಟಕಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

- Advertisement -
- Advertisement -

ಕೆಎಸ್‌ಆ‌ರ್‌ಟಿಸಿ ಸಾರಿಗೆ ನೌಕರರ ಮುಷ್ಕರ ಒಂಬತ್ತನೆ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಒಕ್ಕೂಟವು ಖ್ಯಾತ ಕನ್ನಡ ಚಲನಚಿತ್ರ ನಟ ಯಶ್ ಅವರಿಗೆ ತಮ್ಮ ಮುಷ್ಕರವನ್ನು ಬೆಂಬಲಿಸುವಂತೆ ವಿನಂತಿಸಿ ಬರೆದಿರುವ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದು, ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.

ನೌಕರರ ಪತ್ರಕ್ಕೆ ನೀಡಿರುವ ಪ್ರತ್ಯುತ್ತರದ ಪತ್ರವನ್ನು ಗುರುವಾರ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಯಶ್‌, “ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

ಅವರು ತಮ್ಮ ಪತ್ರದಲ್ಲಿ, “ಇಂದು ನಿಮ್ಮ ಯಶ್‌ ಏನೇ ಆಗಿರಬಹುದು, ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್‌ ಮಿಸ್‌ ಆಗುತ್ತೇನೋ, ಆಫೀಸ್‌ ಗೆ ಲೇಟ್‌ ಆಗುತ್ತೇನೋ ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರೆದು ಬರೆದಿರುವ ಅವರು, “ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ, ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್‌ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

“ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ನೌಕರರ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು! ವಿಡಿಯೋ ನೋಡಿ

“ಸಮಾಧಾನದ ವಿಷಯ ಅಂದ್ರೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ. ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು” ಎಂದ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ” ಎಂದು ಅವರು ತಮ್ಮ ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...