Homeಕರ್ನಾಟಕಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರ ಹೋರಾಟವನ್ನು ಬೆಂಬಲಿಸಿದ ನಟ ‘ಯಶ್‌’

- Advertisement -
- Advertisement -

ಕೆಎಸ್‌ಆ‌ರ್‌ಟಿಸಿ ಸಾರಿಗೆ ನೌಕರರ ಮುಷ್ಕರ ಒಂಬತ್ತನೆ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಒಕ್ಕೂಟವು ಖ್ಯಾತ ಕನ್ನಡ ಚಲನಚಿತ್ರ ನಟ ಯಶ್ ಅವರಿಗೆ ತಮ್ಮ ಮುಷ್ಕರವನ್ನು ಬೆಂಬಲಿಸುವಂತೆ ವಿನಂತಿಸಿ ಬರೆದಿರುವ ಪತ್ರಕ್ಕೆ ಪ್ರತ್ಯುತ್ತರ ನೀಡಿದ್ದು, ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.

ನೌಕರರ ಪತ್ರಕ್ಕೆ ನೀಡಿರುವ ಪ್ರತ್ಯುತ್ತರದ ಪತ್ರವನ್ನು ಗುರುವಾರ ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಯಶ್‌, “ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ಮುಷ್ಕರ ಆರನೇ ದಿನಕ್ಕೆ-ತಟ್ಟೆ, ಲೋಟ ಬಡಿದು ನೌಕರರ ಪ್ರತಿಭಟನೆ!

ಅವರು ತಮ್ಮ ಪತ್ರದಲ್ಲಿ, “ಇಂದು ನಿಮ್ಮ ಯಶ್‌ ಏನೇ ಆಗಿರಬಹುದು, ಆದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿಯೇ ಬರೋ ಪ್ರಯಾಣಿಕರಿಗೆ ಟ್ರೈನ್‌ ಮಿಸ್‌ ಆಗುತ್ತೇನೋ, ಆಫೀಸ್‌ ಗೆ ಲೇಟ್‌ ಆಗುತ್ತೇನೋ ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೇ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ” ಎಂದು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಮುಂದುವರೆದು ಬರೆದಿರುವ ಅವರು, “ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ, ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸಾರಿಗೆ ನೌಕರರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿವೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್‌ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವನ್ನೂ ನಾನು ಹತ್ತಿರದಿಂದ ಬಲ್ಲವನು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾಳೆಯು ಸಾರಿಗೆ ಮುಷ್ಕರ ಮುಂದುವರಿಕೆ – ಯುಗಾದಿಗೆ ನೌಕರರಿಂದ ಭಿಕ್ಷಾಟನೆ ಪ್ರತಿಭಟನೆ!

“ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿವೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ” ಎಂದು ನೌಕರರ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದ್ದಾರೆ.

ರಾಜ್ಯ ಸರ್ಕಾರ ಸಂಬಳ ನೀಡದೆ ಇದ್ದಿದ್ದಕ್ಕೆ ಭಿಕ್ಷಾಟನೆ ನಡೆಸಿದ ಕೆಎಸ್‌ಆರ್‌ಟಿಸಿ ನೌಕರರನ ಮಗು! ವಿಡಿಯೋ ನೋಡಿ

“ಸಮಾಧಾನದ ವಿಷಯ ಅಂದ್ರೆ ಸಾರಿಗೆ ಸಚಿವರಾದ ಲಕ್ಷ್ಮಣ್‌ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ. ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು” ಎಂದ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

“ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ” ಎಂದು ಅವರು ತಮ್ಮ ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರವನ್ನು ಮುರಿಯಲು ಪ್ರಯತ್ನಿಸುತ್ತಿರುವ ಸರ್ಕಾರ?; ಗೃಹ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...