Homeಅಂತರಾಷ್ಟ್ರೀಯಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ...

ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ ಪತ್ರ

- Advertisement -
- Advertisement -

ಯುಎಸ್ ಇಂಟಲೆಕ್ಚುಯಲ್ ಪ್ರಾಪರ್ಟಿ ನಿಯಮಗಳನ್ನು ಬಿಡುವ ಮೂಲಕ ಕೊರೊನಾ ಲಸಿಕೆಗಳನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಕೋರಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್‌ಗೆ 170 ಕ್ಕೂ ಹೆಚ್ಚು ಮಾಜಿ ವಿಶ್ವ ನಾಯಕರು ಮತ್ತು ನೊಬೆಲ್ ಪ್ರಶಸ್ತಿ ವಿಜೇತರು ಪತ್ರ ಬರೆದಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಬಿಟ್ಟುಬಿಡುವಂತೆ ಮಾಡುವಂತೆ ಒತ್ತಾಯಿಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ಮುಂದಾಳತ್ವ ವಹಿಸಿರುವ ಪ್ರಸ್ತಾವನೆಗೆ 170 ಕ್ಕೂ ಪ್ರಸಿದ್ಧರು ಸಹಿ ಹಾಕಿದ್ದಾರೆ. ಈ ಬಹಿರಂಗ ಪತ್ರವನ್ನು ಬುಧವಾರ ಆಕ್ಸ್‌ಫ್ಯಾಮ್ ಹಂಚಿಕೊಂಡಿದೆ.

ಬಹಿರಂಗ ಪತ್ರಕ್ಕೆ ಸಹಿ ಮಾಡಿದವರಲ್ಲಿ ಬ್ರಿಟನ್ ಮಾಜಿ ಪ್ರಧಾನಿ ಗಾರ್ಡನ್ ಬ್ರೌನ್, ಮಾಜಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮತ್ತು ಶಾಂತಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಕೂಡ ಸೇರಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

“ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳ ಅಭೂತಪೂರ್ವ ಬೆಳವಣಿಗೆಯನ್ನು ಜಗತ್ತು ಕಂಡಿತು. ಇದಕ್ಕೆ ಅಮೆರಿಕದ ಸಾರ್ವಜನಿಕ ಹೂಡಿಕೆಗಾಗಿ ಧನ್ಯವಾದಗಳು. ಅಮೆರಿಕ ಮತ್ತು ಅನೇಕ ಶ್ರೀಮಂತ ದೇಶಗಳಲ್ಲಿ ಲಸಿಕೆ ಹಂಚಿಕೆ ಮತ್ತು ಉತ್ಪಾದನೆ ತಮ್ಮ ನಾಗರಿಕರಿಗೆ ಭರವಸೆಯನ್ನು ನೀಡುತ್ತಿದೆ. ಆದರೆ ವಿಶ್ವದ ಬಹುಪಾಲು ಜನರಿಗೆ ಅದೇ ಭರವಸೆ ಇನ್ನೂ ಸಿಕ್ಕಿಲ್ಲ. ಈಗ ಪ್ರಪಂಚದಾದ್ಯಂತ ಹೊಸ ಕೊರೊನಾ ಅಲೆಗಳು ಹೆಚ್ಚಾಗುತ್ತಿವೆ. ನಮ್ಮ ಜಾಗತಿಕ ಆರ್ಥಿಕತೆಯು ಈ ವೈರಸ್‌ಗೆ ಗುರಿಯಾದರೆ ಅದನ್ನು ಮತ್ತೆ ಪುನರ್ನಿರ್ಮಿಸಲು ಸಾಧ್ಯವಿಲ್ಲ”ಎಂದು  ಪತ್ರದಲ್ಲಿ ಬರೆದಿದ್ದಾರೆ.

“ಡಬ್ಲ್ಯುಟಿಒ ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದು, ಈ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ಒಂದು ಪ್ರಮುಖ ಮತ್ತು ಅಗತ್ಯವಾದ ಹೆಜ್ಜೆಯಾಗಿದೆ. ಲಸಿಕೆ ಜ್ಞಾನ ಮತ್ತು ತಂತ್ರಜ್ಞಾನವನ್ನು ಬಹಿರಂಗವಾಗಿ ಹಂಚಿಕೊಳ್ಳುವುದನ್ನು ಖಾತ್ರಿಪಡಿಸಿಕೊಳ್ಳುವುದರೊಂದಿಗೆ ಇದನ್ನು ಸಂಯೋಜಿಸಬೇಕು. ಇದು ಮತ್ತಷ್ಟು ಜೀವಗಳನ್ನು ಉಳಿಸುತ್ತದೆ”ಎಂದು ಬರೆಯಲಾಗಿದೆ.

ಫೆಬ್ರವರಿಯಲ್ಲಿ, ಯುಎಸ್‌ನಲ್ಲಿ ನೂರಾರು ನಾಗರಿಕ ಸಮಾಜ ಗುಂಪುಗಳು, ಹಲವಾರು ಪ್ರಗತಿಪರ ಶಾಸಕರು, ಕೋವಿಡ್ -19 ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾವನ್ನು ಬೆಂಬಲಿಸುವಂತೆ ಜೋ ಬೈಡನ್ ಆಡಳಿತದ ಮೇಲೆ ಒತ್ತಡ ಹೇರಿದ್ದರು.

ಕೋವಿಡ್ -19 ಸಂಬಂಧಿತ ಬೌದ್ಧಿಕ ಆಸ್ತಿ ನಿಯಮಗಳ (intellectual property rules) ತುರ್ತು ಮನ್ನಾವನ್ನು ಬೆಂಬಲಿಸುವುದರಿಂದ ಜಗತ್ತಿನಾದ್ಯಂತದ ಜನರು ಈ ಸಾಂಕ್ರಾಮಿಕ ವೈರಸ್‌ನಿಂದ ಮುಕ್ತರಾಗುವ ಅವಕಾಶ ಸಿಗುತ್ತದೆ ಎಂದು ವಿಶ್ವ ನಾಯಕರು ಹೇಳಿದ್ದಾರೆ.

ಕೋವಿಡ್ -19 ಲಸಿಕೆ ಪೇಟೆಂಟ್‌ಗಳಿಗೆ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಮನ್ನಾ ಮಾಡುವ ಭಾರತ ಮತ್ತು ದಕ್ಷಿಣ ಆಫ್ರಿಕಾದ ಜಂಟಿ ಪ್ರಸ್ತಾಪವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಬೆಂಬಲಿಸಿದ್ದಾರೆ. ಯುರೋಪಿಯನ್ ಪಾರ್ಲಿಮೆಂಟ್ (ಎಂಇಪಿ) ಯ 14 ಸದಸ್ಯರು ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...