Homeಅಂತರಾಷ್ಟ್ರೀಯಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ...

ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ ಪತ್ರ

- Advertisement -
- Advertisement -

ಯುಎಸ್ ಇಂಟಲೆಕ್ಚುಯಲ್ ಪ್ರಾಪರ್ಟಿ ನಿಯಮಗಳನ್ನು ಬಿಡುವ ಮೂಲಕ ಕೊರೊನಾ ಲಸಿಕೆಗಳನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಕೋರಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್‌ಗೆ 170 ಕ್ಕೂ ಹೆಚ್ಚು ಮಾಜಿ ವಿಶ್ವ ನಾಯಕರು ಮತ್ತು ನೊಬೆಲ್ ಪ್ರಶಸ್ತಿ ವಿಜೇತರು ಪತ್ರ ಬರೆದಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಬಿಟ್ಟುಬಿಡುವಂತೆ ಮಾಡುವಂತೆ ಒತ್ತಾಯಿಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ಮುಂದಾಳತ್ವ ವಹಿಸಿರುವ ಪ್ರಸ್ತಾವನೆಗೆ 170 ಕ್ಕೂ ಪ್ರಸಿದ್ಧರು ಸಹಿ ಹಾಕಿದ್ದಾರೆ. ಈ ಬಹಿರಂಗ ಪತ್ರವನ್ನು ಬುಧವಾರ ಆಕ್ಸ್‌ಫ್ಯಾಮ್ ಹಂಚಿಕೊಂಡಿದೆ.

ಬಹಿರಂಗ ಪತ್ರಕ್ಕೆ ಸಹಿ ಮಾಡಿದವರಲ್ಲಿ ಬ್ರಿಟನ್ ಮಾಜಿ ಪ್ರಧಾನಿ ಗಾರ್ಡನ್ ಬ್ರೌನ್, ಮಾಜಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮತ್ತು ಶಾಂತಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಕೂಡ ಸೇರಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

“ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳ ಅಭೂತಪೂರ್ವ ಬೆಳವಣಿಗೆಯನ್ನು ಜಗತ್ತು ಕಂಡಿತು. ಇದಕ್ಕೆ ಅಮೆರಿಕದ ಸಾರ್ವಜನಿಕ ಹೂಡಿಕೆಗಾಗಿ ಧನ್ಯವಾದಗಳು. ಅಮೆರಿಕ ಮತ್ತು ಅನೇಕ ಶ್ರೀಮಂತ ದೇಶಗಳಲ್ಲಿ ಲಸಿಕೆ ಹಂಚಿಕೆ ಮತ್ತು ಉತ್ಪಾದನೆ ತಮ್ಮ ನಾಗರಿಕರಿಗೆ ಭರವಸೆಯನ್ನು ನೀಡುತ್ತಿದೆ. ಆದರೆ ವಿಶ್ವದ ಬಹುಪಾಲು ಜನರಿಗೆ ಅದೇ ಭರವಸೆ ಇನ್ನೂ ಸಿಕ್ಕಿಲ್ಲ. ಈಗ ಪ್ರಪಂಚದಾದ್ಯಂತ ಹೊಸ ಕೊರೊನಾ ಅಲೆಗಳು ಹೆಚ್ಚಾಗುತ್ತಿವೆ. ನಮ್ಮ ಜಾಗತಿಕ ಆರ್ಥಿಕತೆಯು ಈ ವೈರಸ್‌ಗೆ ಗುರಿಯಾದರೆ ಅದನ್ನು ಮತ್ತೆ ಪುನರ್ನಿರ್ಮಿಸಲು ಸಾಧ್ಯವಿಲ್ಲ”ಎಂದು  ಪತ್ರದಲ್ಲಿ ಬರೆದಿದ್ದಾರೆ.

“ಡಬ್ಲ್ಯುಟಿಒ ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದು, ಈ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ಒಂದು ಪ್ರಮುಖ ಮತ್ತು ಅಗತ್ಯವಾದ ಹೆಜ್ಜೆಯಾಗಿದೆ. ಲಸಿಕೆ ಜ್ಞಾನ ಮತ್ತು ತಂತ್ರಜ್ಞಾನವನ್ನು ಬಹಿರಂಗವಾಗಿ ಹಂಚಿಕೊಳ್ಳುವುದನ್ನು ಖಾತ್ರಿಪಡಿಸಿಕೊಳ್ಳುವುದರೊಂದಿಗೆ ಇದನ್ನು ಸಂಯೋಜಿಸಬೇಕು. ಇದು ಮತ್ತಷ್ಟು ಜೀವಗಳನ್ನು ಉಳಿಸುತ್ತದೆ”ಎಂದು ಬರೆಯಲಾಗಿದೆ.

ಫೆಬ್ರವರಿಯಲ್ಲಿ, ಯುಎಸ್‌ನಲ್ಲಿ ನೂರಾರು ನಾಗರಿಕ ಸಮಾಜ ಗುಂಪುಗಳು, ಹಲವಾರು ಪ್ರಗತಿಪರ ಶಾಸಕರು, ಕೋವಿಡ್ -19 ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾವನ್ನು ಬೆಂಬಲಿಸುವಂತೆ ಜೋ ಬೈಡನ್ ಆಡಳಿತದ ಮೇಲೆ ಒತ್ತಡ ಹೇರಿದ್ದರು.

ಕೋವಿಡ್ -19 ಸಂಬಂಧಿತ ಬೌದ್ಧಿಕ ಆಸ್ತಿ ನಿಯಮಗಳ (intellectual property rules) ತುರ್ತು ಮನ್ನಾವನ್ನು ಬೆಂಬಲಿಸುವುದರಿಂದ ಜಗತ್ತಿನಾದ್ಯಂತದ ಜನರು ಈ ಸಾಂಕ್ರಾಮಿಕ ವೈರಸ್‌ನಿಂದ ಮುಕ್ತರಾಗುವ ಅವಕಾಶ ಸಿಗುತ್ತದೆ ಎಂದು ವಿಶ್ವ ನಾಯಕರು ಹೇಳಿದ್ದಾರೆ.

ಕೋವಿಡ್ -19 ಲಸಿಕೆ ಪೇಟೆಂಟ್‌ಗಳಿಗೆ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಮನ್ನಾ ಮಾಡುವ ಭಾರತ ಮತ್ತು ದಕ್ಷಿಣ ಆಫ್ರಿಕಾದ ಜಂಟಿ ಪ್ರಸ್ತಾಪವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಬೆಂಬಲಿಸಿದ್ದಾರೆ. ಯುರೋಪಿಯನ್ ಪಾರ್ಲಿಮೆಂಟ್ (ಎಂಇಪಿ) ಯ 14 ಸದಸ್ಯರು ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...