Homeಅಂತರಾಷ್ಟ್ರೀಯಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ...

ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ ಬೈಡನ್‌ಗೆ ಪತ್ರ

- Advertisement -
- Advertisement -

ಯುಎಸ್ ಇಂಟಲೆಕ್ಚುಯಲ್ ಪ್ರಾಪರ್ಟಿ ನಿಯಮಗಳನ್ನು ಬಿಡುವ ಮೂಲಕ ಕೊರೊನಾ ಲಸಿಕೆಗಳನ್ನು ಹೆಚ್ಚು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಕೋರಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್‌ಗೆ 170 ಕ್ಕೂ ಹೆಚ್ಚು ಮಾಜಿ ವಿಶ್ವ ನಾಯಕರು ಮತ್ತು ನೊಬೆಲ್ ಪ್ರಶಸ್ತಿ ವಿಜೇತರು ಪತ್ರ ಬರೆದಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಬಿಟ್ಟುಬಿಡುವಂತೆ ಮಾಡುವಂತೆ ಒತ್ತಾಯಿಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ಮುಂದಾಳತ್ವ ವಹಿಸಿರುವ ಪ್ರಸ್ತಾವನೆಗೆ 170 ಕ್ಕೂ ಪ್ರಸಿದ್ಧರು ಸಹಿ ಹಾಕಿದ್ದಾರೆ. ಈ ಬಹಿರಂಗ ಪತ್ರವನ್ನು ಬುಧವಾರ ಆಕ್ಸ್‌ಫ್ಯಾಮ್ ಹಂಚಿಕೊಂಡಿದೆ.

ಬಹಿರಂಗ ಪತ್ರಕ್ಕೆ ಸಹಿ ಮಾಡಿದವರಲ್ಲಿ ಬ್ರಿಟನ್ ಮಾಜಿ ಪ್ರಧಾನಿ ಗಾರ್ಡನ್ ಬ್ರೌನ್, ಮಾಜಿ ಫ್ರೆಂಚ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮತ್ತು ಶಾಂತಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಕೂಡ ಸೇರಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

“ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಗಳ ಅಭೂತಪೂರ್ವ ಬೆಳವಣಿಗೆಯನ್ನು ಜಗತ್ತು ಕಂಡಿತು. ಇದಕ್ಕೆ ಅಮೆರಿಕದ ಸಾರ್ವಜನಿಕ ಹೂಡಿಕೆಗಾಗಿ ಧನ್ಯವಾದಗಳು. ಅಮೆರಿಕ ಮತ್ತು ಅನೇಕ ಶ್ರೀಮಂತ ದೇಶಗಳಲ್ಲಿ ಲಸಿಕೆ ಹಂಚಿಕೆ ಮತ್ತು ಉತ್ಪಾದನೆ ತಮ್ಮ ನಾಗರಿಕರಿಗೆ ಭರವಸೆಯನ್ನು ನೀಡುತ್ತಿದೆ. ಆದರೆ ವಿಶ್ವದ ಬಹುಪಾಲು ಜನರಿಗೆ ಅದೇ ಭರವಸೆ ಇನ್ನೂ ಸಿಕ್ಕಿಲ್ಲ. ಈಗ ಪ್ರಪಂಚದಾದ್ಯಂತ ಹೊಸ ಕೊರೊನಾ ಅಲೆಗಳು ಹೆಚ್ಚಾಗುತ್ತಿವೆ. ನಮ್ಮ ಜಾಗತಿಕ ಆರ್ಥಿಕತೆಯು ಈ ವೈರಸ್‌ಗೆ ಗುರಿಯಾದರೆ ಅದನ್ನು ಮತ್ತೆ ಪುನರ್ನಿರ್ಮಿಸಲು ಸಾಧ್ಯವಿಲ್ಲ”ಎಂದು  ಪತ್ರದಲ್ಲಿ ಬರೆದಿದ್ದಾರೆ.

“ಡಬ್ಲ್ಯುಟಿಒ ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ತಾತ್ಕಾಲಿಕವಾಗಿ ಮನ್ನಾ ಮಾಡುವುದು, ಈ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ಒಂದು ಪ್ರಮುಖ ಮತ್ತು ಅಗತ್ಯವಾದ ಹೆಜ್ಜೆಯಾಗಿದೆ. ಲಸಿಕೆ ಜ್ಞಾನ ಮತ್ತು ತಂತ್ರಜ್ಞಾನವನ್ನು ಬಹಿರಂಗವಾಗಿ ಹಂಚಿಕೊಳ್ಳುವುದನ್ನು ಖಾತ್ರಿಪಡಿಸಿಕೊಳ್ಳುವುದರೊಂದಿಗೆ ಇದನ್ನು ಸಂಯೋಜಿಸಬೇಕು. ಇದು ಮತ್ತಷ್ಟು ಜೀವಗಳನ್ನು ಉಳಿಸುತ್ತದೆ”ಎಂದು ಬರೆಯಲಾಗಿದೆ.

ಫೆಬ್ರವರಿಯಲ್ಲಿ, ಯುಎಸ್‌ನಲ್ಲಿ ನೂರಾರು ನಾಗರಿಕ ಸಮಾಜ ಗುಂಪುಗಳು, ಹಲವಾರು ಪ್ರಗತಿಪರ ಶಾಸಕರು, ಕೋವಿಡ್ -19 ಲಸಿಕೆಗಳ ಮೇಲಿನ ಪೇಟೆಂಟ್ ಮನ್ನಾವನ್ನು ಬೆಂಬಲಿಸುವಂತೆ ಜೋ ಬೈಡನ್ ಆಡಳಿತದ ಮೇಲೆ ಒತ್ತಡ ಹೇರಿದ್ದರು.

ಕೋವಿಡ್ -19 ಸಂಬಂಧಿತ ಬೌದ್ಧಿಕ ಆಸ್ತಿ ನಿಯಮಗಳ (intellectual property rules) ತುರ್ತು ಮನ್ನಾವನ್ನು ಬೆಂಬಲಿಸುವುದರಿಂದ ಜಗತ್ತಿನಾದ್ಯಂತದ ಜನರು ಈ ಸಾಂಕ್ರಾಮಿಕ ವೈರಸ್‌ನಿಂದ ಮುಕ್ತರಾಗುವ ಅವಕಾಶ ಸಿಗುತ್ತದೆ ಎಂದು ವಿಶ್ವ ನಾಯಕರು ಹೇಳಿದ್ದಾರೆ.

ಕೋವಿಡ್ -19 ಲಸಿಕೆ ಪೇಟೆಂಟ್‌ಗಳಿಗೆ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಮನ್ನಾ ಮಾಡುವ ಭಾರತ ಮತ್ತು ದಕ್ಷಿಣ ಆಫ್ರಿಕಾದ ಜಂಟಿ ಪ್ರಸ್ತಾಪವನ್ನು ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರು ಬೆಂಬಲಿಸಿದ್ದಾರೆ. ಯುರೋಪಿಯನ್ ಪಾರ್ಲಿಮೆಂಟ್ (ಎಂಇಪಿ) ಯ 14 ಸದಸ್ಯರು ಕೋವಿಡ್ -19 ಲಸಿಕೆ ಪೇಟೆಂಟ್‌ಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮಸ್ಕಿಯಲ್ಲಿ ಮಟಮಟ ಮಧ್ಯಾಹ್ನವೇ ಕಾಂಚಾಣ ಝಣಝಣ: ಬಿಜೆಪಿ ಪರ ಪ್ರಚಾರಕ್ಕಿಳಿದ ಗಾಯಕಿ ಮಂಗ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...