Homeಮುಖಪುಟಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ‌ಬಿಹಾರ್‌ ಜಿಲ್ಲೆಯ ಸೀತಾಲ್ಕುಚಿಯಲ್ಲಿ ಮತದಾನದ ಸಂದರ್ಭದಲ್ಲಿ ಗುಂಪೊಂದು ಮತಗಟ್ಟೆಯ ಮೇಲೆ ದಾಳಿ ಮಾಡಿತೆಂದು ಅರೆಸೇನಾ ಪಡೆಗಳು ಗೋಲಿಬಾರ್ ನಡೆಸಿ ನಾಲ್ಕು ಜನರನ್ನು ಹತ್ಯೆ ಮಾಡಿದ್ದವು. ಆದರೆ ಗೋಲಿಬಾರ್‌ ನಡೆದ ಪ್ರದೇಶದ್ದು ಎಂದು ಎನ್ನಲಾಗಿರುವ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅರೆ ಸೇನಾಪಡೆಗಳ ಹೇಳಿಕೆ ಮೇಲೆ ಸಂಶಯ ಉಂಟು ಮಾಡಿದೆ.

ಪ್ರಸ್ತುತ ವಿಡಿಯೋವನ್ನು ಇಂಡಿಯಾ ಟುಡೆ ಸಹಾಯಕ ಸಂಪಾದಕ ಇಂದ್ರಜಿತ್ ಕುಂದು ಅವರು ತಮ್ಮ ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಅವರು ತಮ್ಮ ಟ್ವೀಟ್‌ನಲ್ಲಿ, “ಕೂಚ್‌ಬೆಹಾರ್ ಜಿಲ್ಲೆಯ ಸೀತಾಲ್ಕುಚಿಯಲ್ಲಿ ಕೇಂದ್ರ ಪಡೆಗಳು ಗುಂಡು ಹಾರಿಸಿ ನಾಲ್ಕು ಸ್ಥಳೀಯರನ್ನು ಹತ್ಯೆ ಮಾಡಿದ ನಾಲ್ಕು ದಿನಗಳ ನಂತರ, ಅಂದು ಏನಾಯಿತು ಎಂಬುದನ್ನು ತೋರಿಸುವ ಹೊಸ ವೈರಲ್ ವಿಡಿಯೋ ಹೊರಬಿದ್ದಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

ಇಷ್ಟೇ ಅಲ್ಲದೆ ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒಬ್ರಿಯಾನ್, “11 ನಿಮಿಷಗಳ ವೀಡಿಯೊ ಈಗ  ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತಿದ್ದು, ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದ ಘಟನೆಯು ಸಂಪೂರ್ಣವಾಗಿ ಬಹಿರಂಗಪಟ್ಟಿದೆ. ಸೊಂಟದಿಂದ ಕೆಳಗೆ ಗುಂಡು ಹಾರಿಸುವ ಬದಲು ಕೇಂದ್ರ ಪಡೆಗಳು ಅವರನ್ನು ಕೊಲ್ಲಲು ಕಾರಣವೇನು? ಈ ಪ್ರಶ್ನೆ ಮತ್ತು ಇತರ ಹಲವು ಕಠಿಣ ಪ್ರಶ್ನೆಗಳಿಗೆ ಮೋದಿ, ಶಾ, ಚುನಾವಣಾ ಆಯೋಗ ಉತ್ತರಿಸಬೇಕಾಗಿದೆ. ಸತ್ಯ ಗೆಲ್ಲುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ವಿಡಿಯೋದಲ್ಲಿ ಆಕ್ರೋಶ ಭರಿತ ಜನರು, ಗುಂಡಿನ ದಾಳಿಗಳು, ರಕ್ತಸಿಕ್ತ ಸ್ಥಿತಿಯಲ್ಲಿ ಮಲಗಿರುವ ಯುವಕರನ್ನು ಕಾಣಬಹುದಾಗಿದೆ. ಗುಂಡು ಹಾರಿಸಿದ ನಂತರ ಗ್ರಾಮಸ್ಥರು ಕೇಂದ್ರ ಪಡೆಗಳನ್ನು ಬೆನ್ನಟ್ಟುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಆನಂದ್ ಬಝಾರ್‌ ಪತ್ರಿಕೆ ಈ ಹನ್ನೊಂದು ನಿಮಿಷಗಳ ವಿಡಿಯೋವನ್ನು ತನ್ನ ಯೂಟ್ಯೂಬ್‌ನಲ್ಲಿ ಅಪ್‌ಲೋಡ್  ಮಾಡಿದೆ.

ಇಷ್ಟೇ ಅಲ್ಲದೆ ನ್ಯೂಸ್‌ಲಾಂಡ್ರಿ ಈ ಕುರಿತು ತನಿಖಾ ವರದಿಯನ್ನು ಮಾಡಿದೆ. “ಕೇಂದ್ರ ಪಡೆಗಳ ಮೇಲೆ ಯಾವುದೇ ಗುಂಪುಗಳು ದಾಳಿ ಮಾಡಿಲ್ಲ. ಬದಲಾಗಿ ಮತದಾನ ಮಾಡಲೆಂದು ನಿ೦ತವರ ಮೇಲೆ ಕೇಂದ್ರ ಪಡೆಗಳೇ ಗು೦ಡು ಹಾರಿಸಿತು” ಎಂದು ಪ್ರತ್ಯಕ್ಷದರ್ಶಿಯೊಬ್ಬರ ಹೇಳಿಕೆಯನ್ನು ಉಲ್ಲಖಿಸಿ ಅದು ವರದಿ ಮಾಡಿದೆ.

ವಿಡಿಯೋದಲ್ಲಿ ಕಾಣಿಸಿಕೊಂಡಿರುವಂತೆ ಜನರು ದೊಣ್ಣೆಗಳನ್ನು ಹಿಡಿದು ಅಲ್ಲಿಗೆ ಧಾವಿಸುತ್ತಾರಾದರೂ ಗುಂಡು ಹಾರಿಸುವುದಕ್ಕಿಂತ ಮುಂಚೆ ಅಲ್ಲಿರುವ ಯಾವುದೇ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುವುದಿಲ್ಲ. ಗುಂಡಿನ ಸದ್ದು ಕೇಳಿಸಿದ ನಂತರ ಹಾಗೂ ಅಲ್ಲಿ ಮೂವರು ನೆಲಕ್ಕೆ ಬಿದ್ದ ನಂತರ ಆಕ್ರೋಶಿತ ಜನರು ಭದ್ರತಾ ಸಿಬ್ಬಂದಿಗಳನ್ನು ಬೆನ್ನಟ್ಟುವುದನ್ನು ಕಾಣಬಹುದಾಗಿದೆ.


ಇದನ್ನೂ ಓದಿ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...