Homeಮುಖಪುಟಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

ಕುಂಭಮೇಳದಲ್ಲಿ ಭಾಗವಹಿಸಿದ್ದ 1,701 ಜನರಿಗೆ ಕೊರೊನಾ ದೃಢ, ಆದರೂ ಮೇಳಕ್ಕೆ ಇಲ್ಲ ತೆರೆ!

- Advertisement -
- Advertisement -

ಉತ್ತರಾಖಂಡದ ಹರಿದ್ವಾರದ ಕುಂಭಮೇಳದಲ್ಲಿ ಏಪ್ರಿಲ್ 10 ರಿಂದ 14 ರವರೆಗೆ ಭಾಗವಹಿಸಿದ್ದ 1,701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಆರ್‌ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟ್ ವರದಿಗಳು ಐದು ದಿನಗಳ ಅವಧಿಯಲ್ಲಿ (ಏಪ್ರಿಲ್ 10 ರಿಂದ 14ರ ವರೆಗೆ) ಹರಿದ್ವಾರದಿಂದ ದೇವಪ್ರಯಾಗ್‌ವರೆಗೆ ನಡೆಯುತ್ತಿರುವ ಕುಂಭಮೇಳದಲ್ಲಿ ಮಾಡಲಾಗಿದೆ ಎಂದು ಹರಿದ್ವಾರ ಮುಖ್ಯ ವೈದ್ಯಕೀಯ ಅಧಿಕಾರಿ ಶಂಭು ಕುಮಾರ್ ಝಾ ಗುರುವಾರ ತಿಳಿಸಿದ್ದಾರೆ.

ಈಗ 1,701 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಹೆಚ್ಚಿನ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸುವಂತೆ ತಿಳಿಸಲಾಗಿದೆ. ಜೊತೆಗೆ ಕುಂಭಮೇಳ ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆ 2,000ಕ್ಕೆ ಏರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೊರೊನಾ ನಡುವೆಯೂ ಕುಂಭಮೇಳ ಮುಂದುವರಿಯುತ್ತದೆ- ಅಧಿಕಾರಿಗಳ ಹೇಳಿಕೆ

Naga Sadhus (Hindu holy men) take a holy dip in the waters of the Ganges River on the day of Shahi Snan (royal bath) during the ongoing religious Kumbh Mela festival, in Haridwar on April 12, 2021. (Photo by Money SHARMA / AFP) (Photo by MONEY SHARMA/AFP via Getty Images)
PC: MONEY SHARMA 

ಕುಂಭಮೇಳ ಪ್ರದೇಶವು 670 ಹೆಕ್ಟೇರ್ ಪ್ರದೇಶದಲ್ಲಿ ಹರಿದ್ವಾರ, ಟೆಹ್ರಿ ಮತ್ತು ಡೆಹ್ರಾಡೂನ್ ಜಿಲ್ಲೆಗಳು ಮತ್ತು ಋಷಿಕೇಶ್ ಪ್ರದೇಶಗಳನ್ನು ಆವರಿಸಿದೆ.

ಏಪ್ರಿಲ್ 12 ರಂದು ಮತ್ತು ಏಪ್ರಿಲ್ 14 ರಂದು ನಡೆದ ಎರಡು ಶಾಹಿ ಸ್ನಾನಗಳಲ್ಲಿ ಭಾಗವಹಿಸಿದ 48.51 ಲಕ್ಷ ಜನರಲ್ಲಿ ಬಹುಪಾಲು ಜನರು ಮಾಸ್ಕ್ ಧರಿಸುವುದು ಮತ್ತು ದೈಹಿಕ ಅಂತರ ಕಾಪಾಡುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸಿದ್ದಾರೆ.

ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದರೂ, ಈಗ ನಡೆಯುತ್ತಿರುವ ಕುಂಭಮೇಳವು ಏಪ್ರಿಲ್ 30 ರವರೆಗೆ ಮುಂದುವರಿಯುತ್ತದೆ. ಕೊರೊನಾ ಸೋಂಕುಗಳು ಹೆಚ್ಚುತ್ತಿರುವ ಕಾರಣ ಅದನ್ನು ಬೇಗನೆ ನಿಲ್ಲಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PC: PTI

ಇದನ್ನೂ ಓದಿ: ಕುಂಭಮೇಳದ ’ಶಾಹಿ ಸ್ನಾನ’ದಲ್ಲಿ ದೈಹಿಕ ಅಂತರ ಅಸಾಧ್ಯ ಎಂದ ಅಧಿಕಾರಿಗಳು

ಬುಧವಾರ ಸಂಜೆ ವೇಳೆಗೆ ಉತ್ತರಾಖಂಡ ಸರ್ಕಾರ ಮತ್ತು ಧಾರ್ಮಿಕ ಮುಖಂಡರ ನಡುವೆ ಈ ಕಾರ್ಯಕ್ರಮವನ್ನು ರದ್ದುಗೊಳಿಸುವ ಬಗ್ಗೆ ಚರ್ಚೆ ನಡೆದು, ಎರಡು ವಾರಗಳ ಮುಂಚೆಯೇ ಕುಂಭಮೇಳವನ್ನು ನಿಲ್ಲಿಸಲು ನಿರ್ಧರಿಸಲಾಗಿದೆ ವರದಿಗಳು ಬಂದಿದ್ದವು. ಆದರೆ ಇದನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ.

ಈ ವರ್ಷ ಕೊರೊನಾ ಸಾಂಕ್ರಾಮಿಕದ ಮಧ್ಯೆ ಧಾರ್ಮಿಕ ಕಾರ್ಯಕ್ರಮವನ್ನು ನಿಲ್ಲಿಸದಿರುವ ನಿರ್ಧಾರದ ಬಗ್ಗೆ ರಾಷ್ಟ್ರವ್ಯಾಪಿ ಟೀಕೆಗಳು ಬಂದಿವೆ. ಕುಂಭಮೇಳದಲ್ಲಿ ಸಾಮಾನ್ಯವಾಗಿ ಗರಿಷ್ಠ ಜನಸಂದಣಿಯನ್ನು ಸೇರುತ್ತಿದೆ ಇದು ಕೊರೊನಾ ಹಾಟ್‌ಸ್ಪಾಟ್ ಆಗಲಿದೆ ಮತ್ತು ಇಲ್ಲಿ ಭಾಗವಹಿಸಿದವರು ಸೂಪರ್-ಸ್ಪ್ರೆಡರ್  ಆಗಬಹುದು ಎಂದು ವಿಮರ್ಶಕರು ಅಂದಾಜಿಸಿದ್ದಾರೆ.


ಇದನ್ನೂ ಓದಿ: ಎರಡು ದಿನಗಳ ಹಿಂದೆ ಕುಂಭಮೇಳಕ್ಕೆ ಭೇಟಿ ನೀಡಿದ್ದ ಅಖಿಲೇಶ್ ಯಾದವ್‌ಗೆ ಕೊರೊನಾ ಸೋಂಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...