Homeಮುಖಪುಟಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

ಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

- Advertisement -
- Advertisement -

ಸೋಂಕಿನ ಹೊಸ ಮತ್ತು ಹೆಚ್ಚು ಆಕ್ರಮಣಕಾರಿ ಅಲೆಯನ್ನು ನಿಭಾಯಿಸಲು ಹೆಚ್ಚಿನ ವಿದೇಶಿ ಕೋವಿಡ್-19 ಲಸಿಕೆಗಳನ್ನು ಭಾರತಕ್ಕೆ ತರುವ ಪ್ರಯತ್ನದಲ್ಲಿ ಮೋದಿ ಸರ್ಕಾರ ತೊಡಗಿದೆ. ಹಲವಾರು ಲಸಿಕೆ ತಯಾರಿಕೆ ಕಂಪನಿಗಳಿಗೆ ಸರ್ಕಾರ ಆಹ್ವಾನ ನೀಡಿದೆ. ಆದರೆ ಇದು ಕಾರ್ಯರೂಪಕ್ಕೆ ಬರಲು ಸಮಯ ತೆಗೆದುಕೊಳ್ಳಬಹುದು ಎಂದು ದಿ ಪ್ರಿಂಟ್ ವರದಿ ಮಾಡಿದೆ.
ಫಿಜರ್ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಮಾಡುವಂತೆ ಕೇಳುವ ಸಾಧ್ಯತೆಯಿದೆ ಮತ್ತು ಮಾಡರ್ನಾ ತನ್ನ “ಕೈಗಳು ತುಂಬಿದೆ’ ಸಾಕಷ್ಟು ಆರ್ಡರ್‌ಗಳಿವೆ ಎಂದು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

ಅಮೆರಿಕ, ಬ್ರಿಟನ್, ಯುರೋಪ್, ಜಪಾನ್‌ಗಳಲ್ಲಿ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತತೆ ಪಡೆದ ಲಸಿಕೆಗಳಿಗೆ ತುರ್ತು ಪರವಾನಗಿ ನೀಡಲು ಸರ್ಕಾರ ಮಂಗಳವಾರ ಅನುಮತಿ ನೀಡಿತು.

ರಾಹುಲ್ ಗಾಂಧಿ ಈ ಕ್ರಮ ಕೈಗೊಳ್ಳಲು ಹಲವು ಸಲ ಸರ್ಕಾರವನ್ನು ಒತ್ತಾಯಿಸಿದ ನಂತರ ಮಂಗಳವಾರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.

ಅಮೆರಿಕದ ಫಾರ್ಮಾ ದೈತ್ಯ, ಭಾರತದಲ್ಲಿ ತನ್ನ ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕಾಗಿ (ಇಯುಎ) ಅರ್ಜಿ ಸಲ್ಲಿಸಿತ್ತು. ಆದರೆ ಈ ವರ್ಷದ ಆರಂಭದಲ್ಲಿ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದೆ. ಮೂಲಗಳ ಪ್ರಕಾರ, ನಷ್ಟ ಪರಿಹಾರ ಬಾಂಡ್‌ಗಳಿಗೆ ಸಹಿ ಹಾಕಲು ಭಾರತ ಸರ್ಕಾರ ನಿರಾಕರಿಸಿದ್ದು ಇದಕ್ಕೆ ಕಾರಣ ಎನ್ನಲಾಗಿದೆ. ಲಸಿಕೆ ಯಾವುದೇ ಅಡ್ಡಪರಿಣಾಮಗಳಿಗೆ ಕಾರಣವಾದರೆ ಕಂಪನಿಯ ಮೇಲೆ ಮೊಕದ್ದಮೆ ಹೂಡದಂತೆ ರಕ್ಷಿಸುವ ಕಾನೂನು ಬಾಂಡ್‌ಗಳು ಇವಾಗಿವೆ.

ಈ ಮಧ್ಯೆ, ಜಾನ್ಸನ್ & ಜಾನ್ಸನ್ ಭಾರತಕ್ಕೆ ಬರಲು ಉತ್ಸುಕವಾಗಿದೆ. ಅದು ಇತ್ತೀಚೆಗೆ ಕೇಂದ್ರೀಯ ಔಷಧಿ ಪ್ರಮಾಣಿಕೆ ನಿಯಂತ್ರಣ ಸಂಸ್ಥೆಗೆ (ಸಿಡಿಎಸ್‌ಸಿಒ) ಮಾಹಿತಿ ನೀಡಿ ಕ್ಲಿನಿಕಲ್ ಟ್ರಯಲ್ಸ್ ಯೋಜನೆ ಆರಂಭಿಸುವುದಾಗಿ ತಿಳಿಸಿದೆ. ಆದರೆ ಜಾನ್ಸನ್ & ಜಾನ್ಸನ್ ಸಿಂಗಲ್-ಡೋಸ್ ಲಸಿಕೆ ಪಡೆದ ಹಲವರು ಮಹಿಳೆಯರ ಮೇಲೆ ಅಡ್ಡಪರಿಣಾಮಗಳು ಉಂಟಾದ ನಂತರ ಅದರ ಬಳಕೆಯನ್ನು ತಕ್ಷಣ ತಾತ್ಕಾಲಿಕವಾಗಿ ನಿಲ್ಲಿಸಲು ಅಮೆರಿಕ ಸರ್ಕಾರ ಕರೆ ನೀಡಿದ್ದರಿಂದ ಕಂಪನಿ ತೊಂದರೆಗೆ ಸಿಲುಕಿದೆ.

ಫಿಜರ್ ತನ್ನ ಲಸಿಕೆಯನ್ನು ಭಾರತಕ್ಕೆ ಕಳುಹಿಸುವ ಒಪ್ಪಂದಕ್ಕೆ ಒಪ್ಪುವ ಮೊದಲು ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಬೇಕು ಎಂದು ಷರತ್ತು ವಿಧಿಸಿದೆ ಎನ್ನಲಾಗಿದೆ.
“ಫಿಜರ್ ತನ್ನ ಕೋವಿಡ್ -19 ಲಸಿಕೆಯನ್ನು ಪೂರೈಸುತ್ತಿರುವ ಪ್ರತಿ ದೇಶದೊಂದಿಗೆ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಿದೆ. ಬಾಂಡ್‌ಗೆ ಸಹಿ ಹಾಕಲು ಭಾರತ ಒಪ್ಪಿಕೊಂಡಾಗ ಮಾತ್ರ ಬೆಲೆಗಳ ಚರ್ಚೆ ಪ್ರಾರಂಭವಾಗುತ್ತದೆ ”ಎಂದು ಉದ್ಯಮದ ಮೂಲಗಳು ತಿಳಿಸಿವೆ.

ಜನವರಿಯಲ್ಲಿ, ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು, ಯಾವುದೇ ಗಂಭೀರ ಅಡ್ಡಪರಿಣಾಮಗಳು ಅಥವಾ ಪ್ರತಿಕೂಲ ಪ್ರತಿಕ್ರಿಯೆಗಳ ಸಂದರ್ಭದಲ್ಲಿ ಯಾವುದೇ ಹೊಣೆಗಾರಿಕೆಯಿಂದ ನಷ್ಟ ಪರಿಹಾರ ಅಥವಾ ವಿನಾಯಿತಿ ನೀಡುವ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹೇಳಿದೆ.

“ಜಾಗತಿಕವಾಗಿ, ಹೆಚ್ಚಿನ ದೇಶಗಳು ಲಸಿಕೆ ತಯಾರಕರ ಜೊತೆಗೆ ಬಾಂಡ್‌ಗಳಿಗೆ ಸಹಿ ಹಾಕಿವೆ.. ಭಾರತವು ಇದನ್ನು ಇಲ್ಲಿವರೆಗೆ ಮಾಡಿಲ್ಲ.. ನಾವು ಈಗಲಾದರೂ ಇದನ್ನು ಮಾಡಬೇಕು. ನಿರ್ದಿಷ್ಟ ತಯಾರಕರಿಗೆ ಬದಲು ಎಲ್ಲ ತಯಾರಕರೊಂದಿಗೂ ಬಾಂಡ್‌ಗಳಿಗೆ ಸಹಿ ಮಾಡಬೇಕು ಎಂದು ವೆಲ್ಲೂರು ಆಸ್ಪತ್ರೆಯ ಲಸಿಕಾ ತಜ್ಞ ಗಗನದೀಪ್ ಹೇಳಿದ್ದಾರೆ.

ಮಾಡರ್ನಾ ಭಾರತಕ್ಕೆ ಪ್ರವೇಶಿಸಲು ಉತ್ಸುಕವಾಗಿಲ್ಲ

ಲಸಿಕೆ ತಯಾರಕರು ಲಭ್ಯವಿರುವ ಸಾಮರ್ಥ್ಯಗಳನ್ನು ಆಧರಿಸಿ ತಮ್ಮ ಕಾರ್ಯತಂತ್ರಗಳನ್ನು ವಿನ್ಯಾಸಗೊಳಿಸುವ ಸಾಧ್ಯತೆಯಿದೆ ಮತ್ತು ಅವರು ಸಾಕಷ್ಟು ಗಾತ್ರವನ್ನು ಹೊಂದಿರುವ ಭಾರತೀಯ ಮಾರುಕಟ್ಟೆಗೆ ಎಷ್ಟು ಒದಗಿಸಬೇಕು ಎಂದು ಲೆಕ್ಕ ಹಾಕುತ್ತಾರೆ.
ಮಾಡರ್ನಾದ ವಕ್ತಾರ ರೇ ಜೋರ್ಡಾನ್ ಅವರು ದಿ ಪ್ರಿಂಟ್‌ಗೆ ಪ್ರತಿಕ್ರಿಯೆ ನೀಡಿ, “ಪೂರೈಕೆಯ ಬಗ್ಗೆ ಯಾವುದೇ ಸಂಭಾವ್ಯ ಚರ್ಚೆಗಳು ಅಥವಾ ಮಾತುಕತೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್) ಅಡಿಯಲ್ಲಿರುವ ಸೆಂಟರ್ ಫಾರ್ ಸೆಲ್ಯುಲರ್ ಮತ್ತು ಮಾಲಿಕ್ಯುಲರ್ ಬಯಾಲಜಿ (ಸಿಸಿಎಂಬಿ) ಲಸಿಕೆಯನ್ನು ಭಾರತಕ್ಕೆ ತರಲು ಕಳೆದ ಆರು ತಿಂಗಳಿನಿಂದ ಅಮೆರಿಕದ ಮಾಡರ್ನಾ ಕೊತೆ ಮಾತುಕತೆ ನಡೆಸುತ್ತ ಬಂದಿದೆ.

“ಹಲವಾರು ತಿಂಗಳುಗಳ ಕಾಲ ಅವರೊಂದಿಗೆ ಮಾತನಾಡುತ್ತಿದ್ದರೂ, ಕಂಪನಿಯು ತನ್ನ ಕೋವಿಡ್ -19 ಲಸಿಕೆಯನ್ನು ಭಾರತದಲ್ಲಿ ತರಲು ನಿಜವಾಗಿಯೂ ಉತ್ಸುಕವಾಗಿಲ್ಲ. ಬಹುಶಃ ಅವರ ಕೈಗಳು ಪೂರ್ಣವಾಗಿರುವುದರಿಂದ ಅಂದರೆ ಆರ್ಡರ್‌ಗಳು ಹೆಚ್ಚು ಇರುವುದರಿಂದ ಹೀಗಾಗಿರಬಹುದು. ಈಗ ವಿದೇಶಿ ಲಸಿಕೆಗಳಿಗೆ ತ್ವರಿತ ಪರವಾನಗಿ ನೀಡಲು ಸರ್ಕಾರ ಒಪ್ಪಿದ ನಂತರ, ಮರಳಿ ಸಿಎಸ್‌ಐಆರ್ ಮೂಲಕ ಮಾಡೆರ್ನಾವನ್ನು ಭಾರತಕ್ಕೆ ತರಲು ಯತ್ನಿಸಬಹುದು” ಎಂದು ಸಿಎಸ್‌ಐಆರ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಂಪನಿಯು ಈಗಾಗಲೇ ಸಹಿ ಮಾಡಿರುವ ಬದ್ಧ ಆರ್ಡರ್‌ಗಳ ಪೂರೈಕೆ ಒಪ್ಪಂದಗಳನ್ನು ಮಾಡರ್ನಾ ತನ್ನ ಇಮೇಲ್‌ನಲ್ಲಿ ಪಟ್ಟಿ ಮಾಡಿದೆ. ಅಮೆರಿಕ, ಯುರೋಪಿಯನ್ ಒಕ್ಕೂಟ, ಕೆನಡಾ, ಕೊರಿಯಾ, ಜಪಾನ್, ಸ್ವಿಟ್ಜರ್ಲೆಂಡ್, ಕೊಲಂಬಿಯಾ, ಇಸ್ರೇಲ್, ತೈವಾನ್, ಸಿಂಗಾಪುರ್ ಮತ್ತು ಕತಾರ್ ದೇಶಗಳಿಗೆ ಪೂರೈಕೆ ಆರ್ಡರ್‌ಗಳು ಒಟ್ಟು 1,000 ಮಿಲಿಯನ್ (100 ಕೋಟಿ) ಪ್ರಮಾಣವನ್ನು ಮೀರಿವೆ ಎನ್ನಲಾಗಿದೆ.

ಅಮೆರಿಕದಲ್ಲಿ ಮಾಡರ್ನಾ ಲಸಿಕೆ ಎರಡು ಡೋಸ್‌ಗಳಿಗೆ 30 ಡಾಲರ್ (2,250 ರೂ.) ದರ ಹೊಂದಿದೆ. “ಮಾಡರ್ನಾ ನಮ್ಮೊಂದಿಗೆ ಬಂದು ನಮ್ಮ ಫಾರ್ಮಾ ಕಂಪೆನಿಗಳಿಗೆ ಇಲ್ಲಿ ಲಸಿಕೆ ತಯಾರಿಸಲು ಅವಕಾಶ ನೀಡಿದರೆ ಭಾರತದಲ್ಲಿ ಎಂ-ಆರ್‌ಎನ್‌ಎ ಲಸಿಕೆಯ ಬೆಲೆ ಸಾಕಷ್ಟು ಕಡಿಮೆಯಾಗಲಿದೆ. ಈ ತಂತ್ರಜ್ಞಾನವು ತುಂಬಾ ಸರಳವಾಗಿದೆ ಮತ್ತು ಉತ್ಪಾದನೆಯನ್ನು ಪ್ರಾರಂಭಿಸಲು 8-9 ತಿಂಗಳು ಬೇಕಾಗಬಹುದು”ಎಂದು ಸಿಎಸ್‌ಐಆರ್ ತಿಳಿಸಿದೆ.

ಕೃಪೆ: ದಿ ಪ್ರಿಂಟ್


ಇದನ್ನೂ ಓದಿ: ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...