Homeಮುಖಪುಟಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

ಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

- Advertisement -
- Advertisement -

ಸೋಂಕಿನ ಹೊಸ ಮತ್ತು ಹೆಚ್ಚು ಆಕ್ರಮಣಕಾರಿ ಅಲೆಯನ್ನು ನಿಭಾಯಿಸಲು ಹೆಚ್ಚಿನ ವಿದೇಶಿ ಕೋವಿಡ್-19 ಲಸಿಕೆಗಳನ್ನು ಭಾರತಕ್ಕೆ ತರುವ ಪ್ರಯತ್ನದಲ್ಲಿ ಮೋದಿ ಸರ್ಕಾರ ತೊಡಗಿದೆ. ಹಲವಾರು ಲಸಿಕೆ ತಯಾರಿಕೆ ಕಂಪನಿಗಳಿಗೆ ಸರ್ಕಾರ ಆಹ್ವಾನ ನೀಡಿದೆ. ಆದರೆ ಇದು ಕಾರ್ಯರೂಪಕ್ಕೆ ಬರಲು ಸಮಯ ತೆಗೆದುಕೊಳ್ಳಬಹುದು ಎಂದು ದಿ ಪ್ರಿಂಟ್ ವರದಿ ಮಾಡಿದೆ.
ಫಿಜರ್ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಮಾಡುವಂತೆ ಕೇಳುವ ಸಾಧ್ಯತೆಯಿದೆ ಮತ್ತು ಮಾಡರ್ನಾ ತನ್ನ “ಕೈಗಳು ತುಂಬಿದೆ’ ಸಾಕಷ್ಟು ಆರ್ಡರ್‌ಗಳಿವೆ ಎಂದು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

ಅಮೆರಿಕ, ಬ್ರಿಟನ್, ಯುರೋಪ್, ಜಪಾನ್‌ಗಳಲ್ಲಿ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತತೆ ಪಡೆದ ಲಸಿಕೆಗಳಿಗೆ ತುರ್ತು ಪರವಾನಗಿ ನೀಡಲು ಸರ್ಕಾರ ಮಂಗಳವಾರ ಅನುಮತಿ ನೀಡಿತು.

ರಾಹುಲ್ ಗಾಂಧಿ ಈ ಕ್ರಮ ಕೈಗೊಳ್ಳಲು ಹಲವು ಸಲ ಸರ್ಕಾರವನ್ನು ಒತ್ತಾಯಿಸಿದ ನಂತರ ಮಂಗಳವಾರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.

ಅಮೆರಿಕದ ಫಾರ್ಮಾ ದೈತ್ಯ, ಭಾರತದಲ್ಲಿ ತನ್ನ ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕಾಗಿ (ಇಯುಎ) ಅರ್ಜಿ ಸಲ್ಲಿಸಿತ್ತು. ಆದರೆ ಈ ವರ್ಷದ ಆರಂಭದಲ್ಲಿ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದೆ. ಮೂಲಗಳ ಪ್ರಕಾರ, ನಷ್ಟ ಪರಿಹಾರ ಬಾಂಡ್‌ಗಳಿಗೆ ಸಹಿ ಹಾಕಲು ಭಾರತ ಸರ್ಕಾರ ನಿರಾಕರಿಸಿದ್ದು ಇದಕ್ಕೆ ಕಾರಣ ಎನ್ನಲಾಗಿದೆ. ಲಸಿಕೆ ಯಾವುದೇ ಅಡ್ಡಪರಿಣಾಮಗಳಿಗೆ ಕಾರಣವಾದರೆ ಕಂಪನಿಯ ಮೇಲೆ ಮೊಕದ್ದಮೆ ಹೂಡದಂತೆ ರಕ್ಷಿಸುವ ಕಾನೂನು ಬಾಂಡ್‌ಗಳು ಇವಾಗಿವೆ.

ಈ ಮಧ್ಯೆ, ಜಾನ್ಸನ್ & ಜಾನ್ಸನ್ ಭಾರತಕ್ಕೆ ಬರಲು ಉತ್ಸುಕವಾಗಿದೆ. ಅದು ಇತ್ತೀಚೆಗೆ ಕೇಂದ್ರೀಯ ಔಷಧಿ ಪ್ರಮಾಣಿಕೆ ನಿಯಂತ್ರಣ ಸಂಸ್ಥೆಗೆ (ಸಿಡಿಎಸ್‌ಸಿಒ) ಮಾಹಿತಿ ನೀಡಿ ಕ್ಲಿನಿಕಲ್ ಟ್ರಯಲ್ಸ್ ಯೋಜನೆ ಆರಂಭಿಸುವುದಾಗಿ ತಿಳಿಸಿದೆ. ಆದರೆ ಜಾನ್ಸನ್ & ಜಾನ್ಸನ್ ಸಿಂಗಲ್-ಡೋಸ್ ಲಸಿಕೆ ಪಡೆದ ಹಲವರು ಮಹಿಳೆಯರ ಮೇಲೆ ಅಡ್ಡಪರಿಣಾಮಗಳು ಉಂಟಾದ ನಂತರ ಅದರ ಬಳಕೆಯನ್ನು ತಕ್ಷಣ ತಾತ್ಕಾಲಿಕವಾಗಿ ನಿಲ್ಲಿಸಲು ಅಮೆರಿಕ ಸರ್ಕಾರ ಕರೆ ನೀಡಿದ್ದರಿಂದ ಕಂಪನಿ ತೊಂದರೆಗೆ ಸಿಲುಕಿದೆ.

ಫಿಜರ್ ತನ್ನ ಲಸಿಕೆಯನ್ನು ಭಾರತಕ್ಕೆ ಕಳುಹಿಸುವ ಒಪ್ಪಂದಕ್ಕೆ ಒಪ್ಪುವ ಮೊದಲು ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಬೇಕು ಎಂದು ಷರತ್ತು ವಿಧಿಸಿದೆ ಎನ್ನಲಾಗಿದೆ.
“ಫಿಜರ್ ತನ್ನ ಕೋವಿಡ್ -19 ಲಸಿಕೆಯನ್ನು ಪೂರೈಸುತ್ತಿರುವ ಪ್ರತಿ ದೇಶದೊಂದಿಗೆ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಿದೆ. ಬಾಂಡ್‌ಗೆ ಸಹಿ ಹಾಕಲು ಭಾರತ ಒಪ್ಪಿಕೊಂಡಾಗ ಮಾತ್ರ ಬೆಲೆಗಳ ಚರ್ಚೆ ಪ್ರಾರಂಭವಾಗುತ್ತದೆ ”ಎಂದು ಉದ್ಯಮದ ಮೂಲಗಳು ತಿಳಿಸಿವೆ.

ಜನವರಿಯಲ್ಲಿ, ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು, ಯಾವುದೇ ಗಂಭೀರ ಅಡ್ಡಪರಿಣಾಮಗಳು ಅಥವಾ ಪ್ರತಿಕೂಲ ಪ್ರತಿಕ್ರಿಯೆಗಳ ಸಂದರ್ಭದಲ್ಲಿ ಯಾವುದೇ ಹೊಣೆಗಾರಿಕೆಯಿಂದ ನಷ್ಟ ಪರಿಹಾರ ಅಥವಾ ವಿನಾಯಿತಿ ನೀಡುವ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹೇಳಿದೆ.

“ಜಾಗತಿಕವಾಗಿ, ಹೆಚ್ಚಿನ ದೇಶಗಳು ಲಸಿಕೆ ತಯಾರಕರ ಜೊತೆಗೆ ಬಾಂಡ್‌ಗಳಿಗೆ ಸಹಿ ಹಾಕಿವೆ.. ಭಾರತವು ಇದನ್ನು ಇಲ್ಲಿವರೆಗೆ ಮಾಡಿಲ್ಲ.. ನಾವು ಈಗಲಾದರೂ ಇದನ್ನು ಮಾಡಬೇಕು. ನಿರ್ದಿಷ್ಟ ತಯಾರಕರಿಗೆ ಬದಲು ಎಲ್ಲ ತಯಾರಕರೊಂದಿಗೂ ಬಾಂಡ್‌ಗಳಿಗೆ ಸಹಿ ಮಾಡಬೇಕು ಎಂದು ವೆಲ್ಲೂರು ಆಸ್ಪತ್ರೆಯ ಲಸಿಕಾ ತಜ್ಞ ಗಗನದೀಪ್ ಹೇಳಿದ್ದಾರೆ.

ಮಾಡರ್ನಾ ಭಾರತಕ್ಕೆ ಪ್ರವೇಶಿಸಲು ಉತ್ಸುಕವಾಗಿಲ್ಲ

ಲಸಿಕೆ ತಯಾರಕರು ಲಭ್ಯವಿರುವ ಸಾಮರ್ಥ್ಯಗಳನ್ನು ಆಧರಿಸಿ ತಮ್ಮ ಕಾರ್ಯತಂತ್ರಗಳನ್ನು ವಿನ್ಯಾಸಗೊಳಿಸುವ ಸಾಧ್ಯತೆಯಿದೆ ಮತ್ತು ಅವರು ಸಾಕಷ್ಟು ಗಾತ್ರವನ್ನು ಹೊಂದಿರುವ ಭಾರತೀಯ ಮಾರುಕಟ್ಟೆಗೆ ಎಷ್ಟು ಒದಗಿಸಬೇಕು ಎಂದು ಲೆಕ್ಕ ಹಾಕುತ್ತಾರೆ.
ಮಾಡರ್ನಾದ ವಕ್ತಾರ ರೇ ಜೋರ್ಡಾನ್ ಅವರು ದಿ ಪ್ರಿಂಟ್‌ಗೆ ಪ್ರತಿಕ್ರಿಯೆ ನೀಡಿ, “ಪೂರೈಕೆಯ ಬಗ್ಗೆ ಯಾವುದೇ ಸಂಭಾವ್ಯ ಚರ್ಚೆಗಳು ಅಥವಾ ಮಾತುಕತೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್) ಅಡಿಯಲ್ಲಿರುವ ಸೆಂಟರ್ ಫಾರ್ ಸೆಲ್ಯುಲರ್ ಮತ್ತು ಮಾಲಿಕ್ಯುಲರ್ ಬಯಾಲಜಿ (ಸಿಸಿಎಂಬಿ) ಲಸಿಕೆಯನ್ನು ಭಾರತಕ್ಕೆ ತರಲು ಕಳೆದ ಆರು ತಿಂಗಳಿನಿಂದ ಅಮೆರಿಕದ ಮಾಡರ್ನಾ ಕೊತೆ ಮಾತುಕತೆ ನಡೆಸುತ್ತ ಬಂದಿದೆ.

“ಹಲವಾರು ತಿಂಗಳುಗಳ ಕಾಲ ಅವರೊಂದಿಗೆ ಮಾತನಾಡುತ್ತಿದ್ದರೂ, ಕಂಪನಿಯು ತನ್ನ ಕೋವಿಡ್ -19 ಲಸಿಕೆಯನ್ನು ಭಾರತದಲ್ಲಿ ತರಲು ನಿಜವಾಗಿಯೂ ಉತ್ಸುಕವಾಗಿಲ್ಲ. ಬಹುಶಃ ಅವರ ಕೈಗಳು ಪೂರ್ಣವಾಗಿರುವುದರಿಂದ ಅಂದರೆ ಆರ್ಡರ್‌ಗಳು ಹೆಚ್ಚು ಇರುವುದರಿಂದ ಹೀಗಾಗಿರಬಹುದು. ಈಗ ವಿದೇಶಿ ಲಸಿಕೆಗಳಿಗೆ ತ್ವರಿತ ಪರವಾನಗಿ ನೀಡಲು ಸರ್ಕಾರ ಒಪ್ಪಿದ ನಂತರ, ಮರಳಿ ಸಿಎಸ್‌ಐಆರ್ ಮೂಲಕ ಮಾಡೆರ್ನಾವನ್ನು ಭಾರತಕ್ಕೆ ತರಲು ಯತ್ನಿಸಬಹುದು” ಎಂದು ಸಿಎಸ್‌ಐಆರ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಂಪನಿಯು ಈಗಾಗಲೇ ಸಹಿ ಮಾಡಿರುವ ಬದ್ಧ ಆರ್ಡರ್‌ಗಳ ಪೂರೈಕೆ ಒಪ್ಪಂದಗಳನ್ನು ಮಾಡರ್ನಾ ತನ್ನ ಇಮೇಲ್‌ನಲ್ಲಿ ಪಟ್ಟಿ ಮಾಡಿದೆ. ಅಮೆರಿಕ, ಯುರೋಪಿಯನ್ ಒಕ್ಕೂಟ, ಕೆನಡಾ, ಕೊರಿಯಾ, ಜಪಾನ್, ಸ್ವಿಟ್ಜರ್ಲೆಂಡ್, ಕೊಲಂಬಿಯಾ, ಇಸ್ರೇಲ್, ತೈವಾನ್, ಸಿಂಗಾಪುರ್ ಮತ್ತು ಕತಾರ್ ದೇಶಗಳಿಗೆ ಪೂರೈಕೆ ಆರ್ಡರ್‌ಗಳು ಒಟ್ಟು 1,000 ಮಿಲಿಯನ್ (100 ಕೋಟಿ) ಪ್ರಮಾಣವನ್ನು ಮೀರಿವೆ ಎನ್ನಲಾಗಿದೆ.

ಅಮೆರಿಕದಲ್ಲಿ ಮಾಡರ್ನಾ ಲಸಿಕೆ ಎರಡು ಡೋಸ್‌ಗಳಿಗೆ 30 ಡಾಲರ್ (2,250 ರೂ.) ದರ ಹೊಂದಿದೆ. “ಮಾಡರ್ನಾ ನಮ್ಮೊಂದಿಗೆ ಬಂದು ನಮ್ಮ ಫಾರ್ಮಾ ಕಂಪೆನಿಗಳಿಗೆ ಇಲ್ಲಿ ಲಸಿಕೆ ತಯಾರಿಸಲು ಅವಕಾಶ ನೀಡಿದರೆ ಭಾರತದಲ್ಲಿ ಎಂ-ಆರ್‌ಎನ್‌ಎ ಲಸಿಕೆಯ ಬೆಲೆ ಸಾಕಷ್ಟು ಕಡಿಮೆಯಾಗಲಿದೆ. ಈ ತಂತ್ರಜ್ಞಾನವು ತುಂಬಾ ಸರಳವಾಗಿದೆ ಮತ್ತು ಉತ್ಪಾದನೆಯನ್ನು ಪ್ರಾರಂಭಿಸಲು 8-9 ತಿಂಗಳು ಬೇಕಾಗಬಹುದು”ಎಂದು ಸಿಎಸ್‌ಐಆರ್ ತಿಳಿಸಿದೆ.

ಕೃಪೆ: ದಿ ಪ್ರಿಂಟ್


ಇದನ್ನೂ ಓದಿ: ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...