Homeಕರ್ನಾಟಕಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

ಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

- Advertisement -
- Advertisement -

ವಿಕೇಂದ್ರಿಕೃತವಾಗಿ ಜನ ಸಹಭಾಗಿತ್ವದಲ್ಲಿ ಸಮಗ್ರ ಜಲಸಂರಕ್ಷಣೆ ಮತ್ತು ಜನ ನಿರ್ವಹಣೆ ಮಾಡುವ ಮೂಲಕ ಭಾರತವನ್ನು ಬರಮುಕ್ತಗೊಳಿಸುವ ಮಹತ್ವದ ಆಶಯದೊಂದಿಗೆ ಮೇ 17, 18, 19 ರಂದು ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಹೊರವಲಯದಲ್ಲಿರುವ ‘ಸಮತಾ ವಿದ್ಯಾಲಯದಲ್ಲಿ’ ಸಮಾವೇಶ ನಡೆಯಲಿದ್ದು ತರುಣ್ ಭಾರತ್ ಸಂಘ್‍ನ ಮುಖಂಡರೂ, ಪ್ರಖ್ಯಾತ ಜಲತಜ್ಞರು ಆದ ಡಾ.ರಾಜೇಂದ್ರ ಸಿಂಗ್‍ರವರು ತರಬೇತಿ ನಡೆಸಿಕೊಡಲಿದ್ದಾರೆ.

ಈ ಸಮಾವೇಶದಲ್ಲಿ ತರಬೇತಿಗೊಂಡ ಕಾರ್ಯಕರ್ತರು ಸ್ಥಳೀಯವಾಗಿ ತಮ್ಮ ಶಕ್ತಿ ಸಾಮಥ್ರ್ಯ, ಸಂಪನ್ಮೂಲ ಮತ್ತು ಜನಸಹಕಾರದೊಂದಿಗೆ ಜನಸಂರಕ್ಷಣೆ ಮತ್ತು ಜನ ನಿರ್ವಹಣೆಯ ವಿನೂತನ, ವಿಶಿಷ್ಟ ಮಾದರಿಗಳನ್ನು ರೂಪಿಸುವ ಪ್ರಯತ್ನದಲ್ಲಿ ತೊಡಗುವಂತಾಗಬೇಕೆಂಬುದು ಈ ಸಮಾವೇಶದ ಉದ್ದೇಶವಾಗಿದೆ.
ಈ ಹಿಂದೆ ಡಾ.ರಾಜೇಂದ್ರ ಸಿಂಗ್‍ರವರ ತರುಣ್ ಭಾರತ್ ಸಂಘ ಮತ್ತು ರಾಷ್ಟ್ರೀಯ ಜಲ್ ಬಿರಾದಾರಿ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳು, ಜಲತಜ್ಞರು, ಸಮುದಾಯ ಸಂಘಟನೆಗಳ ಮುಖಂಡರುಗಳು, ಜಲಕಾರ್ಯಕರ್ತರು ಸೇರಿಕೊಂಡು 2017ರಲ್ಲಿ ರಾಷ್ಟ್ರವ್ಯಾಪಿ 2 ಜಲಸಾಕ್ಷರತಾ ಯಾತ್ರೆಗಳನ್ನು ಕೈಗೊಂಡು ದೇಶಾದ್ಯಂತ ಜಲಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿತ್ತು.
ಅದೇ ರೀತಿ 2017ರ ಆಗಸ್ಟ್ ನಲ್ಲಿ ಕರ್ನಾಟಕದ ವಿಜಯಪುರದಲ್ಲಿ ಮೂರು ದಿನಗಳ ಕಾಲ ‘ಬರಮುಕ್ತ ಭಾರತ ನಿರ್ಮಾಣಕ್ಕಾಗಿ ರಾಷ್ಟ್ರೀಯ ಜಲಸಮಾವೇಶ’ವೊಂದನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಲ್ಲಿ ವಿಜಯಪುರ ಘೋಷಣೆಯನ್ನು ಸಹ ಹೊರತರಲಾಗಿತ್ತು. ಇಂದು ಬರ ನಿರ್ವಹಣೆ ಮತ್ತು ಜಲಸಾಕ್ಷರತೆಯ ಕುರಿತು ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಅವುಗಳನ್ನು ಹೆಚ್ಚು ಸಂಘಟಿತವಾಗಿ, ವ್ಯಾಪಕವಾಗಿ ಮತ್ತು ಪರಿಣಾಮಕಾರಿಯಾಗಿ ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಈ ವರ್ಷ ತರಬೇತಿ ಸಮಾವೇಶ ನಡೆಯಲಿದೆ.
ಹಿರಿಯ ನ್ಯಾಯವಾದಿಗಳಾದ ಪ್ರೊ. ರವಿವರ್ಮಕುಮಾರ್ ಹಾಗೂ ವಿಜ್ಞಾನ ಚಳವಳಿ ಮತ್ತು ಪರಿಸರ ಹೋರಾಟಗಾರರಾದ ಸಿ.ಯತಿರಾಜುರವರು ಈ ತರಬೇತಿ ಸಮಾವೇಶದ ಸಂಘಟನೆಯ ನೇತೃತ್ವವನ್ನು ವಹಿಸಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ವರ್ಷಗಳಿಂದ ಜಲಜಾಗೃತಿ, ಜಲಸಂರಕ್ಷಣೆ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸುತ್ತಿರುವ ಹಾಗೂ ಮುಂದಿನ ದಿನಗಳಲ್ಲಿ ಈ ದಿಸೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸಂಘಟನೆಗಳನ್ನು, ಕಾರ್ಯಕರ್ತರನ್ನು, ಆಡಳಿತಗಾರರನ್ನು, ಜಲತಜ್ಞರನ್ನು ಮುಂತಾದವರನ್ನು ಈ ಜಲ ಜನಾಂದೋಲನ ರೂಪಿಸಲು ಆಹ್ವಾನಿಸಿದ್ದಾರೆ.
ವೈಯಕ್ತಿಕವಾಗಿಯಾಗಲಿ, ಅಥವಾ ಸಂಘಟನೆ ಗುಂಪುಗಳ ಪರವಾಗಿಯಾಗಲಿ ಭಾಗವಹಿಸುವ ಆಸಕ್ತಿವುಳ್ಳವರು ಮೇ 10ರೊಳಗೆ ದೂರವಾಣಿ ಕರೆ, ಮೇಲ್ ಮೂಲಕ ಖಚಿತಪಡಿಸಲು ಕೋರಿದೆ. 9481677607 / 9741889987 ಹಾಗೂ [email protected] ಮೂಲಕ ಸಂಪರ್ಕಿಸಬಹುದಾಗಿದೆ.
ನೀರಿಗಾಗಿ ಹಾಹಕಾರ ಮತ್ತು ಹವಾಮಾನ ವೈಪರಿತ್ಯಗಳು ಪ್ರತಿದಿನದ ವಿದ್ಯಮಾನಗಳಾಗಿರುವ ಈ ಕಾಲದಲ್ಲಿ ಇಂತಹ ಮಹತ್ವದ ಹೋರಾಟವನ್ನು naanugauri.com ಪತ್ರಿಕೆಯು ಬೆಂಬಲಿಸಿ ಅದರ ಭಾಗವಾಗುತ್ತಿದೆ. ಜಲಸಂರಕ್ಷಣೆಯ ವಿಚಾರದ ಕುರಿತ ಮಹತ್ವದ ಲೇಖನಗಳು, ಜಾಗೃತಿ ಬರಹಗಳು, ಯಶಸ್ವಿ ಪ್ರಯೋಗಗಳು ಇತ್ಯಾದಿಗಳ ಕುರಿತ ಬರಹ, ಪೋಸ್ಟರ್ ಅಥವಾ ವಿಡಿಯೋಗಳನ್ನು ನೀವು ನಮಗೆ ಕಳಿಸಬಹುದು. ಅವುಗಳನ್ನು ಪ್ರಕಟಿಸಿ ಹೆಚ್ಚು ಜನರಿಗೆ ತಲುಪಲು ನಾವು ನೆರವಾಗುತ್ತೇವೆ. 7353770202 ವಾಟ್ಸಾಪ್ ನಂಬರ್ ಅಥವಾ [email protected] ಗೆ ಕಳಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...