Homeಕರ್ನಾಟಕಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

ಬರಮುಕ್ತ ಕರ್ನಾಟಕಕ್ಕಾಗಿ ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶ

- Advertisement -
- Advertisement -

ವಿಕೇಂದ್ರಿಕೃತವಾಗಿ ಜನ ಸಹಭಾಗಿತ್ವದಲ್ಲಿ ಸಮಗ್ರ ಜಲಸಂರಕ್ಷಣೆ ಮತ್ತು ಜನ ನಿರ್ವಹಣೆ ಮಾಡುವ ಮೂಲಕ ಭಾರತವನ್ನು ಬರಮುಕ್ತಗೊಳಿಸುವ ಮಹತ್ವದ ಆಶಯದೊಂದಿಗೆ ಮೇ 17, 18, 19 ರಂದು ರಾಜ್ಯಮಟ್ಟದ ಜಲಕಾರ್ಯಕರ್ತರ ತರಬೇತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಹೊರವಲಯದಲ್ಲಿರುವ ‘ಸಮತಾ ವಿದ್ಯಾಲಯದಲ್ಲಿ’ ಸಮಾವೇಶ ನಡೆಯಲಿದ್ದು ತರುಣ್ ಭಾರತ್ ಸಂಘ್‍ನ ಮುಖಂಡರೂ, ಪ್ರಖ್ಯಾತ ಜಲತಜ್ಞರು ಆದ ಡಾ.ರಾಜೇಂದ್ರ ಸಿಂಗ್‍ರವರು ತರಬೇತಿ ನಡೆಸಿಕೊಡಲಿದ್ದಾರೆ.

ಈ ಸಮಾವೇಶದಲ್ಲಿ ತರಬೇತಿಗೊಂಡ ಕಾರ್ಯಕರ್ತರು ಸ್ಥಳೀಯವಾಗಿ ತಮ್ಮ ಶಕ್ತಿ ಸಾಮಥ್ರ್ಯ, ಸಂಪನ್ಮೂಲ ಮತ್ತು ಜನಸಹಕಾರದೊಂದಿಗೆ ಜನಸಂರಕ್ಷಣೆ ಮತ್ತು ಜನ ನಿರ್ವಹಣೆಯ ವಿನೂತನ, ವಿಶಿಷ್ಟ ಮಾದರಿಗಳನ್ನು ರೂಪಿಸುವ ಪ್ರಯತ್ನದಲ್ಲಿ ತೊಡಗುವಂತಾಗಬೇಕೆಂಬುದು ಈ ಸಮಾವೇಶದ ಉದ್ದೇಶವಾಗಿದೆ.
ಈ ಹಿಂದೆ ಡಾ.ರಾಜೇಂದ್ರ ಸಿಂಗ್‍ರವರ ತರುಣ್ ಭಾರತ್ ಸಂಘ ಮತ್ತು ರಾಷ್ಟ್ರೀಯ ಜಲ್ ಬಿರಾದಾರಿ ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳು, ಜಲತಜ್ಞರು, ಸಮುದಾಯ ಸಂಘಟನೆಗಳ ಮುಖಂಡರುಗಳು, ಜಲಕಾರ್ಯಕರ್ತರು ಸೇರಿಕೊಂಡು 2017ರಲ್ಲಿ ರಾಷ್ಟ್ರವ್ಯಾಪಿ 2 ಜಲಸಾಕ್ಷರತಾ ಯಾತ್ರೆಗಳನ್ನು ಕೈಗೊಂಡು ದೇಶಾದ್ಯಂತ ಜಲಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿತ್ತು.
ಅದೇ ರೀತಿ 2017ರ ಆಗಸ್ಟ್ ನಲ್ಲಿ ಕರ್ನಾಟಕದ ವಿಜಯಪುರದಲ್ಲಿ ಮೂರು ದಿನಗಳ ಕಾಲ ‘ಬರಮುಕ್ತ ಭಾರತ ನಿರ್ಮಾಣಕ್ಕಾಗಿ ರಾಷ್ಟ್ರೀಯ ಜಲಸಮಾವೇಶ’ವೊಂದನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಅಲ್ಲಿ ವಿಜಯಪುರ ಘೋಷಣೆಯನ್ನು ಸಹ ಹೊರತರಲಾಗಿತ್ತು. ಇಂದು ಬರ ನಿರ್ವಹಣೆ ಮತ್ತು ಜಲಸಾಕ್ಷರತೆಯ ಕುರಿತು ಹಲವಾರು ಪ್ರಯತ್ನಗಳು ನಡೆಯುತ್ತಿದ್ದು ಅವುಗಳನ್ನು ಹೆಚ್ಚು ಸಂಘಟಿತವಾಗಿ, ವ್ಯಾಪಕವಾಗಿ ಮತ್ತು ಪರಿಣಾಮಕಾರಿಯಾಗಿ ಒಂದೆಡೆ ತರುವ ಪ್ರಯತ್ನದ ಭಾಗವಾಗಿ ಈ ವರ್ಷ ತರಬೇತಿ ಸಮಾವೇಶ ನಡೆಯಲಿದೆ.
ಹಿರಿಯ ನ್ಯಾಯವಾದಿಗಳಾದ ಪ್ರೊ. ರವಿವರ್ಮಕುಮಾರ್ ಹಾಗೂ ವಿಜ್ಞಾನ ಚಳವಳಿ ಮತ್ತು ಪರಿಸರ ಹೋರಾಟಗಾರರಾದ ಸಿ.ಯತಿರಾಜುರವರು ಈ ತರಬೇತಿ ಸಮಾವೇಶದ ಸಂಘಟನೆಯ ನೇತೃತ್ವವನ್ನು ವಹಿಸಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಹಲವಾರು ವರ್ಷಗಳಿಂದ ಜಲಜಾಗೃತಿ, ಜಲಸಂರಕ್ಷಣೆ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸುತ್ತಿರುವ ಹಾಗೂ ಮುಂದಿನ ದಿನಗಳಲ್ಲಿ ಈ ದಿಸೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸಂಘಟನೆಗಳನ್ನು, ಕಾರ್ಯಕರ್ತರನ್ನು, ಆಡಳಿತಗಾರರನ್ನು, ಜಲತಜ್ಞರನ್ನು ಮುಂತಾದವರನ್ನು ಈ ಜಲ ಜನಾಂದೋಲನ ರೂಪಿಸಲು ಆಹ್ವಾನಿಸಿದ್ದಾರೆ.
ವೈಯಕ್ತಿಕವಾಗಿಯಾಗಲಿ, ಅಥವಾ ಸಂಘಟನೆ ಗುಂಪುಗಳ ಪರವಾಗಿಯಾಗಲಿ ಭಾಗವಹಿಸುವ ಆಸಕ್ತಿವುಳ್ಳವರು ಮೇ 10ರೊಳಗೆ ದೂರವಾಣಿ ಕರೆ, ಮೇಲ್ ಮೂಲಕ ಖಚಿತಪಡಿಸಲು ಕೋರಿದೆ. 9481677607 / 9741889987 ಹಾಗೂ [email protected] ಮೂಲಕ ಸಂಪರ್ಕಿಸಬಹುದಾಗಿದೆ.
ನೀರಿಗಾಗಿ ಹಾಹಕಾರ ಮತ್ತು ಹವಾಮಾನ ವೈಪರಿತ್ಯಗಳು ಪ್ರತಿದಿನದ ವಿದ್ಯಮಾನಗಳಾಗಿರುವ ಈ ಕಾಲದಲ್ಲಿ ಇಂತಹ ಮಹತ್ವದ ಹೋರಾಟವನ್ನು naanugauri.com ಪತ್ರಿಕೆಯು ಬೆಂಬಲಿಸಿ ಅದರ ಭಾಗವಾಗುತ್ತಿದೆ. ಜಲಸಂರಕ್ಷಣೆಯ ವಿಚಾರದ ಕುರಿತ ಮಹತ್ವದ ಲೇಖನಗಳು, ಜಾಗೃತಿ ಬರಹಗಳು, ಯಶಸ್ವಿ ಪ್ರಯೋಗಗಳು ಇತ್ಯಾದಿಗಳ ಕುರಿತ ಬರಹ, ಪೋಸ್ಟರ್ ಅಥವಾ ವಿಡಿಯೋಗಳನ್ನು ನೀವು ನಮಗೆ ಕಳಿಸಬಹುದು. ಅವುಗಳನ್ನು ಪ್ರಕಟಿಸಿ ಹೆಚ್ಚು ಜನರಿಗೆ ತಲುಪಲು ನಾವು ನೆರವಾಗುತ್ತೇವೆ. 7353770202 ವಾಟ್ಸಾಪ್ ನಂಬರ್ ಅಥವಾ [email protected] ಗೆ ಕಳಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...