Homeಮುಖಪುಟಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

- Advertisement -
- Advertisement -

“ಹಲವಾರು ಕಡೆಗಳಲ್ಲಿ ಸೀತಾಲ್ಕುಚ್ಚಿಯ ಘಟನೆ ಮರುಕಳಿಸುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ಗೆ ಚುನಾವಣಾ ಆಯೋಗವು ಗುರುವಾರ ಸಂಜೆ 24 ಗಂಟೆಗಳ ಪ್ರಚಾರ ನಿಷೇಧ ಹೇರಿದೆ. ಆಯೋಗವು ದಿಲೀಪ್‌ ಘೋಷ್‌ಗೆ ಕಟುವಾಗಿ ಎಚ್ಚರಿಕೆ ನೀಡಿದ್ದು ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾರ್ವಜನಿಕವಾಗಿ ಅಂತಹ ಮಾತುಗಳನ್ನು ಬಳಸದಂತೆ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಕಳೆದ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ ಸಂದರ್ಭ ಸಿತಾಲ್ಕುಚ್ಚಿಯಲ್ಲಿ ಕೇಂದ್ರ ಭದ್ರತಾ ಪಡೆಗಳು ನಡೆಸಿದ ಗೋಲಿಬಾರ್‌ ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಗುಂಪೊಂದು ತಮ್ಮ ಮೇಲೆ ದಾಳಿ ಮಾಡಿದ್ದರಿಂದ ಗುಂಡು ಹಾರಿಸಿದ್ದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಸ್ಥಳೀಯರ ಪ್ರಕಾರ ಅಲ್ಲಿ ಯಾವುದೆ ಹಿಂಸಾಚಾರ ನಡೆದಿಲ್ಲ, ಭದ್ರತಾ ಪಡೆಗಳು ಏಕಾಏಕಿ ಗುಂಡು ಹಾರಿಸಿವೆ ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯ ವಿಡಿಯೋಗಳು ವೈರಲಾಗಿದ್ದು, ಭದ್ರತಾ ಪಡೆಗಳು ನೀಡಿರುವ ಹೇಳಿಕೆಗಳು ಸುಳ್ಳು ಎಂದು ತೋರಿಸುತ್ತಿದೆ.

ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ದಿಲೀಪ್ ಘೋಷ್ ಮೇಲಿನ ನಿಷೇಧವು ಏಪ್ರಿಲ್ 15 ರ ಸಂಜೆ 7 ರಿಂದ ಏಪ್ರಿಲ್ 16 ರವರೆಗೆ ಜಾರಿಯಲ್ಲಿರುತ್ತದೆ, ಈ ಸಮಯದಲ್ಲಿ ಅವರಿಗೆ ಚುನಾವಣಾ ಪ್ರಚಾರಕ್ಕೆ ಅನುಮತಿ ಇರುವುದಿಲ್ಲ.

“ದಿಲೀಪ್ ಘೋಷ್ ಪ್ರಚೋದನಕಾರಿ ಮತ್ತು ಉದ್ವೇಗಕಾರಿ ಹೇಳಿಕೆಗಳನ್ನು ನೀಡಿದ್ದು ಅದು ಕಾನೂನು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಜೊತೆಗೆ ಚುನಾವಣಾ ಪ್ರಕ್ರಿಯೆಯ ಮೇಲೆ ಕೂಡಾ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ” ಎಂದು ಆಯೊಗದ ಆದೇಶದಲ್ಲಿ ತಿಳಿಸಲಾಗಿದೆ.

ದಿಲೀಪ್ ಘೋಷ್‌ ಹೇಳಿಕೆಯ ವಿರುದ್ದ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

“ಯಾರಾದರೂ ತಮ್ಮ ಮಿತಿಗಳನ್ನು ಮೀರಿದರೆ ಸೀತಾಲ್ಕುಚ್ಚಿಯಲ್ಲಿ ಏನಾಯಿತು ಎಂದು ನೀವು ನೋಡಿದ್ದೀರಿ. ಅದರಂತೆ ಹಲವಾರು ಸ್ಥಳಗಳಲ್ಲಿ ಸೀತಾಲ್ಕುಚ್ಚಿ ನಡೆದಂತೆ ನಡೆಯುತ್ತದೆ” ಎಂದು ದಿಲೀಪ್ ಘೋಷ್ ಹೇಳಿದ್ದರು.

ಇದನ್ನೂ ಓದಿ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಆಯೋಗದ ನೋಟಿಸ್‌ಗೆ ನೀಡಿದ ಉತ್ತರದಲ್ಲಿ, ದಿಲೀಪ್‌ ಘೋಷ್, “ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಹಿಂಸಾಚಾರವು ವಿಶಿಷ್ಟವಾಗಿದೆ. ತೃಣಮೂಲ ಕಾಂಗ್ರೆಸ್ ನಾಯಕರು ಮುಕ್ತ, ನ್ಯಾಯಯುತ ಮತ್ತು ಶಾಂತಿಯುತ ಮತದಾನದ ಪ್ರಕ್ರಿಯೆಯನ್ನು ಅಪಾಯಕ್ಕೆ ತಳ್ಳುವ ಮೂಲಕ ಭಯ ಮತ್ತು ಬೆದರಿಕೆಯ ವಾತಾವರಣವನ್ನು ಸೃಷ್ಟಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪಕ್ಷದ ರಾಜ್ಯಾಧ್ಯಕ್ಷರಾಗಿ, ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ನಿಂತು ಮತದಾರರನ್ನು ಭಯವಿಲ್ಲದೆ ಮತ ಚಲಾಯಿಸುವಂತೆ ಪ್ರೋತ್ಸಾಹಿಸುವುದು ಕರ್ತವ್ಯವಾಗಿದೆ. ನೀತಿ ಸಂಹಿತೆಗೆ ವಿರುದ್ಧವಾದ ಯಾವುದೇ ಹೇಳಿಕೆ ನೀಡುವುದು ತನ್ನ ಉದ್ದೇಶವಲ್ಲ” ಎಂದು ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

“ತನ್ನ ಹೇಳಿಕೆಯು ಗೊಂದಲ ಸೃಷ್ಟಿಸುವ, ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಗೆ ಋಣಾತ್ಮಕ ಪರಿಣಾಮ ಬೀರುವ ದುಷ್ಕರ್ಮಿಗಳು ಮತ್ತು ಸಮಾಜ ವಿರೋಧಿಗಳನ್ನು ಉದ್ದೇಶಿಸಿ ಹೇಳಲಾಗಿದೆ” ಎಂದು ಅವರು ಆಯೋಗಕ್ಕೆ ತಿಳಿಸಿದ್ದಾರೆ. ಜೊತೆಗೆ ತಮ್ಮ ಮಾತು ತಪ್ಪಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...