Homeಮುಖಪುಟದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಾಸಕ ಇರ್ಫಾನ್ ಅನ್ಸಾರಿ ಮೇಲೆ ಕ್ರಮ ಕೈಗೊಳ್ಳಿ- ಬಿಜೆಪಿ ಸಂಸದ

- Advertisement -
- Advertisement -

ಜಾರ್ಖಂಡ್‌ನ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ದೇವಸ್ಥಾನವೊಂದರಲ್ಲಿ ಪೂಜೆ ನಡೆಸುವ ಮೂಲಕ ಹಿಂದೂ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.

ದಿಯೋಘರ್‌ನ ಬಾಬಾ ಬೈದ್ಯನಾಥ ಧಾಮ್ ದೇವಸ್ಥಾನದಲ್ಲಿ ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಪೂಜೆ ನಡೆಸಿದ್ದರು. ಇದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ನಿಶಿಕಾಂತ್ ದುಬೆ  ಬೆದರಿಕೆ ಹಾಕಿದ್ದಾರೆ.

ಅನ್ಸಾರಿ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕಾಯ್ದೆ ಪ್ರಕಾರ ಒಂದು ವರ್ಷದವರೆಗೆ ವಿಚಾರಣೆಯಿಲ್ಲದೆ ಬಂಧನದಲ್ಲಿ ಇಡಬಹುದು.

ಇರ್ಫಾನ್ ಅನ್ಸಾರಿ ಮೊದಲು ಹಿಂದೂ ಧರ್ಮವನ್ನು ಅಳವಡಿಸಿಕೊಳ್ಳಲಿ, ನಿಜವಾಗಿಯೂ ಅವರು ಶಿವನ ಭಕ್ತನಾಗಿದ್ದರೆ ನಂತರ ಪೂಜೆ ನಡೆಸಲಿ ಎಂದು ನಿಶಿಕಾಂತ್ ದುಬೆ ಹೇಳಿದ್ದಾರೆ.

ಇದನ್ನೂ ಓದಿ: ‘ಕರ್ಣನ್’ ಸಿನಿಮಾ ವಿಮರ್ಶೆ; ಘನತೆಗಾಗಿ ತಳ ಸಮುದಾಯದ ಪ್ರತಿರೋಧದ ಸೃಜನಶೀಲ ಅಭಿವ್ಯಕ್ತಿ

“ಬಾಬಾ ಬೈದ್ಯನಾಥ ಧಾಮ್ ದೇವಾಲಯದ ಗರ್ಭಗುಡಿಯಲ್ಲಿ ಮುಸ್ಲಿಮರಿಗೆ ಪ್ರವೇಶಿಸಲು ಅಥವಾ ಪೂಜೆ ನಡೆಸಲು ಅನುಮತಿ ಇಲ್ಲ. ಮಕ್ಕಾನಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆಯೇ? ಇಲ್ಲ. ಹಾಗಾಗಿ ಬೈದ್ಯನಾಥ ಧಾಮ್ ದೇವಾಲಯದಲ್ಲೂ ಮುಸ್ಲಿಮರಿಗೆ ಪೂಜೆ ಸಲ್ಲಿಸಲು ಅನುಮತಿಯಿಲ್ಲ” ಎಂದು ದುಬೆ ಹೇಳಿದ್ದಾರೆ.

’ಇದು ರಾಜಕೀಯ ವಿಷಯವಲ್ಲ ಆದರೆ, ಧಾರ್ಮಿಕ ನಂಬಿಕೆಗೆ ಸಂಬಂಧಿಸಿದೆ. ಇರ್ಫಾನ್ ಅನ್ಸಾರಿ ಉದ್ದೇಶಪೂರ್ವಕವಾಗಿ ಕೋಟಿಗಟ್ಟಲೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

“ನಾನು ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇನೆ. ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಸಂಬಂಧಪಟ್ಟ ವ್ಯಕ್ತಿಗೆ ಕಳುಹಿಸಿದ್ದೇನೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ, ಆದರೆ, ಅನ್ಸಾರಿ ಧಾರ್ಮಿಕ ಮನೋಭಾವವನ್ನು ಕೆರಳಿಸಲು ಪ್ರಯತ್ನಿಸಿದ್ದಾರೆ. ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ, ನಾನು ನ್ಯಾಯ ಕೋರಿ ನ್ಯಾಯಾಲಯಕ್ಕೆ ಹೋಗುತ್ತೇನೆ” ಎಂದಿದ್ದಾರೆ.

ದುಬೆ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅನ್ಸಾರಿ, ’ಉಪಚುನಾವಣೆಗೆ ಮುಂಚಿತವಾಗಿ ನಿಶಿಕಾಂತ್ ದುಬೆ ಅನಗತ್ಯವಾಗಿ ಕೋಮು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿದ್ದಾರೆ. ಬಾಬಾ ನಾಗ್ರಿ ನನ್ನ ಜನ್ಮಸ್ಥಳ. ನಾನು ಬಾಬಾ ಬೈದ್ಯನಾಥ್ ಧಾಮ್ ದೇವಸ್ಥಾನಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಿದ್ದೇನೆ”. ಎಂದಿದ್ದಾರೆ.

ಉಪಚುನಾವಣೆಯಲ್ಲಿ ಜಯಗಳಿಸಿದ ನಂತರ ಮತ್ತೆ ಇಲ್ಲಿಯೇ ಪೂಜೆ ಸಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. “ನನ್ನನ್ನು ಯಾರು ತಡೆಯುತ್ತಾರೆಂದು ನಾನು ನೋಡುತ್ತೇನೆ. ಶಿವ ಯಾರೊಬ್ಬರ ವೈಯಕ್ತಿಕ ಆಸ್ತಿಯಲ್ಲ. ಶಿವನ ಮೇಲೆ ನನಗೆ ನಂಬಿಕೆಯಿದೆ” ಎಂದು ಸವಾಲು ಹಾಕಿದ್ದಾರೆ.

ಸಚಿವ ಹಾಜಿ ಹುಸೇನ್ ಅನ್ಸಾರಿ ಅವರ ನಿಧನದ ನಂತರ ಮಧುಪುರ ಸ್ಥಾನ ಖಾಲಿ ಬಿದ್ದಿದೆ. ಆ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.


ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂ ಧರ್ಮವನ್ನು ತಮಗೆ ಬೇಕಾದಂತೆ ತಮ್ಮ ಅಪ್ಪನ ಮನೆ ಆಸ್ತಿ ಅನ್ನು ತರಹ ಉಪಯೋಗಿಸುವ ಈ ದುರ್ಮಾಗಿಗಳ ವಿರುದ್ಧ ಮೊದಲು ಕ್ರಮ ತೆಗೆದುಕೊಳ್ಳಬೇಕು. ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ ತಾನು ನೀಡಿದ ಹೇಳಿದ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಕೇಳಬೇಕು. ಹಿಂದೂ ಧರ್ಮ ಒಂದು ನೀಚ ಧರ್ಮವೆಂದು ಸಾರಿದಕ್ಕೂ ಕ್ಷಮೆಯಾಚಿಸಬೇಕು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...